ಟಿಇಸಿ ಅವ್ಯವಹಾರ ಎಸಿಬಿ ತನಿಖೆಗೆ


Team Udayavani, Oct 15, 2019, 3:07 AM IST

BSY1

ಬೆಂಗಳೂರು: ಬಿಬಿಎಂಪಿಯ ರಸ್ತೆ ಮೂಲ ಸೌಕರ್ಯ ಅಭಿವೃದ್ಧಿ ವಿಭಾಗದ ಅಂಗ ಸಂಸ್ಥೆಯಾದ ಟ್ರಾಫಿಕ್‌ ಎಂಜಿನಿಯರಿಂಗ್‌ ವಿಭಾಗವು 2017-18 ಮತ್ತು 2019-20ನೇ ಸಾಲಿನಲ್ಲಿ ನಿರ್ವಹಿಸಿರುವ ಕಾಮಗಾರಿಗಳಲ್ಲಿ ಕೋಟ್ಯಂತರ ರೂ.ಅವ್ಯವಹಾರ ನಡೆದಿರುವುದಾಗಿ ಟಿವಿಸಿಸಿ ವರದಿ ಹೇಳಿರುವ ಹಿನ್ನೆಲೆಯಲ್ಲಿ ಈ ಕುರಿತು ತನಿಖೆ ನಡೆಸಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಆದೇಶಿಸಿದ್ದಾರೆ. ಕಾಮಗಾರಿ ನಡೆಸದೆಯೇ ಗುತ್ತಿಗೆದಾರರಿಗೆ ಬಿಬಿಎಂಪಿಯ ಟ್ರಾಫಿಕ್‌ ಎಂಜಿನಿಯರಿಂಗ್‌ ಸೆಲ್‌ (ಟಿಇಸಿ) 53 ಕೋಟಿ ರೂ. ಬಿಲ್‌ ಪಾವತಿ ಮಾಡಿ ಅಕ್ರಮ ನಡೆಸಿರುವುದು ಟಿವಿಸಿಸಿ ತನಿಖೆಯಿಂದ ಬಯಲಾಗಿತ್ತು.

ಬಿಬಿಎಂಪಿ ವ್ಯಾಪ್ತಿಯ ರಸ್ತೆಗಳಲ್ಲಿ ಮೀಡಿಯನ್‌, ಬಸ್‌ ಬೇ ನಿರ್ಮಾಣ, ಜಂಕ್ಷನ್‌ಗಳ ಅಭಿವೃದ್ಧಿ, ಲೇನ್‌ ಮಾರ್ಕಿಂಗ್‌, ಜೀಬ್ರಾ ಕ್ರಾಸಿಂಗ್‌ ಸೇರಿದಂತೆ ಇನ್ನಿತರೆ ಕಾಮಗಾರಿಗಳಿಗೆ 2017-18 ಮತ್ತು 2018-19ನೇ ಸಾಲಿನಲ್ಲಿ 109 ಕೋಟಿ ರೂ. ವೆಚ್ಚ ಮಾಡಲಾಗಿದೆ. ಈ ಪೈಕಿ ಶೇ. 25ರಷ್ಟು ಕಾಮಗಾರಿಗಳನ್ನು ಸಹ ನಿರ್ವಹಿಸದೆ, ಶೇ 75ರಷ್ಟು ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಬಿಜೆಪಿ ವಕ್ತಾರ ಎನ್‌.ಆರ್‌.ರಮೇಶ್‌ ಅವರು ದಾಖಲೆ ಸಹಿತ ಟಿಇಸಿ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಈ ಹಿಂದಿನ ಆಯುಕ್ತರು, ಮೇಯರ್‌ಗೆ ದೂರು ನೀಡಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹಿಂದಿನ ಮೇಯರ್‌ ಹಾಗೂ ಆಯುಕ್ತರು ಟಿವಿಸಿಸಿ ತನಿಖೆಗೆ ಆದೇಶಿಸಿದ್ದರು. ಟಿವಿಸಿಸಿ ವಿಭಾಗವು ಸಮಗ್ರ ತನಿಖೆ ನಡೆಸಿ, 179 ಪುಟಗಳ ವರದಿಯನ್ನು ಅ.1ರಂದು ಆಯುಕ್ತರಿಗೆ ಸಲ್ಲಿಸಿದೆ. ತನಿಖಾ ವರದಿಯಲ್ಲಿ ಟಿಇಸಿ ವಿಭಾಗದ ಅಧಿ ಕಾರಿಗಳು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಮಾಡದೇ ಇರುವ ಕಾಮಗಾರಿಗಳಿಗೆ ಮತ್ತು ಕಳಪೆ ಗುಣಮಟ್ಟದ ಕಾಮಗಾರಿಗಳಿಗೆ ಹಣ ಬಿಡುಗಡೆ ಮಾಡಿರುವುದು ಬಯಲಾಗಿತ್ತು. ಈ ಹಗರಣದಲ್ಲಿ ಟಿಇಸಿ ವಿಭಾಗದ ಕಾರ್ಯ ನಿರ್ವಾಹಕ ಎಂಜಿನಿಯರ್‌ ಸೇರಿದಂತೆ 5 ಮಂದಿ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ಗಳು, ಇಬ್ಬರು ಲೆಕ್ಕ ಅಧೀಕ್ಷಕರು ಭಾಗಿಯಾಗಿದ್ದಾರೆ ಎಂಬುದನ್ನು ವರದಿಯಲ್ಲಿ ಉಲ್ಲೇಖೀಸಲಾಗಿತ್ತು.

