ಕ್ರಮಕೈಗೊಳ್ಳಿ, ಇಲ್ಲವೇ ಹುದ್ದೆ ಬಿಟ್ಟು ಹೋಗಿ


Team Udayavani, Nov 3, 2018, 12:17 PM IST

kramakaigolli.jpg

ಬೆಂಗಳೂರು: ನಗರದ ಬಹುಪಾಲು ತ್ಯಾಜ್ಯ ವಿಲೇವಾರಿಯಾಗುತ್ತಿರುವ ಬೆಳ್ಳಹಳ್ಳಿ ಕ್ವಾರಿ ಮುಂದಿನ ಮೂರು ತಿಂಗಳಲ್ಲಿ ಭರ್ತಿಯಾಗಲಿದ್ದು, ನಗರದಲ್ಲಿ ತ್ಯಾಜ್ಯ ಸಮಸ್ಯೆ ಕಾಡುವ ಆತಂಕ ಎದುರಾಗಲಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಉಪಮುಖ್ಯಮಂತ್ರಿಗಳು “ತ್ಯಾಜ್ಯ ವಿಲೇವಾರಿಗೆ ಪರ್ಯಾಯ ಕ್ರಮಗಳಿಗೆ ಮುಂದಾಗಿ, ಇಲ್ಲವೆ ಹುದ್ದೆಗಳನ್ನು ಬಿಟ್ಟು ಹೋಗಿ’ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿದ ಸೂಚನೆ ಮೇರೆಗೆ ಶುಕ್ರವಾರ ಬಿಬಿಎಂಪಿಯ ಘನತ್ಯಾಜ್ಯ ವಿಭಾಗದ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ತ್ಯಾಜ್ಯ ವಿಲೇವಾರಿ ವಿಧಾನಗಳು, ಪಾಲಿಕೆಯ ಮುಂದಿರುವ ಪರ್ಯಾಯ ಮಾರ್ಗಗಳು, ಸದ್ಯ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದರು. ಈ ವೇಳೆ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, “ನಿಮ್ಮ ಕೈಯಲ್ಲಿ ಆಗದಿದ್ದರೆ ಹುದ್ದೆ ಬಿಟ್ಟು ಹೋಗಿ’ ಎಂದು ಖಾರವಾಗಿಯೇ ಹೇಳಿದ್ದಾರೆ. 

ಇದರೊಂದಿಗೆ ಯೋಜನಾ ವಿಭಾಗದಲ್ಲಿನ 13 ಸಹಾಯಕ ಎಂಜಿನಿಯರ್‌ಗಳನ್ನು ಕೂಡಲೇ ಘನತ್ಯಾಜ್ಯ ನಿರ್ವಹಣೆ ವಿಭಾಗಕ್ಕೆ ವರ್ಗಾಹಿಸುವಂತೆ ಆಯುಕ್ತರಿಗೆ ಸೂಚಿಸಿದ ಅವರು, ಒಂದೊಮ್ಮೆ ಅವರು ಹೋಗದಿದ್ದರೆ ಅವರನ್ನು ಮಾತೃ ಇಲಾಖೆಗೆ ವಾಪಾಸ್‌ ಕಳುಹಿಸಿ. ಅವರ ಬದಲಿಗೆ ಬೇರೆಯವನ್ನು ಕರೆಸಿಕೊಂಡು ಕೆಲಸ ಮಾಡಿಸಿಕೊಳ್ಳಿ ಎಂದು ಸೂಚನೆ ನೀಡಿದ್ದಾರೆ. 

ನಂತರ ಸುದ್ದಿಗೋಷ್ಠಿ ನಡೆಸಿದ ಪರಮೇಶ್ವರ್‌, ಬೆಳ್ಳಹಳ್ಳಿ ಕ್ವಾರಿ 3 ತಿಂಗಳಲ್ಲಿ ಭರ್ತಿಯಾಗಲಿದೆ. ಹೀಗಾಗಿ ತ್ಯಾಜ್ಯ ಸಮಸ್ಯೆ ಎದುರಾಗದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೈಕೋರ್ಟ್‌ ನೀಡಿರುವ ಸೂಚನೆಗಳಿಂದ ತ್ಯಾಜ್ಯ ವಿಲೇವಾರಿ ವಿಷಯದಲ್ಲಿ ದೇಶವೇ ಬೆಂಗಳೂರಿನೆಡೆಗೆ ನೋಡುವಂತಾಗಿದೆ. ಹೈಕೋರ್ಟ್‌ ನಿರ್ದೇಶನವನ್ನು ನಾನು ಸ್ವಾಗತಿಸುತ್ತೇನೆ ಎಂದರು. 

