ಚಪ್ಪಾಳೆ ತಟ್ಟಿ ಅಭಿನಂದನೆ


Team Udayavani, Mar 23, 2020, 3:05 AM IST

chappale

ಬೆಂಗಳೂರು: ಜನತಾ ಕರ್ಫ್ಯೂಗೆ ನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಜನ ಸ್ವಯಂಪ್ರೇರಿತವಾಗಿ ಬಾಗಿಲು ಮತ್ತು ಬಾಲ್ಕನಿ ಬಳಿ ನಿಂತು ವೈದ್ಯರು, ಪೌರ ಕಾರ್ಮಿಕರು, ಪೊಲೀಸರು ಹಾಗೂ ಸೈನಿಕರ ಸೇವೆಗೆ ಚಪ್ಪಾಳೆ ತಟ್ಟುವ ಮೂಲಕ ಅಭಿನಂದನೆ ಸಲ್ಲಿಸಿದರು.

ಬೆಳಗ್ಗೆ ಎಂಟು ಗಂಟೆಯಿಂದಲೇ ನಗರದ ಎಪಿಎಂಸಿ, ಕೆ.ಆರ್‌. ಮಾರುಕಟ್ಟೆ, ಶಿವಾಜಿನಗರ, ಯಶವಂತಪುರ ಮಾರುಕಟ್ಟೆಗಳು, ಮೆಜೆಸ್ಟಿಕ್‌ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಜನಸಂಚಾರ ಇರಲಿಲ್ಲ. ಬೆಳಗ್ಗೆ 7 ಗಂಟೆಯೊಳಗೆ ಹಾಲು, ಹಣ್ಣು, ತರಕಾರಿ ಸೇರಿದಂತೆ ಮತ್ತಿತರ ಅಗತ್ಯ ವಸ್ತುಗಳ ಖರೀದಿಗೆ ಜನ ಮುಗಿಬಿದ್ದ ದೃಶ್ಯ ಕಂಡುಬಂತು. ಔಷಧ, ಹಾಲು, ಪತ್ರಿಕೆ, ಸರ್ಕಾರಿ ಆಸ್ಪತ್ರೆಗಳ ಸೇವೆಗಳು ಲಭ್ಯವಿದ್ದು, ಪಟ್ರೋಲ್‌ ಬಂಕ್‌ ಗಳು ಎಂದಿನಿಂತೆ ಕಾರ್ಯನಿರ್ವಹಿಸಿದವು. ಬಸ್‌, ಆಟೋ, ಟ್ಯಾಕ್ಸಿ, ಕ್ಯಾಬ್‌, ಸರಕು ಸಾಗಣೆ ವಾಹನಗಳ ಸಂಚಾರ ಸಹ ಸ್ಥಗಿತವಾಗಿತ್ತು.

ಬಿಜೆಪಿ ಕಚೇರಿ ಎದುರು ಚಪ್ಪಾಳೆ, ಜಾಗಟೆ ಬಡಿದು ನಮನ: ಕೊರೊನಾ ವೈರಸ್‌ ತಡೆಗಟ್ಟುಲು ಶ್ರಮಿಸುತ್ತಿರುವವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವ ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ವೈದ್ಯರು ,ಮಾಧ್ಯಮದವರು, ಪೊಲೀಸರು ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿ ಸೇವೆಗೆ ಚಪ್ಪಾಳೆ ಮತ್ತು ಜಾಗಟೆಗಳ ಮೂಲಕ ರಾಜ್ಯ ಬಿಜೆಪಿ ಕಾರ್ಯಾಲಯದ ಎದುರು ಅಭಿನಂದನೆ ಸಲ್ಲಿಸಲಾಯಿತು. ಈ ವೇಳೆ ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಷಿ ಅರುಣ್‌ ಕುಮಾರ್‌, ಎನ್‌ ರವಿಕುಮಾರ್‌ ಮತ್ತು ಕಾರ್ಯಕರ್ತರು ಚಪ್ಪಾಳೆ, ಜಾಗಟೆ ಬಾರಿಸುವ ಮೂಲಕ ಅಭಿನಂದನೆ ಸಲ್ಲಿಸಿದರು.