ಟಿವಿಸಿಸಿ ತನಿಖಾಕಾರಿಗಳು 109 ಕೋಟಿ ರೂ.ಗಳಿಗೆ ಸಂಬಂಧಿಸಿದ ಕಡತಗಳನ್ನು ಸಲ್ಲಿಸುವಂತೆ ಟಿಇಸಿ ವಿಭಾಗಕ್ಕೆ ಸೂಚಿಸಿದ್ದರು. ಆದರೆ, ಅಧಿಕಾರಿಗಳು ಕೇವಲ 73 ಕೋಟಿ ರೂ.ಗಳಿಗೆ ಸಂಬಂಧಿಸಿದ ಕಡತಗಳನ್ನಷ್ಟೇ ಸಲ್ಲಿಸಿದ್ದರು. ಈ ಪೈಕಿ 53 ಕೋಟಿ ರೂ.ಗಳನ್ನು ಕಾಮಗಾರಿ ನಿರ್ವಹಿಸದಿದ್ದರೂ ಬಿಡುಗಡೆ ಮಾಡಿರುವುದು ಪತ್ತೆಯಾಗಿದೆ.

ಈ ಕಾಮಗಾರಿಗಳಲ್ಲಿ ಅಕ್ರಮ: ಕೆ.ಆರ್‌.ರಸ್ತೆಯ 27ನೇ ಅಡ್ಡರಸ್ತೆಗೆ ಹೊಂದಿಕೊಂಡಿರುವ ಜೈನ್‌ ಅಪಾರ್ಟ್‌ಮೆಂಟ್‌ ಮುಂಭಾಗದಲ್ಲಿನ ಚರಂಡಿಗೆ ಕಲ್ಲು ಚಪ್ಪಡಿಗಳನ್ನು ಅಳವಡಿಸಿದ್ದರೂ, ಇ-ಅಳತೆ ಪುಸ್ತಕದಲ್ಲಿ ಆರ್‌.ಸಿ.ಸಿ ಕವರಿಂಗ್‌ ಸ್ಲಾಬ್‌ಗಳನ್ನು ಅಳವಡಿಸಿರುವುದಾಗಿ ದಾಖಲಿಸಿ ಪಾಲಿಕೆಗೆ ಆರ್ಥಿಕ ನಷ್ಟ ಉಂಟು ಮಾಡಲಾಗಿದೆ. ಕಾಮಗಾರಿಗಳ ಕಾರ್ಯಾದೇಶ ಮತ್ತು ಕರಾರಿನಲ್ಲಿ ನಿಗದಿಪಡಿಸಿರುವ ಕಾಲಾವಧಿಯೊಳಗೆ ಕೆಲಸ ಪೂರ್ಣಗೊಳಿಸದಿದ್ದರೂ, ಕೋಡಲ್‌ ನಿಯಮಾವಳಿಗಳನ್ವಯ ಯಾವುದೇ ಕ್ರಮ ಜರುಗಿಸಿಲ್ಲ.

