ಸ್ನೇಹದ ಬದಲು ಪ್ರತೀಕಾರ ತೀರಿಸಿಕೊಳ್ಳಿ
Team Udayavani, Feb 19, 2019, 12:30 AM IST
ಬೆಂಗಳೂರು: ಪಾಕಿಸ್ತಾನಕ್ಕೆ ಹೋಗಿ ಚಹಾ ಕುಡಿದು ಬಂದು, ಭಾರತಕ್ಕೆ ಬಂದವರಿಗೆ ಸೀರೆ ಕೊಟ್ಟು ಕಳುಹಿಸುವ ಬದಲು
ಕೇಂದ್ರ ಸರ್ಕಾರ ಪಾಕಿಸ್ತಾನದ ವಿರುದಟಛಿ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು ನಗರಾಭಿವೃದ್ದಿ ಸಚಿವ ಯು.ಟಿ. ಖಾದರ್ ಆಗ್ರಹಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಉಗ್ರರ ದಾಳಿಯನ್ನು ಸಹಿಸಲು ಸಾಧ್ಯವಿಲ್ಲ. ನಾವು ಅವರ ವಿರುದ್ದ ಪ್ರತೀಕಾರ ತೀರಿಸಿಕೊಳ್ಳಬೇಕಿದೆ. ಈ ವಿಷಯದಲ್ಲಿ ನಾವು ಕೇಂದ್ರ ಸರ್ಕಾರದ ಜತೆ ನಿಲ್ಲುತ್ತೇವೆ. ಕೇಂದ್ರ ಸರ್ಕಾರ ಕೂಡ ಕಠೊರ ನಿಲುವು ತೆಗೆದುಕೊಳ್ಳಬೇಕೆಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ದೇಶದ ಒಗ್ಗಟ್ಟು ಅತ್ಯಂತ ಮುಖ್ಯ. ಉಗ್ರರು ಕೇವಲ ನಮ್ಮ ದೇಶದ ಸೈನಿಕರ ಮೇಲೆ ದಾಳಿ ಮಾಡಿಲ್ಲ. ಇದು ಇಡೀ ದೇಶದ ಮೇಲೆ ಆಗಿರುವ ದಾಳಿ. ಇದನ್ನು ತೀವ್ರವಾಗಿ ಖಂಡಿಸಬೇಕು ಎಂದರು.