ಕ್ಯಾನ್ಸರ್‌ ಭಯದಿಂದ ಕುಣಿಕೆಗೆ ಕೊರಳೊಡ್ಡಿದ‌ ಟೆಕ್ಕಿ


Team Udayavani, Dec 15, 2017, 12:18 PM IST

suicide-comeet.jpg

ಬೆಂಗಳೂರು: ಹರ್ಷ ಶೆಟ್ಟಿಗೆ ವಯಸ್ಸಿನ್ನೂ 32. ಸ್ಪುರದ್ರೂಪಿ ಯುವಕ. ಐಟಿ ಕಂಪನಿಯಲ್ಲಿ ಉದ್ಯೋಗ. ಕೈತುಂಬಾ ಸಂಬಳ. ಆದರೆ ಆತನಿಗೆ ಅದೇನೋ ಆತಂಕ. ದೃಢಕಾಯ ಹೊಂದಿ, ಆರೋಗ್ಯವಂತನಾಗಿದ್ದರೂ ತನಗೇನೋ ಕಾಯಿಲೆಯಿದೆ ಎಂಬ ಭಯ. ಆ ಭಯವೇ ಆತ, ನೇಣಿನ ಕುಣಿಕೆಗೆ ಕೊರಳೊಡ್ಡುವಂತೆ ಮಾಡಿತು!

ಉಡುಪಿಯ ಹಾರಾಡಿ ಮೂಲದ ಹರ್ಷ ಶೆಟ್ಟಿ ಅವರ ತಾಯಿ ಮತ್ತು ಅಜ್ಜಿಯನ್ನು ಕ್ಯಾನ್ಸರ್‌ ಬಲಿ ತೆಗೆದುಕೊಂಡಿತ್ತು. ಇದೀಗ ಸಹೋದರಿ ಕೂಡ ಅದೇ ಕ್ಯಾನ್ಸರ್‌ ಮಾರಿಯಿಂದ ಬಳಲುತ್ತಿದ್ದಾಳೆ. ಹೀಗಾಗಿ ತನಗೂ ಕ್ಯಾನ್ಸರ್‌ ಬರಬಹುದೆಂದು ಆತಂಕಗೊಂಡ ಹರ್ಷ, ವಿಜಯನಗರದ ಪ್ರಶಾಂತ ನಗರದಲ್ಲಿರುವ ಮನೆಯಲ್ಲಿ ಬುಧವಾರ ತಡರಾತ್ರಿ ನೇಣುಹಾಕಿಕೊಂಡಿದ್ದಾರೆ.

ಹತ್ತು ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಹರ್ಷ ಶೆಟ್ಟಿ, ಕಾಡುಬೀಚನಹಳ್ಳಿಯಲ್ಲಿರುವ ಆಮೆರಿಕ ಮೂಲದ ಸಾಫ್ಟ್ವೇರ್‌ ಕಂಪನಿಯಲ್ಲಿ ಸಾಫ್ಟ್ವೇರ್‌ ಟೆಕ್ನಿಕಲ್‌ ಲೀಡರ್‌ ಆಗಿ ಕೆಲಸ ಮಾಡುತ್ತಿದ್ದರು. ಐದು ವರ್ಷಗಳ ಹಿಂದೆ ಖಾಸಗಿ ಶಾಲೆಯ ಶಿಕ್ಷಕಿ ರಮ್ಯಾ ಜಿ. ಶೆಟ್ಟಿ ಅವರನ್ನು ವಿವಾಹವಾಗಿದ್ದು, ದಂಪತಿಗೆ 2 ವರ್ಷದ ಹೆಣ್ಣು ಮಗು ಇದೆ.

ಈ ಮಧ್ಯೆ ಉಡುಪಿಯಲ್ಲಿ ವಾಸವಿರುವ ಸೋದರಿ ಆಶಾ ಶೆಟ್ಟಿ ಅವರನ್ನು ಅನಾರೋಗ್ಯದ ಕಾರಣ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರವಷ್ಟೇ ಸಹೋದರಿಯ ಆರೋಗ್ಯ ವಿಚಾರಿಸಲು ಹೋಗಿದ್ದ ಹರ್ಷ ಶೆಟ್ಟಿ, ವೈದ್ಯರ ಬಳಿ ಸೋದರಿಯ ಆರೋಗ್ಯ ಸ್ಥಿತಿ ಬಗ್ಗೆ ಚರ್ಚಿಸಿದ್ದಾರೆ. ಈ ವೇಳೆ ವೈದ್ಯರು, ಆಶಾ ಕ್ಯಾನ್ಸರ್‌ನ ಕೊನೆ ಹಂತ ತಲುಪ್ಪಿದ್ದು, ಹತ್ತಾರು ದಿನ ಉಳಿದರೇ ಹೆಚ್ಚು ಎಂದಿದ್ದರು.