ಬಹುತೇಕ ರಸ್ತೆಗಳಲ್ಲಿ ಅಳವಡಿಸಿರುವ ಮೀಡಿಯನ್‌ ಮಾರ್ಕ್‌ಗಳು ಕಿತ್ತು ಬಂದು ಹಾಳಾಗಿವೆ. ರಸ್ತೆ ಉಬ್ಬುಗಳು, ಎಚ್‌ಆರ್‌ಪಿಸಿ, ಜೀಬ್ರಾ ಕ್ರಾಸಿಂಗ್ಸ್‌, ಪಾದಚಾರಿ ಪಥ, ಲೇನ್‌ ಮಾರ್ಕಿಂಗ್‌, ಮೀಡಿಯನ್‌, ಕಬ್ಸ್ìಗಳಿಗೆ ಬಳಿದಿರುವ ಬಣ್ಣಗಳು ನಿರ್ವಹಣಾ ಅವಧಿ ಮುಗಿಯುವ ಮುನ್ನವೇ ಅಳಿಸಿ ಹೋಗಿವೆ. ಹೆಬ್ಟಾಳ ಮೇಲ್ಸೇತುವೆ ಬಳಿ ಚೈನ್‌ ಲಿಂಕ್‌ ಬೇಲಿ ಅಳವಡಿಕೆ, ಸುಮನಹಳ್ಳಿ ಸೇತುವೆ ಬಳಿ ಹಾಕಲಾಗಿರುವ ತಂತಿ ಬೇಲಿಯಲ್ಲಿನ ಎಂ.ಎಸ್‌ ಪೋಲ್‌ ಕಾಮಗಾರಿಗಳಿಗೂ ಹಾಗೂ ಇದಕ್ಕೆ ಬಿಲ್‌ ಕ್ಲೈಂ ಮಾಡಿರುವುದಕ್ಕೂ ಸಾಕಷ್ಟು ವ್ಯತ್ಯಾಸ ಕಂಡುಬಂದಿದೆ.

ಮಾರತ್‌ಹಳ್ಳಿ ಮುಖ್ಯರಸ್ತೆಯಲ್ಲಿ 1 ಮೀಟರ್‌ ಎತ್ತರದ 250 ಮೀಡಿಯನ್‌ಗಳನ್ನು ನಿರ್ಮಿಸಬೇಕಿತ್ತು. ಆದರೆ, 236 ಮೀಡಿಯನ್‌ಗಳನ್ನು ನಿರ್ಮಿಸಲಾಗಿದ್ದು, 14 ಹೆಚ್ಚುವರಿ ಮೀಡಿಯನ್‌ಗಳ ಸಂಖ್ಯೆಯನ್ನು ಇ-ಅಳತೆ ಪುಸ್ತಕದಲ್ಲಿ ದಾಖಲಿಸಲಾಗಿದೆ. ಮಾರತ್‌ಹಳ್ಳಿಯ ಐಒಸಿ ಪೆಟ್ರೋಲ್‌ ಬಂಕ್‌ ಬಳಿಕ 0.60 ಮೀ. ಎತ್ತರದ ಮೀಡಿಯನ್‌ಗಳನ್ನು ಅಳವಡಿಸಿದ್ದರೂ, ಒಂದು ಮೀ ಎತ್ತರದ 30 ಮೀಡಿಯನ್‌ಗಳನ್ನು ಹಾಕಿರುವುದಾಗಿ ನಮೂದಿಸಲಾಗಿದೆ.

