ಕಟ್ಟಡಗಳ ಪರಿಶೀಲನೆಗೆ ತಂಡ
Team Udayavani, Sep 10, 2019, 3:05 AM IST
ಬೆಂಗಳೂರು: ಬಿಬಿಎಂಪಿ ಎಲ್ಲ ಎಂಟು ವಲಯಗಳಲ್ಲಿರುವ ಶಿಥಿಲ ಕಟ್ಟಡಗಳ ಬಗ್ಗೆ ಪರಿಶೀಲನೆ ಮಾಡುವ ಸಂಬಂಧ ನಗರ ಯೋಜನಾ ಹಾಗೂ ವಲಯ ಮಟ್ಟದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಂಡ ರಚಿಸಲು ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಸೂಚನೆ ನೀಡಿದ್ದಾರೆ.
ಭಾನುವಾರ ಸಂಜೆ ಬನಶಂಕರಿಯ 7ನೇ ಹಂತದ ಪುಟ್ಟೇನಹಳ್ಳಿಯ ವಿವೇಕಾನಂದ ಕಾಲೋನಿಯಲ್ಲಿ ಮೂರು ಅಂತಸ್ತಿನ ಕಟ್ಟಡ ಕುಸಿತದ ಸ್ಥಳಕ್ಕೆ ಮೇಯರ್ ಗಂಗಾಂಬಿಕೆ ಅವರ ಜತೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬಿಬಿಎಂಒಪಿ ವ್ಯಾಪ್ತಿಯ ಎಲ್ಲ ವಲಯಗಳಲ್ಲಿ ಪ್ರತ್ಯೇಕ ತಂಡ ರಚಿಸಿ ಅವಧಿ ಮೀರಿದ, ಭಾಗಶಃ ಕುಸಿತ ಉಂಟಾಗಿರುವ ಕಟ್ಟಡಹಾಗೂ ಶಿಥಿಲಗೊಂಡ ಸ್ಥಿತಿಯಲ್ಲಿರುವ ಕಟ್ಟಡಗಳ ಬಗ್ಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಬೀಳುವ ಸ್ಥಿತಿಯಲ್ಲಿರುವ ಕಟ್ಟಡಗಳಲ್ಲಿ ವಾಸಿಸುತ್ತಿರುವವರು ಮತ್ತು ಕಟ್ಟಡಗಳ ಮಾಲೀಕರಿಗೆ ಸೂಚನೆ ನೀಡಿ, ಕಟ್ಟಡಗಳ ಸುರಕ್ಷತೆ ಕುರಿತು ತಜ್ಞರಿಂದ ತಪಾಸಣೆ ವರದಿ ಸಿದ್ಧಪಡಿಸಿಕೊಂಡು ಹಾಗೂ ದುರಸ್ಥಿಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಶಿಥಿಲಾ ವಸ್ಥೆಯಲ್ಲಿರುವ ಕಟ್ಟಡಗಳು° ದುರಸ್ಥಿ ಮಾಡಲು ಮಾಲೀಕರಿಗೆ ನೋಟಿಸ್ ಜಾರಿ ಮಾಡಲು ಹಾಗೂ ತೀರಾ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಕೂಡಲೇ ತೆರವುಗೊಳಿಸಲು ಕಟ್ಟಡದಲ್ಲಿ ವಾಸ ಇರುವವರಿಗೆ ಹಾಗೂ ಕಟ್ಟಡದ ಮಾಲಿಕರಿಗೆ ನೋಟಿಸ್ ಜಾರಿ ಮಾಡುವುದಕ್ಕೆ ಸೂಚನೆ ನೀಡಲಾಗಿದೆ. ಇಲ್ಲವಾದರೆ ಕೆಎಂಸಿ ಕಾಯ್ದೆ ಅನ್ವಯ ಅವರನ್ನು ಕಟ್ಟಡದಿಂದ ತೆರವುಗೊಳಿಸಿ, ಮಾಲೀಕರ ಖರ್ಚಿನಲ್ಲೇ ಕಟ್ಟಡವನ್ನು ನೆಲಸಮಗೊಳಿಸಲು ಕ್ರಮವಹಿಸುವಂತೆ ತಿಳಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!