ಇದರಿಂದ ಬೇಸರಗೊಂಡಿದ್ದ ಹರ್ಷಶೆಟ್ಟಿ, ಮೂರು ದಿನ ಅಲ್ಲಿಯೇ ಉಳಿದಿದ್ದು, ಆಶಾ ಅವರ ಆರೈಕೆ ಮಾಡಿ ಬುಧವಾರ ಮಧ್ಯಾಹ್ನವಷ್ಟೇ ಬೆಂಗಳೂರಿಗೆ ವಾಪಾಸಾಗಿದ್ದರು. ಪತಿ ಫ್ಯಾನ್‌ಗೆ ನೇತಾಡುವುದನ್ನು ಕಂಡ ರಮ್ಯಾ, ಜೋರಾಗಿ ಕೂಗಿಕೊಂಡಿದ್ದಾರೆ. ಅವರ ಚೀರಾಟ ಕೇಳಿದ ಸ್ಥಳೀಯ ನಿವಾಸಿಗಳು ತಕ್ಷಣವೇ ಮನೆಗೆ ಬಂದು ಆ್ಯಂಬುಲೆನ್ಸ್‌ ಮೂಲಕ ಹರ್ಷ ಶೆಟ್ಟಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕೆ.ಸಿ.ಜನರಲ್‌ ಆಸ್ಪತ್ರೆಗೆ ದಾಖಲಿಸಿದಾಗ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ವಿಜಯನಗರ ಠಾಣೆ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪತ್ನಿ ರಮ್ಯಾ ಶೆಟ್ಟಿ ಪ್ರಕರಣ ದಾಖಲಿಸಿದ್ದಾರೆ.

ಪತ್ನಿ ಜತೆ ಮಾತಾಡುವಾಗ ಆತಂಕ: ರಾತ್ರಿ 9 ಗಂಟೆ ಸುಮಾರಿಗೆ ಹರ್ಷ ಮತ್ತು ರಮ್ಯಾ ಊಟ ಮುಗಿಸಿ ಮಾತನಾಡುತ್ತಾ ಕುಳಿತಿದ್ದರು. ಆಗ ಹರ್ಷ, ತಮ್ಮ ಸೋದರಿ ಅನಾರೋಗ್ಯದ ಬಗ್ಗೆ ಪತ್ನಿ ಜತೆ ಚರ್ಚಿಸಿದ್ದಾರೆ. ಈ ವೇಳೆ “ನನ್ನ ಅಜ್ಜಿ, ತಾಯಿ ಕೂಡ ಕ್ಯಾನ್ಸರ್‌ ರೋಗದಿಂದ ಸಾವನ್ನಪ್ಪಿದ್ದಾರೆ. ಇದೀಗ ನನ್ನ ಅಕ್ಕನಿಗೂ ಅದೇ ರೋಗ ಬಂದಿದೆ.

ಆಕೆ ಪ್ರಾಣ ಬಿಟ್ಟ ಬಳಿಕ, ವಂಶವಾಹಿ ಎಂಬಂತೆ ಆ ಮಾರಕ ರೋಗ ನನ್ನನ್ನೂ ಆವರಿಸಿಕೊಳ್ಳಬಹುದು’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಪತ್ನಿ ರಮ್ಯಾಶೆಟ್ಟಿ, “ಇಲ್ಲದ್ದನ್ನು ಏಕೆ ಬಯಸುತ್ತೀರಿ? ಆ ರೀತಿ ಏನೂ ಆಗುವುದಿಲ್ಲ. ನಿಶ್ಚಿಂತೆಯಿಂದ ಇರಿ’ ಎಂದು ಸಲಹೆ ನೀಡಿದ್ದಾರೆ. ಬಳಿಕ 11.30ರ ಸುಮಾರಿಗೆ ದಂಪತಿ ತಮ್ಮ ಮಗಳಿಗೆ ಊಟ ಮಾಡಿಸಿ ಮಲಗಿಸಿದ್ದಾರೆ.

ನಂತರ ಹರ್ಷ ಶೆಟ್ಟಿ ಮಲಗುತ್ತೇನೆಂದು ಬೆಡ್‌ರೂಂಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಈ ವೇಳೆ ಪತ್ನಿ ರಮ್ಯಾ ನಡುಮನೆಯಲ್ಲಿ ಟಿವಿ ನೋಡುತ್ತಿದ್ದರು. ತಡರಾತ್ರಿ 12.30ರ ಸುಮಾರಿಗೆ ಬೆಡ್‌ರೂಂ ಕಡೆಯಿಂದ ಕುರ್ಚಿ ಬಿದ್ದ ಶಬ್ಧವಾಗಿದೆ. ಇದರಿಂದ ಗಾಬರಿಗೊಂಡ ರಮ್ಯಾ ಕೂಡಲೇ ಬೆಡ್‌ರೂಂ ಬಾಗಿಲು ತೆರೆದು ನೋಡಿದಾಗ ಹರ್ಷ ಫ್ಯಾನ್‌ಗೆ ನೇಣು ಹಾಕಿಕೊಂಡು ನೇತಾಡುತ್ತಿದ್ದರು.

ಟಾಪ್ ನ್ಯೂಸ್

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Hassan Pen Drive Case; ಹೊಸ ನಿರೀಕ್ಷಣ ಜಾಮೀನು ಅರ್ಜಿ ಸಲ್ಲಿಸಿದ ರೇವಣ್ಣ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್‌ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.