ಬಿಬಿಎಂಪಿಯಲ್ಲಿ ತ್ಯಾಜ್ಯ ನಿರ್ವಹಣೆ ಈ ಹಿಂದೆ ಹಿಡಿತಕ್ಕೆ ಸಿಕ್ಕಿರಲಿಲ್ಲ. ಆದರೀಗ ಪಾಲಿಕೆ ಹಿಡಿತಕ್ಕೆ ತೆಗೆದುಕೊಂಡಿದ್ದು, ಸಮಸ್ಯೆ ನಿವಾಸಿರುವ ಕೆಲಸ ಮಾಡಲಾಗುತ್ತಿದೆ. ನಗರದಲ್ಲಿ 1.30 ಕೋಟಿ ಜನರು ವಾಸಿಸುತ್ತಿದ್ದು, ನಿತ್ಯ 20-30 ಲಕ್ಷ ಜನರು ನಗರಕ್ಕೆ ಬಂದು ಹೋಗುತ್ತಾರೆ. ಒಂದೇ ಒಂದು ದಿನ ನಗರದಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ವ್ಯತ್ಯಯವಾದರೂ ತ್ಯಾಜ್ಯ ಸಮಸ್ಯೆ ಸೃಷ್ಟಿಯಾಗುತ್ತಿದೆ ಎಂದು ಹೇಳಿದರು. 

ಮಾರ್ಷಲ್‌ ನೇಮಕ, ದಂಡ ಹೆಚ್ಚಳ: ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದು ಬ್ಲಾಕ್‌ಸ್ಪಾಟ್‌ ಸೃಷ್ಟಿಸುತ್ತಿದ್ದು, ಅದನ್ನು ತಡೆಯುವ ಉದ್ದೇಶದಿಂದ ವಾರ್ಡ್‌ ಒಬ್ಬರಂತೆ ಮಾರ್ಷಲ್‌ ನೇಮಿಸಿಕೊಳ್ಳಲಾಗುವುದು. ಜತೆಗೆ ದಂಡದ ಮೊತ್ತವನ್ನು 100 ರೂ.ಗಳಿಂದ 500 ರೂ.ಗೆ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರಕ್ಕೆ ಕಳುಹಿಸಿದ್ದು, ಶೀಘ್ರದಲ್ಲಿಯೇ ಅನುಮೋದನೆ ನೀಡಲಾಗುವುದು. ಜತೆಗೆ ಘನತ್ಯಾಜ್ಯ ನಿರ್ವಹಣಾ ಘಟಕ ನಿರ್ಮಿಸಲು ಉದ್ದೇಶಿಸಿದ್ದು, ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರಂತೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌, ಹಿರಿಯ ಆರೋಗ್ಯ ಪರಿವೀಕ್ಷಕರು, ಪ್ರತಿವಾರ್ಡ್‌ಗೆ ಇಬ್ಬರಿಂದ ಮೂವರಂತೆ ಸ್ಯಾನಿಟಿರಿ ದಫೇದಾರ್‌ಗಳನ್ನು ನೇಮಿಸಲಾಗುವುದು ಎಂದರು. 

ಟೆರ್ರಾಫಾರ್ಮ್ಗೆ ಮತ್ತೆ ಕಸ: ದೊಡ್ಡಬಳ್ಳಾಪುರದ ಬಳಿಯ ಟೆರ್ರಾಫಾರ್ಮ್ ಘಟಕಕ್ಕೆ ಸ್ಥಳೀಯರ ವಿರೋಧದಿಂದ 2014-15ರಲ್ಲಿ ತ್ಯಾಜ್ಯ ವಿಲೇವಾರಿ ಸ್ಥಗಿತಗೊಳಿಸಲಾಗಿತ್ತು. ಆದರೆ, ಬೆಳ್ಳಹಳ್ಳಿ ಕ್ವಾರಿ ಭರ್ತಿಯಾದ ಬಳಿಕ ತ್ಯಾಜ್ಯ ಅಲ್ಲಿಗೆ ಕಳುಹಿಸಲು ಸರ್ಕಾರ ಚಿಂತನೆ ನಡೆಸಿದೆ. ಅಲ್ಲಿರುವ 150 ಎಕರೆಯಲ್ಲಿ ಆಧುನಿಕ ತಂತ್ರಜ್ಞಾನದ ಯಂತ್ರಗಳನು ಬಳಸಿ ತ್ಯಾಜ್ಯ ವಿಲೇವಾರಿಗೆ ಮಾಡಲಾಗುವುದು ಎಂದ ಪರಮೇಶ್ವರ್‌, ಬಿಡದಿ ಬಳಿ 15 ಎಕರೆ ಜಾಗದಲ್ಲಿ ಬೆಸ್ಕಾಂ ಜತೆ ತ್ಯಾಜ್ಯದಿಂದ ವಿದ್ಯುತ್‌ ಉತ್ಪಾದನಾ ಘಟಕ ನಿರ್ಮಾಣ ಶೀಘ್ರದಲ್ಲಿಯೆ ಆರಂಭವಾಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.