ಕಾನೂನು ತಜ್ಞರೊಂದಿಗೆ ಸಿಎಂ ಚರ್ಚೆ?
Team Udayavani, Nov 8, 2018, 6:35 AM IST
ಬೆಂಗಳೂರು:ಎಸ್ಸಿ -ಎಸ್ಟಿ ನೌಕರರ ಮುಂಬಡ್ತಿ ಸಂಬಂಧ ವಿಶೇಷ ಕಾಯ್ದೆ ಜಾರಿಗೊಳಿಸುವ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳವಾರ ಸುಪ್ರೀಂ ಕೋರ್ಟ್ ನ್ಯಾಯವಾದಿ ಬಸವಪ್ರಭು ಹಾಗೂ ಅಡ್ವಕೇಟ್ ಜನರಲ್ ಉದಯ್ ಹೊಳ್ಳ ಹಾಗೂ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆ ಕಾರ್ಯದರ್ಶಿ ಪ್ರತ್ಯೇಕ ಸಭೆ ನಡೆಸಿದ್ದಾರೆ ಎಂದು ಹೇಳಲಾಗಿದೆ. ಆದರೆ, ಮುಖ್ಯಮಂತ್ರಿಯವರ ಕಚೇರಿ ಮೂಲಗಳು ಇದನ್ನು ನಿರಾಕರಿಸಿ ಅಂತಹ ಯಾವುದೇ ಸಭೆ ನಡೆದಿಲ್ಲ ಎಂದು ತಿಳಿಸಿದೆ.
ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹಾಗೂ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿಯೇ ಇದ್ದರೂ ಮುಖ್ಯಮಂತ್ರಿಯವರು ನಡೆಸಿದ ಸಭೆಗೆ ಆಹ್ವಾನ ಇರಲಿಲ್ಲ . ಈ ಬೆಳವಣಿಗೆಯ ನಂತರ ಡಾ.ಜಿ.ಪರಮೇಶ್ವರ್ ಹಾಗೂ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಪ್ರತ್ಯೇಕ ಸಭೆ ನಡೆಸಿದರು. ರಾಜ್ಯ ಎಸ್ಸಿ- ಎಸ್ಟಿ ನೌಕರರು ಇದೇ ಸಂದರ್ಭದಲ್ಲಿ ಪರಮೇಶ್ವರ್ ಭೇಟಿ ಮಾಡಿ ಸರ್ಕಾರದ ನಿರ್ಧಾರ ಸ್ಪಷ್ಟ ಪಡಿಸುವಂತೆ ಒತ್ತಡ ಹೇರಿದರು ಎಂದು ಹೇಳಲಾಗಿದೆ.
ಪ್ರತ್ಯೇಕ ಸಭೆಯ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಮುಖ್ಯಮಂತ್ರಿಯವರು ಸಭೆ ನಡೆಸಿರುವ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ನಮ್ಮನ್ನು ಸಭೆಗೆ ಕರೆಯಬೇಕು ಎಂದಿದ್ದರೆ ಮೊದಲೇ ಹೇಳುತ್ತಿದ್ದರು. ಕಾನೂನು ತಜ್ಞರನ್ನು ಏಕೆ ಕರೆಸಿದ್ದರೋ, ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ ಎಂದು ಹೇಳಿದರು.
ಎಸ್ಸಿ -ಎಸ್ಟಿ ನೌಕರರ ಸಂಘದ ಅಧ್ಯಕ್ಷ ಶಿವಶಂಕರ್, ರಾಜ್ಯ ಸರ್ಕಾರ ಮಂಡಿಸಿದ್ದ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ರಾಜ್ಯ ಸರ್ಕಾರ ಮಾರ್ಗಸೂಚಿ ಅನುಸರಿಸುವಲ್ಲಿ ಮೀನ ಮೇಷ ಎಣಿಸುತ್ತಿದೆ. ಪರಮೇಶ್ವರ್ ಹಾಗೂ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿಯೇ ಇರುವಾಗ ಅವರ ಗಮನಕ್ಕೆ ತಾರದೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಭೆ ನಡೆಸಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