ಸೌಲಭ್ಯ ಪಡೆದು ಸದೃಢರಾಗಿ
Team Udayavani, Aug 13, 2018, 12:40 PM IST
ಕೆಂಗೇರಿ: ಸರ್ಕಾರ ವಿವಿಧ ಯೋಜನೆಯಡಿ ರೈತರಿಗೆ ಹಲವಾರು ಸವಲತ್ತು ಕಲ್ಪಿಸಿದ್ದು, ಇವುಗಳ ಸದುಪಯೋಗಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಶಾಸಕ ಎಸ್.ಟಿ.ಸೋಮಶೇಖರ್ ಸಲಹೆ ನೀಡಿದರು.
ರಾಮೋಹಳ್ಳಿಯಲ್ಲಿ ಕೃಷಿ ಇಲಾಖೆ ಅಯೋಜಿಸಿದ್ದ ಸಮಗ್ರ ಕೃಷಿ ಅಭಿಯಾನ-ಇಲಾಖೆಗಳ ನಡಿಗೆ ರೈತರ ಬಾಗಿಲಿಗೆ, ಕೃಷಿ ವಸ್ತು ಪ್ರದರ್ಶನ ಹಾಗೂ ರೈತವಿಜ್ಞಾನಿ ಜತೆ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಹಾದಿ ಹಿಡಿಯಬಾರದು. ಸರ್ಕಾರ ರೈತರ ಪರವಾಗಿದ್ದು, ಸಾಲಮನ್ನಾ ಮತ್ತಿತರ ಯೋಜನೆಗಳ ಮೂಲಕ ನಿಮ್ಮ ಹಿತಕಾಯಲು ಬದ್ಧವಾಗಿದೆ ಎಂದರು.
ರಾಮೋಹಳ್ಳಿ ಗ್ರಾಪಂ ಅಧ್ಯಕ್ಷೆ ರೂಪಾ ಮಾತನಾಡಿದರು. ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಶ್ವೇತಾ, ಕೆಂಗೇರಿ ಹೋಬಳಿ ಕೃಷಿ ಅಧಿಕಾರಿ ಪದ್ಮಾವತಿ, ಕೃಷಿಕ ಸಮಾಜದ ಅಧ್ಯಕ್ಷ ಗೋಪಾಲಕೃಷ್ಣ ಗೌಡ, ಟಿ.ನಾರಾಯಣಪ್ಪ, ರಾಮೋಹಳ್ಳಿ ಡೇರಿ ಅಧ್ಯಕ್ಷ ವಿ.ವೇಣುಗೋಪಾಲ್, ದೇವರಾಜು, ನಾಗರಾಜು, ಜಯಣ್ಣ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