ಹೊರ ವರ್ತುಲದಲ್ಲಿ ಮೆಟ್ರೋ ಮಾರ್ಗಕ್ಕೆ ಟೆಂಡರ್‌


Team Udayavani, Dec 22, 2019, 3:07 AM IST

horavartula

ಬೆಂಗಳೂರು: ನೆನೆಗುದಿಗೆ ಬಿದ್ದಿದ್ದ ಹೊರ ವರ್ತುಲದಲ್ಲಿ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ಶುಕ್ರವಾರ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಟೆಂಡರ್‌ ಕರೆದಿದೆ. ಕೆ.ಆರ್‌.ಪುರ- ಸೆಂಟ್ರಲ್‌ ಸಿಲ್ಕ್ಬೋರ್ಡ್‌ ಜಂಕ್ಷನ್‌ ನಡುವಿನ 17 ಕಿ.ಮೀ. ಉದ್ದದ ಈ ಮಾರ್ಗವನ್ನು ಎರಡು ಪ್ಯಾಕೇಜ್‌ಗಳಲ್ಲಿ ನಿರ್ಮಿಸಲು ಟೆಂಡರ್‌ ಆಹ್ವಾನಿಸಲಾಗಿದೆ. ಈ ಸಂಬಂಧ ಅರ್ಜಿ ಸಲ್ಲಿಕೆಗೆ 2020ರ ಫೆ.6ರವರೆಗೆ ಕಾಲಾವಕಾಶ ನೀಡಿದ್ದು, ಅಂದೇ ಬಿಡ್‌ ತೆರೆಯಲಾಗುವುದು.

ಸಿವಿಲ್‌ ಕಾಮಗಾರಿ ಟೆಂಡರ್‌ ಪಡೆದ ದಿನದಿಂದ 27 ತಿಂಗಳಲ್ಲಿ ನಿರ್ಮಾಣ ಕಾರ್ಯ ಮುಗಿಸುವ ಷರತ್ತು ವಿಧಿಸಲಾಗಿದೆ. ಸೆಂಟ್ರಲ್‌ ಸಿಲ್ಕ್ ಬೋರ್ಡ್‌ನಿಂದ ಕಾಡುಬೀಸನಹಳ್ಳಿ ವರೆಗಿನ 9.85 ಕಿ.ಮೀ. ಉದ್ದದ ಮಾರ್ಗವನ್ನು ಮೊದಲ ಪ್ಯಾಕೇಜ್‌ನಲ್ಲಿ ಹಾಗೂ ಕೋಡಿಬೀಸನಹಳ್ಳಿ ಯಿಂದ ಕೆ.ಆರ್‌.ಪುರವರೆಗೆ 9.77 ಕಿ.ಮೀ. ಉದ್ದದ ಮಾರ್ಗವನ್ನು ಎರಡನೇ ಪ್ಯಾಕೇಜ್‌ನಲ್ಲಿ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಕ್ರಮವಾಗಿ 731.18 ಕೋಟಿ ಮತ್ತು 594.25 ಕೋಟಿ ರೂ. ವೆಚ್ಚ ಅಂದಾಜಿ ಸಲಾಗಿದ್ದು, ನಿಲ್ದಾಣಗಳು ಹಾಗೂ ರಸ್ತೆ ವಿಸ್ತರಣೆ ಕಾಮಗಾರಿಯನ್ನೂ ಇದು ಒಳಗೊಂಡಿದೆ.

ಉದ್ದೇಶಿತ ಯೋಜನೆಗೆ ವಿನೂತನ ಮಾದರಿಯಲ್ಲಿ ಸಂಪನ್ಮೂಲ ಕ್ರೋಢೀಕರಿಸಲು ಚಿಂತನೆ ನಡೆಸಿದೆ. ಅದರಂತೆ, ಕೆ.ಆರ್‌.ಪುರ-ಸಿಲ್ಕ್ಬೋರ್ಡ್‌ ಜಂಕ್ಷನ್‌ ಮಾರ್ಗದುದ್ದಕ್ಕೂ ತಲೆಯೆತ್ತುವ ಹೊಸ ಬಡಾವಣೆಗಳ ಮೇಲೆ ಮೆಟ್ರೋ ಸೆಸ್‌ ಹೇರಿಕೆ, ಪ್ರೀಮಿಯಂ ಫ್ಲೋರ್‌ ಸ್ಪೇಸ್‌ ಇಂಡೆಕ್ಸ್‌ (ಪಿಎಂಎಫ್ಎಸ್‌ಐ), ಐಟಿ ಪಾರ್ಕ್‌ ಗಳಿಗೆ ನೇರ ಮೆಟ್ರೋ ಸಂಪರ್ಕ, ಜಾಹೀರಾತು ಮತ್ತು ಲೀಸ್‌ಗೆ ಅನುವು ಮಾಡಿಕೊಡುವ ಮೂಲಕ ಅಗತ್ಯ ಸಂಪನ್ಮೂಲ ಕ್ರೋಢೀಕರಿಸಲು ನಿಗಮ ಚಿಂತನೆ ನಡೆಸಿದೆ.

