ಆತ್ಮಗಳ ಜತೆ ಮಾತನಾಡುತ್ತೇನೆ ಎಂದ ಬೆಂಗಳೂರಿನ ಬಾಲಕಿ ನಾಪತ್ತೆ
Team Udayavani, Dec 31, 2021, 11:31 AM IST
ಬೆಂಗಳೂರು: ಆತ್ಮಗಳ ಜತೆಯಲ್ಲಿ ಮಾತನಾಡುತ್ತೇನೆ ಎಂದು ಬಾಲಕಿಯೊಬ್ಬಳು ಮನೆಯಿಂದ ಏಕಾಏಕಿ ನಾಪತ್ತೆಯಾಗಿದ್ದು, ಆಕೆಯನ್ನು ಪತ್ತೆ ಹಚ್ಚಿಕೊಡುವಂತೆ ಆಕೆಯ ಪೋಷಕರು ಸಾಮಾಜಿಕ ಜಾಲತಾಣ ಮೂಲಕ ಮನವಿ ಮಾಡಿದ್ದಾರೆ.
ಸುಬ್ರಹ್ಮಣ್ಯನಗರದಲ್ಲಿ ಪೋಷಕರ ಜತೆ ವಾಸವಿದ್ದ 17 ವರ್ಷದ ಅನುಷ್ಕಾ, ಈ ಅ.31ರಂದು ಮನೆಯಿಂದ ಕಾಣೆಯಾಗಿದ್ದಳು. ಈ ಸಂಬಂಧ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಇದ್ದ ಒಬ್ಬಳೇ ಮಗಳು ಮನೆಬಿಟ್ಟು ಹೋಗಿ ಎರಡು ತಿಂಗಳಾದರೂ ಆಕೆಯ ಸುಳಿವು ಸಿಕ್ಕಿಲ್ಲ. ಅದರಿಂದ ಅಸಹಾಯಕರಾಗಿರುವ ಅವರು ಈಗ ಟ್ವಿಟರ್ ಮೂಲಕ ಮನವಿ ಮಾಡಿದ್ದಾರೆ.
ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣಳಾಗಿದ್ದ ಆಕೆ, ಎರಡು ಜತೆ ಬಟ್ಟೆ ಹಾಗೂ 2,500 ರೂ. ತೆಗೆದುಕೊಂಡು ಮನೆಬಿಟ್ಟು ಹೋಗಿದ್ದು ಇನ್ನೂ ಪತ್ತೆಯಾಗಿಲ್ಲ. ಆಕೆಯ ವರ್ತನೆಯಲ್ಲಿ ಬದಲಾವಣೆಯಾಗಿತ್ತು. ಮನೆಗೆ ಬಂದೊಡನೆಯೇ ಕೊಠಡಿಯೊಳಗೆ ಸೇರಿಕೊಳ್ಳುತ್ತಿದ್ದಳು. ಏಕಾಂತದಲ್ಲೇ ಇರುತ್ತಿದ್ದಳು. ಯಾವ ವಿಚಾರವನ್ನೂ ನಮ್ಮೊಂದಿಗೆ ಹಂಚಿಕೊಳ್ಳುತ್ತಿರಲಿಲ್ಲ. ಇದರಿಂದ ಗಾಬರಿಗೊಂಡು ಆಕೆಯನ್ನು ಈ ವರ್ಷದ ಸೆಪ್ಟೆಂಬರ್ನಲ್ಲಿ ಮನೋವೈದ್ಯರ ಬಳಿ ಕರೆದುಕೊಂಡು ಹೋಗಿದ್ದೆವು ಎಂದು ಅನುಷ್ಕಾ ತಂದೆ ಅಭಿಷೇಕ್ ತಿಳಿಸಿದ್ದಾರೆ.
ಇದನ್ನೂ ಓದಿ:11 ಆಟಗಾರರಿಗೆ ಕೋವಿಡ್ ಸೋಂಕು ದೃಢ: ಬಿಗ್ ಬ್ಯಾಶ್ ಲೀಗ್ ಪಂದ್ಯ ಮುಂದೂಡಿಕೆ
ಈ ಕುರಿತು ಪ್ರತಿಕ್ರಿಯೆ ನೀಡಿದ ಸುಬ್ರಹ್ಮಣ್ಯನಗರ ಪೊಲೀಸರು, ಯುವತಿ ಪತ್ತೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ. ಆಧ್ಯಾತ್ಮದ ಬಗ್ಗೆ ಹೆಚ್ಚು ಒಲವು ಹೊಂದಿ ಹೋಗಿರುವ ಸಾಧ್ಯತೆಯಿದೆ. ಶೋಧ ಕಾರ್ಯ ಮುಂದುವರಿದಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