ಲ್ಯಾಬ್‌ನಲ್ಲಿ ಸಂಭವಿಸಿದ್ದು ಆಕಸ್ಮಿಕ ಸ್ಫೋಟ!


Team Udayavani, Mar 3, 2020, 3:10 AM IST

labnalli

ಬೆಂಗಳೂರು: ಮೂರು ತಿಂಗಳ ಹಿಂದೆ ರಾಜ್ಯದ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ನಡೆದ ರಾಸಾಯನಿಕ ವಸ್ತು ಸ್ಫೋಟ “ಆಕಸ್ಮಿಕ ಘಟನೆಯೇ ಹೊರತು ಅಧಿಕಾರಿಗಳ ನಿರ್ಲಕ್ಷ್ಯ ಅಥವಾ ಬೇಜವಾಬ್ದಾರಿಯಿಂದ ನಡೆದಿಲ್ಲ. ಅಲ್ಲದೆ, ಸ್ಫೋಟಕ ವಸ್ತುವನ್ನು ತಿಂಗಳುಗಟ್ಟಲೆ ಶೇಖರಿಸಿದ್ದೇ ಸ್ಫೋಟಕ್ಕೆ ಕಾರಣ’ ಎಂದು ವಿಶೇಷ ತನಿಖಾ ತಂಡ, ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದೆ.

ರಾಜ್ಯ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಡಾ ಎಸ್‌.ಪರಶಿವಮೂರ್ತಿ ನೇತೃತ್ವದ ಐವರು ಅಧಿಕಾರಿಗಳ ತಂಡ ಈ ಬಗ್ಗೆ ತನಿಖೆ ನಡೆ ಸಿತ್ತು. ಯಾವುದೇ ಸ್ಫೋಟ ಸಂಭವಿಸಿ ಅವಘಡವಾದರೂ ಪ್ರಥಮ ಮಾಹಿತಿ ವರದಿ (ಎಫ್ಐಆರ್‌) ದಾಖಲಿಸಬೇಕು ಎಂಬ ನಿಯಮವಿದ್ದರೂ ಈ ಪ್ರಕರಣದಲ್ಲಿ ಇದುವರೆಗೂ ದಾಖಲಾಗಿಲ್ಲ. ಈಗ ಸಲ್ಲಿಸಲಾಗಿರುವ ವರದಿಯಲ್ಲಿಯೂ ಈ ಬಗ್ಗೆ ಮಾಹಿತಿ ಕಲೆ ಹಾಕಿಲ್ಲ ಅಥವಾ ಎಫ್ಐಆರ್‌ ದಾಖಲಿಸುವ ಬಗ್ಗೆ ಸಲಹೆ ನೀಡಲಾಗಿಲ್ಲ.

ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಸ್ಫೋಟಗೊಂಡ ರಾಸಾಯನಿಕ ವಸ್ತುವನ್ನು ಸುಮಾರು ಒಂದು ವರ್ಷಕ್ಕೂ ಅಧಿಕ ಕಾಲ ಕಾಲ ಶೇಖರಿಸಲಾಗಿತ್ತು. ಇದು ನಿಯಮಬಾಹಿರ. ಅಲ್ಲದೆ, ಅಧ್ಯಯನ ನಡೆಸಲು ಟ್ರೈ ಅಸಿಟೋನ್‌ ಟ್ರೈ ಪೆರಾಕ್ಸಿಡ್‌ (ಟಿಎಟಿಪಿ) ಎಂಬ ರಾಸಾಯನಿಕ ವಸ್ತುವನ್ನು ಬೆರೆಸಲು ಮುಂದಾದಾಗ ಸ್ಫೋಟಗೊಂಡು ಅವ ಘಡ ಸಂಭವಿಸಿದೆ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ.

