ಎಲ್‌ಎಂಎಸ್‌ ತಾಂತ್ರಿಕ ದೋಷ, ಆನ್‌ಲೈನ್‌ ಕಲಿಕೆಗೆ ಕುತ್ತು !


Team Udayavani, May 2, 2021, 3:57 PM IST

Technical error

ಬೆಂಗಳೂರು : ಕೋವಿಡ್ ಹಿನ್ನೆಲೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್‌, ಡಿಪ್ಲೊಮಾ, ಕಾನೂನು ಸೇರಿದಂತೆ ಎಲ್ಲ ಕೋರ್ಸ್‌ಗಳಿಗೂ ಆನ್‌ಲೈನ್‌ ಮೂಲಕ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಈಗಾಗಲೇ ಸೂಚನೆ ನೀಡಿದ್ದರೂ ತಾಂತ್ರಿಕ ದೋಷಗಳಿಂದ ಪಠ್ಯ ಸಾಮಗ್ರಿಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ರಾಜ್ಯ ಸರ್ಕಾರ ಮೇ 12ರವರೆಗೆ ಭೌತಿಕ ತರಗತಿಗಳ ಬದಲಿಗೆ ಆನ್‌ಲೈನ್‌ ತರಗತಿಗಳನ್ನುನಡೆಸಲು ಕಾಲೇಜು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಆದರೆ, ವಿದ್ಯಾರ್ಥಿಗಳಿಗೆ ಕಲಿಕಾ ನಿರ್ವಹಣಾ ವ್ಯವಸ್ಥೆ(ಎಲ್‌ಎಂಎಸ್‌)ನಿಂದ ಕಲಿಕಾ ಸಾಮಗ್ರಿಗಳನ್ನು ಡೌನ್‌ಲೋಡ್‌ ಮಾಡಲು ಸಾಧ್ಯವಾಗುತ್ತಿಲ್ಲ.

ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಕಲಿಕೆ ಇನ್ನಷ್ಟುಕಠಿಣವಾಗುತ್ತಿದೆ. ಕಳೆದ ವರ್ಷ ರಾಜ್ಯ ಸರ್ಕಾರ ಎಲ್‌ಎಂಎಸ್‌ ಅನುಷ್ಠಾನ ಮಾಡಿದೆ. ಇದರಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಬೇಕಾದ ಕಂಟೆಂಟ್‌ಗಳನ್ನು ಪ್ರಾಧ್ಯಾಪಕರು ಸಿದ್ಧಪಡಿಸಿ, ಅಪ್‌ಲೋಡ್‌ ಮಾಡಬೇಕು. ವಿದ್ಯಾರ್ಥಿಗಳು ತಮ್ಮ ಲಾಗಿನ್‌ ಮೂಲಕ ಅದನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು ಅಥವಾ ಅಲ್ಲಿಯೇ ಅಭ್ಯಾಸ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಮೊಬೈಲ್‌ ತಂತ್ರಾಂಶ : ಸಮಸ್ಯೆಯಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಹೀಗಾಗಿಯೇ ಮುಂದಿನ ಸೆಮಿಸ್ಟರ್‌ ಆರಂಭದಿಂದಲೇ ಮೊಬೈಲ್‌ ತಂತ್ರಾಂಶ ಅಥವಾ ಆ್ಯಪ್‌ ಆಧಾರಿತವಾಗಿ ಎಲ್‌ಎಂಎಸ್‌ ಬಳಕೆಗೆ ಸಿದ್ಧಪಡಿಸುತ್ತಿದ್ದೇವೆ. ವಿದ್ಯಾರ್ಥಿ ಗಳು ಆ್ಯಪ್‌ಡೌನ್‌ಲೋಡ್‌ ಮಾಡಿಕೊಂಡು,ಅತ್ಯಂತ ಸುಲಭವಾಗಿ ಎಲ್‌ಎಂಎಸ್‌ನಲ್ಲಿರುವ ಕಂಟೆಂಟ್‌ಗಳಲ್ಲಿ ಕಲಿಕೆಗೆ ಬಳಸಿಕೊಳ್ಳುವಂತೆ ಮಾಡುತ್ತಿದ್ದೇವೆ.

ಕಾಲೇಜುಗಳಲ್ಲಿ ಡೌನ್‌ಲೋಡ್‌ಗಾಗಿ ಉಚಿತ ವೈ-ಫೈ ಕೂಡ ನೀಡಲಿದ್ದೇವೆ . ಆಗಆನ್‌ಲೈನ್‌ ಅಥವಾ ಆಫ್ಲೈನ್‌ ಕಲಿಕೆಗೆ ಹೆಚ್ಚುಅನುಕೂಲವಾಗಲಿದೆ ಎಂದು ಕಾಲೇಜು ಮತ್ತುತಾಂತ್ರಿಕ ಶಿಕ್ಷಣ ‌ ಇಲಾಖೆಯ ಆಯುಕ್ತ ಪಿ.ಪ್ರದೀಪ್‌ಮಾಹಿತಿ ನೀಡಿದರು.

2, 4 ಮತ್ತು 6ನೇ ಸೆಮಿಸ್ಟರ್‌ ತರಗತಿಗಳುಆರಂಭವಾಗುವ ಮೊದಲೇ ಎಲ್ಲ ವಿಷಯದಎಲ್ಲ ಪಠ್ಯವಾರು ಕಂಟೆಂಟ್‌ಗಳು ಸಿದ್ಧಪಡಿಸಲು ಪ್ರಾಧ್ಯಾಪಕರಿಗೆ ಟಾರ್ಗೆಟ್‌ ನೀಡಲಾಗಿದೆ ಎಂದುಹಿರಿಯ ಅಧಿಕಾರಿಯೊಬ್ಬರು ವಿವರ ನೀಡಿದರು.

ಎಲ್‌ಎಂಎಸ್‌ನ ತಾಂತ್ರಿಕದೋಷವನ್ನು ಸರಿಪಡಿಸಿ,ಮುಂದಿನ ಸೆಮಿಸ್ಟರ್‌ ಆರಂಭದಲ್ಲಿ ಪೂರ್ಣ ಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ಕಲಿಕಾ ಕಂಟೆಂಟ್‌ ಈ ಮೂಲಕವೇ ಸಿಗುವಂತೆ ಮಾಡಲಾಗುತ್ತದೆ.ಇದಕ್ಕಾಗಿ ಪ್ರಾಧ್ಯಾಪಕರ ನಿಯೋಜನೆಮಾಡಿದ್ದು, ಆಯಾ ಕಾಲೇಜುಗಳಪ್ರಾಂಶುಪಾಲರು ಇದರಮೇಲ್ವಿಚಾರಣೆ ಮಾಡುತ್ತಿದ್ದಾರೆ.

  • ಪಿ.ಪ್ರದೀಪ್‌, ಆಯುಕ್ತ, ಕಾಲೇಜುಮತ್ತು ತಾಂತ್ರಿಕ ಶಿಕ್ಷಣ ಇಲಾಖೆ

ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.