ಕೆ.ಜಿ.ರಸ್ತೆಯ ಎಸ್‌ಸಿ ರಸ್ತೆ ಜಂಕ್ಷನ್‌ನಿಂದ ಕಾರ್ಪೋರೇಷನ್‌ ಬಸ್‌ ನಿಲ್ದಾಣದವರೆಗೆ ಸೈಕಲ್‌ ಪಥವನ್ನೇ ನಿರ್ಮಿಸಿಲ್ಲ. ಅಲ್ಲದೆ ಕೆಆರ್‌ಐಡಿಎಲ್‌ ಸಂಸ್ಥೆಗೆ ಮುಂಗಡವಾಗಿ ಶೇ 50ರಷ್ಟು ಬಿಲ್‌ ಮೊತ್ತ ಪಾವತಿಸಿ, ಎಂಜಿನಿಯರ್‌ಗಳು ಕರ್ತವ್ಯಲೋಪವೆಸಗಿರುವುದು ಬಹಿರಂಗವಾಗಿತ್ತು.

ಅಧಿಕಾರಿಗಳ ವಿರುದ್ಧ ಕಠಿಣ ಕ್ರಮವಾಗಲಿ: “ಟಿವಿಸಿಸಿ ತನಿಖಾ ವರದಿಯಲ್ಲಿ ಟಿಇಸಿ ವಿಭಾಗದ ಇಇ ಪ್ರವೀಣ್‌ ಲಿಂಗಯ್ಯ, ಎಇಇಗಳಾದ ದೇವರಾಜೇಗೌಡ, ಶ್ರೀನಿವಾಸ್‌, ಪ್ರಕಾಶ್‌ ರಾವ್‌, ಇಂದ್ರಾಣಿ, ಅಜರ್‌ ಪಾಷಾ, ಲೆಕ್ಕ ಅಧೀಕ್ಷರಾದ ಅನುಸೂಯ ಮತ್ತು ಮಾಯಣ್ಣ ಅವರು ಗುತ್ತಿಗೆದಾರರೊಂದಿಗೆ ಶಾಮೀಲಾಗಿ ಪಾಲಿಕೆಗೆ ಕೋಟ್ಯಂತರ ರೂ. ವಂಚಿಸಿರುವುದು ಬಯಲಾಗಿದೆ. ತನಿಖಾ ವರದಿ ಆಧರಿಸಿ, ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಬೇಕು, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು’ ಎಂದು ಎನ್‌.ಆರ್‌.ರಮೇಶ್‌ ಅವರು ಒತ್ತಾಯಿಸಿದ್ದರು.

ಈ ಹಿನ್ನೆಲೆಯಲ್ಲಿ ಸೋಮವಾರ ಮುಖ್ಯಮಂತ್ರಿಯವರು ಆದೇಶ ಹೊರಡಿಸಿದ್ದು, ಟ್ರಾಫಿಕ್‌ ಎಂಜಿನಿಯರಿಂಗ್‌ ಸೆಲ್‌ ವಿಭಾಗದ ಎರಡು ವರ್ಷಗಳ ಕಾಮಗಾರಿಗಳಲ್ಲಿನ ಅವ್ಯವಹಾರ ಆರೋಪಗಳ ಬಗ್ಗೆ ಭ್ರಷ್ಟಚಾರ ನಿಗ್ರಹ ದಳದಿಂದ ತನಿಖೆ ನಡೆಸುವಂತೆ ನಿರ್ದೇಶನ ನೀಡಿದ್ದಾರೆ. ಎಸಿಬಿ ತನಿಖೆಗೆ ವಹಿಸಿರುವ ಬಗ್ಗೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೂ ಪತ್ರ ಬರೆದು ತಿಳಿಸಲಾಗಿದೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.