ಒಂದೇ ದಿನಕ್ಕೆ 2,500 ಕೋಟಿ ನಷ್ಟ?: ರಾಜ್ಯ ಸ್ತಬ್ಧವಾಗಿದ್ದರಿಂದ ಒಂದೇ ದಿನದಲ್ಲಿ ನಾಲ್ಕು ಸಾವಿರ ಕೋಟಿ ರೂ. ನಷ್ಟವಾಗಿದ್ದು, ಈ ಪೈಕಿ ಬೆಂಗಳೂರಿನ ಪಾಲು 2,500 ಕೋಟಿ ರೂ. ಆಗಿದೆ. ದೇಶದ ವಾರ್ಷಿಕ ವರಮಾನ 2,05 ಕೋಟಿ ಕೋಟಿ ರೂ. ಆಗಿದ್ದು, ಇದನ್ನು ವರ್ಷದ 365 ದಿನಕ್ಕೆ ಹೋಲಿಸಿದರೆ, ಒಂದು ದಿನ ದೇಶ ಬಂದ್‌ ಆಚರಿಸಿದರೆ 60 ಸಾವಿರ ಕೋಟಿ ರೂ. ನಷ್ಟವಾಗುತ್ತದೆ. ಇದರಲ್ಲಿ ಹತ್ತು ಸಾವಿರ ಕೋಟಿ ರೂ. ಅಗತ್ಯ ಸೇವೆಗಳಿಂದ ಬರಬಹುದು.

ಆದರೆ, ಉಳಿದ 50 ಸಾವಿರ ಕೋಟಿಯಂತೂ ನಷ್ಟ ಆಗಿಯೇ ಆಗುತ್ತದೆ. ಇನ್ನು ಕರ್ನಾಟಕದ ಲೆಕ್ಕಹಾಕಿದರೆ, ಇದು ಪಾವತಿಸುವ ತೆರಿಗೆ ಆಧಾರದ ಮೇಲೆ ನಿತ್ಯ ಸುಮಾರು 4,362 ಕೋಟಿ ರೂ. ಆಗುತ್ತದೆ. ಒಮ್ಮೆ ಯಶಸ್ವಿ ಬಂದ್‌ ಆಚರಣೆಯಾದರೆ, ಅಗತ್ಯ ಸೇವೆಗಳಿಂದ ಬರುವ ಆದಾಯ ಹೊರತುಪಡಿಸಿ ಸುಮಾರು 3,800ರಿಂದ 4,000 ಕೋಟಿ ನಷ್ಟ ಆಗುತ್ತದೆ. ಈ ನಷ್ಟ ಇನ್ನೂ ಹೆಚ್ಚು-ಕಡಿಮೆ ಹತ್ತು ದಿನಗಳು ಇರಲಿದೆ. ಅಲ್ಪಾವಧಿಗೆ ಈ ಕೊರತೆ ಕಂಡುಬಂದರೂ, ಅರ್ಥವ್ಯವಸ್ಥೆ ಮೇಲೆ ದೀರ್ಘಾವಧಿ ಪರಿಣಾಮ ಬೀರಲಿದೆ ಎಂದು ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಅಸೋಚಾಮ) ಕರ್ನಾಟಕ ಘಟಕದ ಅಧ್ಯಕ್ಷ ಸಂಪತ್‌ ರಾಮನ್‌ ತಿಳಿಸುತ್ತಾರೆ.

