ನಾಯಿ ಹಾವಳಿ ತಪ್ಪಿಸುವ ಬಗ್ಗೆ ಚರ್ಚೆ


Team Udayavani, Oct 29, 2018, 12:06 PM IST

bidi-nayi.jpg

ಬೆಂಗಳೂರು: ನಗರದಲ್ಲಿ ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಶೀಘ್ರದಲ್ಲಿಯೇ ಪ್ರಾಣಿದಯಾ ಸಂಘ-ಸಂಸ್ಥಗಳೊಂದಿಗೆ ಚರ್ಚಿಸಲಾಗುವುದು ಎಂದು ಮೇಯರ್‌ ಗಂಗಾಂಬಿಕೆ ತಿಳಿಸಿದ್ದಾರೆ. 

ಜಾಗತಿಕ ಲಿಂಗಾಯತ ಮಹಾಸಭಾದ ವತಿಯಿಂದ ನಗರದಲ್ಲಿ ಭಾನುವಾರ ಗಂಗಾಂಬಿಕೆ ಅವರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮಹಾಸಭಾ ಪ್ರಧಾನ ಕಾರ್ಯದರ್ಶಿಯವರು ಮಾತನಾಡುತ್ತಾ, ನಗರದಲ್ಲಿ ಬೀದಿ ನಾಯಿ ಹಾವಳಿ ಹೆಚ್ಚಾಗಿದೆ. ಜತೆಗೆ ಪಾಲಿಕೆಯ ಅಧಿಕಾರಿಗಳು ಸಂತಾನಹರಣ ಶಸ್ತ್ರಚಿಕಿತ್ಸೆ  (ಎಬಿಸಿ) ನಡೆಸಿದ ಬಳಿಕ ನಾಯಿಗಳ ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿಲ್ಲ ಎಂದು ಗಮನ ಸೆಳೆದರು. 

ಪಾಲಿಕೆಯ ವ್ಯಾಪ್ತಿಯಲ್ಲಿ ನಾಯಿಗಳ ಉಪಳಟ ಹೆಚ್ಚಾಗಿದ್ದು, ಇತ್ತೀಚೆಗೆ ವಿಭೂತಿಪುರದಲ್ಲಿ 11 ವರ್ಷ ಬಾಲಕನೊಬ್ಬ ಬೀದಿ ನಾಯಿ ದಾಳಿಯಿಂದಾಗಿ ಸಾವನ್ನಪ್ಪಿದ್ದಾನೆ. ನಿತ್ಯ ಒಂದಿಲ್ಲೊಂದು ಭಾಗದಲ್ಲಿ ನಾಯಿ ದಾಳಿ ಪ್ರಕರಣಗಳಾಗುತ್ತಿದ್ದು, ಜಾಗತಿಕ ಮಟ್ಟದಲ್ಲಿ ಬೆಂಗಳೂರಿನ ಖ್ಯಾತಿಗೆ ಚ್ಯುತಿ ಉಂಟಾಗುತ್ತಿದೆ. ಹೀಗಾಗಿ ಗೋಶಾಲೆಗಳ ಮಾದರಿಯಲ್ಲಿ ಶ್ವಾನ ಶಾಲೆಗಳನ್ನು ನಗರದ ನಾಲ್ಕು ದಿಕ್ಕುಗಳಲ್ಲಿ ತೆರೆಯಬೇಕು ಎಂದು ಕೋರಿದ್ದಾರೆ ಎನ್ನಲಾಗಿದೆ.

ಅದಕ್ಕೆ ಸ್ಪಂದಿಸಿದ ಮೇಯರ್‌, ಶೀಘ್ರದಲ್ಲಿಯೇ ಪ್ರಾಣಿದಯಾ ಸಂಘಗಳ ಪದಾಧಿಕಾರಿಗಳ ಸಭೆ ಕರೆಯಲಾಗುವುದು. ಜತೆಗೆ ನಾಯಿ ಹಾವಳಿ ತಪ್ಪಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಚರ್ಚೆ ನಡೆಸಲಾಗುವುದು. ಒಂದೊಮ್ಮೆ ಅಗತ್ಯ ಬಿದ್ದರೆ ಹೊರ ವಲಯದಲ್ಲಿ ನಾಯಿಗಳಿಗೆ ಸೌಲಭ್ಯ ಕಲ್ಪಿಸುವ ಕುರಿತಂತೆ ಚಿಂತನೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ನಾಯಿಯನ್ನು ಕೂಡಿ ಹಾಕುವಂತಿಲ್ಲ: ಮೇಯರ್‌ ಪ್ರಾಣಿದಯಾ ಸಂಘಟನೆಗಳೊಂದಿಗೆ ಈ ಕುರಿತು ಚರ್ಚಿಸುವುದಾಗಿ ತಿಳಿಸಿದ್ದರೂ, ನಾಯಿಗಳನ್ನು ಕೂಡಿ ಹಾಕಲು ನಾಯಿದೊಡ್ಡಿಗಳನ್ನು ನಿರ್ಮಿಸಲು ಅವಕಾಶವಿಲ್ಲ. ಸುಪ್ರೀಂ ಕೋರ್ಟ್‌ನ ಆದೇಶದಂತೆ ನಾಯಿಗಳಿಗೆ ಎಬಿಸಿ ನಡೆಸಿದ ನಂತರ 72 ಗಂಟೆ ಮಾತ್ರ ನಾಯಿ ದೊಡ್ಡಿಗಳಲ್ಲಿ ಇರಿಸಿಕೊಳ್ಳಬಹುದಾಗಿದೆ. ಉಳಿದಂತೆ ಯಾವುದೇ ಕಾರಣಕ್ಕೂ ನಾಯಿಗಳನ್ನು ಕೂಡಿ ಹಾಕುವಂತಿಲ್ಲ ಎಂದು ಪ್ರಾಣಿ ದಯಾ ಸಂಘಗಳು ತಿಳಿಸಿವೆ.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.