ಟೆಂಡರ್‌ ಪ್ರಕ್ರಿಯೆ ರದ್ದಾಗಿತ್ತು: ಈ ಮೊದಲು ಮೂರು ಪ್ಯಾಕೇಜ್‌ಗಳಲ್ಲಿ ಹೊರವರ್ತುಲ ಮಾರ್ಗದ ಟೆಂಡರ್‌ ಕರೆಯಲು ಉದ್ದೇಶಿಸಲಾಗಿತ್ತು. ಈ ಪೈಕಿ ಒಂದು ಪ್ಯಾಕೇಜ್‌ನ ಫೈನಾನ್ಸ್‌ ಬಿಡ್‌ ಕೂಡ ತೆರೆಯಲಾಗಿತ್ತು. ಆದರೆ, ಅದರಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಐಎಲ್‌ ಆಂಡ್‌ ಎಫ್ಎಸ್‌ ಭಾಗಿಯಾಗಿತ್ತು. ಈ ಹಿನ್ನೆಲೆಯಲ್ಲಿ ಟೆಂಡರ್‌ ಪ್ರಕ್ರಿಯೆ ರದ್ದುಗೊಳಿಸಲಾಗಿತ್ತು. ಮೊದಲ ಪ್ಯಾಕೇಜ್‌ (ಸಿಲ್ಕ್ಬೋರ್ಡ್‌- ಬೆಳ್ಳಂದೂರು)ನಲ್ಲಿ ನಿಗಮ ನಿಗದಿಪಡಿಸಿದ್ದಕ್ಕಿಂತ ಶೇ.-1ರಷ್ಟು ದರವನ್ನು ಐಎಲ್‌ ಆಂಡ್‌ ಎಫ್ಎಸ್‌ ನಮೂದಿಸಿತ್ತು.

ಸೆಂಟ್ರಲ್‌ ಸಿಲ್ಕ್ ಬೋರ್ಡ್‌, ಎಚ್‌ಎಸ್‌ಆರ್‌ ಲೇಔಟ್‌, ಅಗರ ಕೆರೆ, ಇಬ್ಬಲೂರು, ಬೆಳ್ಳಂದೂರು, ಕಾಡುಬೀಸನಹಳ್ಳಿ.
ಮಾರ್ಗದ ಉದ್ದ- 9.85 ಕಿ.ಮೀ.
ಅಂದಾಜು ವೆಚ್ಚ- 731.18 ಕೋಟಿ ರೂ.

ಕೋಡಿಬೀಸನಹಳ್ಳಿ, ಮಾರತ್‌ಹಳ್ಳಿ, ಇಸ್ರೋ, ದೊಡ್ಡನೆಕ್ಕುಂದಿ, ಡಿಆರ್‌ಡಿಒ ಕ್ರೀಡಾ ಸಂಕೀರ್ಣ, ಸರಸ್ವತಿ ನಗರ, ಕೆ.ಆರ್‌.ಪುರ.
ಮಾರ್ಗದ ಉದ್ದ- 9.77ಕಿ.ಮೀ.
ಅಂದಾಜು ವೆಚ್ಚ- 594.25 ಕೋಟಿ ರೂ.

-ಯೋಜನೆ ಪೂರ್ಣಗೊಂಡ ನಂತರದ ಮೊದಲ ವರ್ಷದಲ್ಲೇ ನಿತ್ಯ ಈ ಮಾರ್ಗದಲ್ಲಿ 3.1 ಲಕ್ಷ ಪ್ರಯಾಣಿಕರು ಸಂಚರಿಸುವ ನಿರೀಕ್ಷೆ ಇದೆ.

-15,179 ಚದರ ಮೀಟರ್‌ ಭೂಸ್ವಾಧೀನ ಮಾಡಿಕೊಳ್ಳಬೇಕಿದ್ದು, ಅದರಲ್ಲಿ 5,911 ಚದರ ಮೀಟರ್‌ ಸರ್ಕಾರಿ ಭೂಮಿ ಇದೆ.

-ಹೊರ ವರ್ತುಲ ರಸ್ತೆಗೆ ಹೊಂದಿಕೊಂಡ ಈ ಕಾರಿಡಾರ್‌ನಲ್ಲಿ ನಗರದ ಶೇ.32ರಷ್ಟು ವಾಣಿಜ್ಯ ಸಂಸ್ಥೆಗಳ ಕಚೇರಿಗಳಿದ್ದು, ಸುಮಾರು 8 ಲಕ್ಷ ಜನ ಉದ್ಯೋಗಿಗಳು ಅಲ್ಲಿ ಕೆಲಸ ಮಾಡುತ್ತಾರೆ. ಗಂಟೆಗೆ 18,750 ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. (ಡಿಪಿಆರ್‌ ಪ್ರಕಾರ)

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.