ರಾಜ್ಯ ಸರ್ಕಾರಕ್ಕೆ ಜಿಎಸ್‌ಟಿ ಮತ್ತು ಸೇವಾ ತೆರಿಗೆಯೇ ಮೂಲಾಧಾರವಾಗಿದ್ದು, ಶೇ. 60-65ರಷ್ಟು ಬೆಂಗಳೂರಿನಿಂದಲೇ ತೆರಿಗೆ ಸಂಗ್ರಹವಾಗಲಿದೆ. ಆರ್ಥಿಕ ಎಂಜಿನ್‌ ಸ್ಥಗಿತಗೊಂಡಿದ್ದರಿಂದ ಈ ತಿಂಗಳ ತೆರಿಗೆಯಲ್ಲಿ ಭಾರಿ ಪ್ರಮಾಣದ ಖೋತಾ ಆಗಲಿದೆ. ಕೊರೊನಾ ವೈರಸ್‌ ಭೀತಿಯಿಂದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ಬೃಹತ್‌ ಕೈಗಾರಿಕೆಗಳಿಗೆ ಭಾರೀ ಹೊಡೆತ ಬಿದ್ದಿದ್ದು, ಆರ್ಥಿಕತೆ ಮೇಲೆ ನೇರ ಪರಿಣಾಮ ಬೀರಿದೆ ಎಂದು ರಾಜ್ಯ ಜಿಎಸ್‌ಟಿ ಜಿಆರ್‌ಸಿ ಸದಸ್ಯ ಬಿ.ಟಿ. ಮನೋಹರ್‌ ತಿಳಿಸಿದ್ದಾರೆ.

ಇಂದು ಕೂಡ ಬಂದ್‌?: ಕೊರೊನ ವೈರಸ್‌ ನಿಯಂತ್ರಣಕ್ಕಾಗಿ ಕೈಜೋಡಿಸಿರುವ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಸಾರಿಗೆ ಸಂಸ್ಥೆಗಳು ಸೋಮವಾರ ಕೂಡ ಬಸ್‌ಗಳನ್ನು ರಸ್ತೆಗಿಳಿಸದಿರಲು ನಿರ್ಧರಿಸಿವೆ. ಕೆಎಸ್‌ಆರ್‌ಟಿಸಿ ವ್ಯಾಪ್ತಿಯಲ್ಲಿ ಸೋಮವಾರ ಯಾವುದೇ ಬಸ್‌ ಸೇವೆ ಇರುವುದಿಲ್ಲ. ಅಲ್ಲದೆ, ಆರೋಗ್ಯ ಇಲಾಖೆ ಸೂಚಿಸಿರುವ ಒಂಬತ್ತು ಜಿಲ್ಲೆಗಳಲ್ಲಿ ಅಂತರಜಿಲ್ಲಾ ಬಸ್‌ ಸೇವೆ ಕೂಡ ಇರುವುದಿಲ್ಲ. ಬಿಎಂಟಿಸಿಯಿಂದ ಕೇವಲ ಶೇ. 50ರಷ್ಟು ಬಸ್‌ ಸೇವೆ ಇರಲಿದೆ.

ಅದೇ ರೀತಿ, ಬೆಂಗಳೂರಿನಿಂದ ಶನಿವಾರ ರಾತ್ರಿ ಪ್ರಯಾಣಿಸಿದ್ದ ಖಾಸಗಿ ಬಸ್‌ಗಳು, ಮಂಗಳೂರು, ಕುಂದಾಪುರ, ಹುಬ್ಬಳ್ಳಿ, ಬೆಳಗಾವಿ ಸೇರಿ ಜಿಲ್ಲಾ ಕೇಂದ್ರಗಳಲ್ಲೇ ಇವೆ. ಸೋಮವಾರ ಕೂಡ ಯಾವುದೇ ಖಾಸಗಿ ಬಸ್‌ಗಳು ಕಾರ್ಯಾಚರಣೆ ಮಾಡುವುದಿಲ್ಲ ಎಂದು ವಿವಿಧ ಖಾಸಗಿ ಟ್ರಾವೆಲ್‌ ಮಾಲಿಕರು ತಿಳಿಸಿದ್ದಾರೆ. “9 ಜಿಲ್ಲೆಗಳಲ್ಲಿ ವಾಣಿಜ್ಯ ವಹಿವಾಟು ಬಂದ್‌ ಮಾಡಿರುವ ಕಾರಣ ಪ್ರವಾಸಿ ಟ್ಯಾಕ್ಸಿ ಸಂಚಾರ ಕೂಡ ಸೋಮವಾರ ಸ್ಥಗಿತವಾಗಲಿದೆ.

