ರೋಟರಿಯಿಂದ 45 ದಿನಗಳ ಅವನಿ ಉತ್ಸವ


Team Udayavani, Apr 21, 2019, 3:00 AM IST

Udayavani Kannada Newspaper

ಬೆಂಗಳೂರು: ರೋಟರಿ ಕ್ಲಬ್‌ ಲಾಲ್‌ಬಾಗ್‌ ಸಂಸ್ಥೆ ಇದೇ 22ರಿಂದ ಜೂನ್‌ 5ರ ವರೆಗೆ 45 ದಿನಗಳ ಕಾಲ ಪಂಚಭೂತಗಳ (ಆಕಾಶ, ಭೂಮಿ, ವಾಯು, ಜಲ ಮತ್ತು ಆಗ್ನಿ) ಬಗ್ಗೆ ಜಾಗೃತಿ ಮೂಡಿಸಲು “ಅವನಿ ಉತ್ಸವ’ ಆಯೋಜಿಸಿದೆ.

ಶನಿವಾರ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ರಂಗಕರ್ಮಿ ಪ್ರಕಾಶ್‌ ಬೆಳವಾಡಿ, ಏ.22ರಂದು ಬೆಳಗ್ಗೆ 10 ಗಂಟೆಗೆ ದೊಮ್ಮಲೂರಿನ ಬೆಂಗಳೂರು ಅಂತಾರಾಷ್ಟ್ರೀಯ ಕೇಂದ್ರದಲ್ಲಿ (ಬಿಐಸಿ) ಉತ್ಸವ ನಡೆಯಲಿದೆ. ನಟ ಮತ್ತು ಅವನಿ ರಾಯಭಾರಿ ಯಶ್‌ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದು,

-ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಅವರು ಸಾಥ್‌ ನೀಡಲಿದ್ದಾರೆ. ಈ ಕಾರ್ಯಕ್ರಮಗಳಲ್ಲಿ ಪರಿಸರ ಸಂಬಂಧಿ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಏ.23ರಿಂದ 28ರವರೆಗೆ ಬೆಂಗಳೂರಿನ ಕೆರೆಗಳು ಮತ್ತು ಭವಿಷ್ಯದಲ್ಲಿ ನಗರಕ್ಕೆ ಬೇಕಾದ ಯೋಜನೆಗಳು ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ವಿಚಾರ ಸಂಕಿರಣಗಳು ನಡೆಯಲಿವೆ ಎಂದರು.

ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ನೃತ್ಯ ಮತ್ತು ಹಾಸ್ಯ ನಾಟಕಗಳ ಪ್ರದರ್ಶನ ಇರಲಿದೆ. ಮಕ್ಕಳ ಚಲನಚಿತ್ರೋತ್ಸವ, ಸಾಕ್ಷ್ಯ ಚಿತ್ರಗಳನ್ನು ತೋರಿಸಲಾಗುತ್ತದೆ. ವಿಪ್ರೋ ಸಂಸ್ಥೆಯ ಸಹಾಯದಿಂದ ನಾಲ್ಕು ಸಾವಿರ ಸಂಚಾರ ಪೊಲೀಸರಿಗೆ ಉಚಿತ ಮಾಸ್ಕ್ ವಿತರಿಸಲಿದ್ದೇವೆ ಎಂದು ಪ್ರಕಾಶ್‌ ಬೆಳವಾಡಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಪರಿಸರ ನಾಶದ ಬಗ್ಗೆ ಜಾಗೃತಿ ಮತ್ತು ಪರಿಸರ ಉಳಿಸಿಕೊಳ್ಳಲು ಇರುವ ಮಾರ್ಗಗಳ ಬಗ್ಗೆ ಸಂದೇಶ ಸಾರಲು 27 ಕಲಾವಿದರು ಕಲಾ ಪ್ರದರ್ಶನ ನೀಡಲಿದ್ದಾರೆ. ಪ್ರದರ್ಶನದಲ್ಲಿ ಮಾರಾಟವಾದ ಕಲಾಕೃತಿಗಳಿಂದ ಬರುವ ಹಣವನ್ನು ಪರಿಸರ ಸುಧಾರಣಾ ಯೋಜನೆಗೆ ಬಳಸಲಾಗುವುದು ಎಂದರು.

ವಿಶ್ವ ಪರಿಸರ ದಿನಾಚರಣೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜೂ.1ರಿಂದ 5ರವರೆಗೆ ಕ್ರಮವಾಗಿ ಲಾಲ್‌ಬಾಗ್‌, ಸ್ಯಾಂಕಿ ಟ್ಯಾಂಕ್‌, ಬೆಂಗಳೂರು ಅಂತಾರಾಷ್ಟ್ರೀಯ ಕೇಂದ್ರ, ರಾಜಾಜಿನಗರ ಮತ್ತು ವಿಧಾನಸೌಧದಿಂದ ಮೆಟ್ರೋ ರಂಗೋಲಿ ಕೇಂದ್ರದ ವರೆಗೆ ಬೈಸಿಕಲ್‌ ಜಾಥಾ ನಡೆಯಲಿದೆ ಎಂದು ಬೆಳವಾಡಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.