ಸಮಸ್ಯೆಗಳ ಬಗ್ಗೆ ಉಲ್ಲೇಖ: ಎಫ್ಎಸ್‌ಎಲ್‌ನಲ್ಲಿರುವ ಕೆಲವೊಂದು ಸಮಸ್ಯೆಗಳ ಬಗ್ಗೆಯೂ ವರದಿಯಲ್ಲಿ ಉಲ್ಲೇಖೀಸಲಾಗಿದೆ. ಸಿಬ್ಬಂದಿ ಕೊರತೆ, ಮೂಲಭೂತ ಸೌಲಭ್ಯಗಳ ಅಗತ್ಯತೆ ಹಾಗೂ ತಾಂತ್ರಿಕ ಉಪಕರಣಗಳ ಬಳಕೆ ಕುರಿತಂತೆ ಸರ್ಕಾರ ಮತ್ತು ಇಲಾಖೆ ಮುಖ್ಯಸ್ಥರ ಗಮನಕ್ಕೆ ತರಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಮಿತಿಯಲ್ಲಿದ್ದ ಅಧಿಕಾರಿಗಳು: ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಡಾ ಎಸ್‌. ಪರಶಿವಮೂರ್ತಿ, ದಕ್ಷಿಣ ವಿಭಾಗದ ಡಿಸಿಪಿ ಡಾ.ರೋಹಿಣಿ ಕಟೋಚ್‌ ಸೆಪಟ್‌, ವಿಧಿವಿಜ್ಞಾನ ಪ್ರಯೋಗಾಲಯದ ನಿರ್ದೇಶಕ ಅಭಿನವ್‌ ಖರೆ, ಎಫ್ಎಸ್‌ಎಲ್‌ನ ರಾಸಾಯನಿಕ ವಿಭಾಗದ ಮುಖ್ಯಸ್ಥೆ ವಾಣಿ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ ಏರೋಸ್ಪೇಸ್‌ ವಿಭಾಗದ ಪ್ರಧಾನ ವಿಜ್ಞಾನಿ ಹಾಗೂ ಪ್ರೊಪೆಲ್ಲೆಂಟ್‌ ಕೆಮಿಸ್ಟ್ರಿ ತಜ್ಞರೂ ಆಗಿರುವ ಚಾರ್ಲಿ ಉಮ್ಮನ್‌ ಅವರ ತಂಡ ರಚಿಸಲಾಗಿತ್ತು.

ಏನಿದು ಘಟನೆ?: 2018 ಅ.15ರಂದು ರಾಯಚೂರು ಹೊರವಲಯದ ಮಂಚಾಲಿ ಲೇಔಟ್‌ನಲ್ಲಿ ನಡೆದ ಸ್ಫೋಟದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ವೇಳೆ ಪತ್ತೆಯಾದ ಸ್ಫೋಟಕ ವಸ್ತುವನ್ನು ಬಾಂಬ್‌ ನಿಷ್ಕ್ರಿಯಗೊಳಿ ಸದೆ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದರು. ಬಳಿಕ ಈ ಸ್ಫೋಟಕ ವನ್ನು ಬೆಂಗಳೂರಿನ ಎಫ್ಎಸ್‌ಎಲ್‌ಗೆ ಕಳುಹಿಸಲಾಗಿತ್ತು. 2019ರ ನ.29ರಂದು ಸರದಿ ಪ್ರಕಾರ ಪರೀಕ್ಷೆಗೊಳಪಡಿಸಲು ಮುಂದಾದಾಗ ಅವಘಡ ಸಂಭವಿಸಿತ್ತು. ಸ್ಫೋಟದಲ್ಲಿ ಎಫ್ಎಸ್‌ಎಲ್‌ನ ಅಧಿಕಾರಿ ಗಳಾದ ಶ್ರೀನಾಥ್‌ ಮತ್ತು ನವ್ಯಾ ಅವರಿಗೆ ಗಂಭೀರ ಗಾಯಗಳಾಗಿತ್ತು. ನವ್ಯಾ ಅವರ ಕಣ್ಣುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿತ್ತು.

ಸಮಿತಿಯ ಸಲಹೆಗಳು
-ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಇಂಥ ಘಟನೆಗಳು ಸಂಭವಿಸಬಾರದು.
-ರಾಸಾಯನಿಕ ವಸ್ತುಗಳನ್ನು ನಿಗದಿತ ದಿನಕ್ಕಿಂತ ಅಧಿಕ ಕಾಲ ಶೇಖರಿಸಬಾರದು.
-ಸರದಿ ಪ್ರಕಾರವೇ ಸಂಶೋಧನೆ ನಡೆಸಬೇಕಿದ್ದರೆ ಅದನ್ನು ಸುರಕ್ಷಿತ ಜಾಗದಲ್ಲಿ ಶೇಖರಿಸಿಡಬೇಕು.
-ಎಲ್ಲಾ ರೀತಿಯಲ್ಲೂ ಅಗತ್ಯ ಮುನ್ನೆಚ್ಚರಿಕಾ ಕ್ರಮ ಗಳನ್ನು ತೆಗೆದುಕೊಳ್ಳಬೇಕು.

* ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.