ಕಳೆದ 15 ದಿನಗಳಿಂದ ಬಹುತೇಕ ಪ್ರವಾಸಿ ಟ್ಯಾಕ್ಸಿಗಳ ಸಂಚಾರ ಸ್ಥಗಿತಗೊಂಡಿದೆ. ಕೋವಿಡ್‌-19 ಹಿಮ್ಮೆಟ್ಟಿಸಲು ಸರ್ಕಾರ ಕೈಗೊಳ್ಳುವ ನಿರ್ಧಾರಗಳಿಗೆ ಕೈಜೋಡಿಸುತ್ತೇವೆ’ ಎಂದು ಕರ್ನಾಟಕ ರಾಜ್ಯ ಟ್ರಾವಲ್‌ ಆಪರೇಟರ್ ಸಂಘ ಅಧ್ಯಕ್ಷ ಕೆ. ರಾಧಾಕೃಷ್ಣ ಹೊಳ್ಳ ತಿಳಿಸಿದ್ದಾರೆ. “ಐಟಿ ಕಂಪನಿಗಳ ಉದ್ಯೋಗಿಗಳು ಮನೆ ಯಲ್ಲೇ ಕೆಲಸ ಮಾಡಲು ಸೂಚಿಸಿರುವ ಕಾರಣ ಮ್ಯಾಕ್ಸಿಕ್ಯಾಬ್‌ಗಳ ಸಂಚಾರ 15 ದಿನಗಳಿಂದ ವಿರಳವಾಗಿದೆ.

ಸರ್ಕಾರದ ನಿರ್ದೇಶನದಂತೆ ಸೋಮವಾರ ಯಾವುದೇ ಮ್ಯಾಕ್ಸಿ ಕ್ಯಾಬ್‌ ಸಂಚಾರ ಇರುದಿಲ್ಲ’ ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಖಾಸಗಿ ಸಾರಿಗೆ ವಾಹನ ಮಾಲೀಕರ ಸಂಘದ ಅಧ್ಯಕ್ಷ ಭೈರವ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸರಕು-ಸಾಗಣೆ ಲಾರಿಗಳ ಸಂಚಾರ ಕೂಡ ಸೋಮವಾರ ಸ್ಥಗಿತಗೊಳಿಸಲಾಗುತ್ತಿದೆ. ಹಾಲು, ಅಡಿಗೆ ಅನಿಲ, ಪೆಟ್ರೋಲ್-ಡೀಸೆಲ್‌ ಸಾಗಣೆ ಹೊರತುಪಡಿಸಿ ಬೇರೆ ಸರಕು ಸಾಗಣೆ ಇರುವುದಿಲ್ಲ. ಸರ್ಕಾರ ನಿರ್ದೇಶನ ನೀಡಿದರೆ, ಇನ್ನಷ್ಟು ದಿನ ಬಂದ್‌ ಮುಂದುವರಿಸಲಾಗು ವುದು ಎಂದು ರಾಜ್ಯ ಲಾರಿ ಮಾಲಿಕರು ಮತ್ತು ಏಜೆಂಟರ ಒಕ್ಕೂಟದ ಅಧ್ಯಕ್ಷ ಜಿ.ಆರ್‌. ಷಣ್ಮುಗಪ್ಪ ತಿಳಿಸಿದರು.

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.