ವಿಶೇಷಾಧಿಕಾರಿ ವಿರುದ್ಧ ನಿಂದನೆ ಆರೋಪ
Team Udayavani, Jul 23, 2018, 12:06 PM IST
ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್ಐ) ಡೀನ್ ಸೂಚನೆಯಂತೆ ಪರಿಶೀಲನೆಗೆ ವೈದ್ಯರು ಕೇಳಿದ ದಾಖಲೆಗಳನ್ನು ನೀಡಿದ ಕಾರಣಕ್ಕೆ ಬಿಎಂಸಿಆರ್ಐನ ಟ್ರಾಮಾ ಕೇರ್ ಸೆಂಟರ್ನ ವಿಶೇಷಾಧಿಕಾರಿ ಡಾ.ಬಾಲಾಜಿ ಪೈ ಅವರು ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿ ದಾದಿಯೊಬ್ಬರು ಡೀನ್ ಡಾ.ಎಚ್.ಎಸ್.ಸತೀಶ್ ಅವರಿಗೆ ದೂರು ನೀಡಿದ್ದಾರೆ.
ಜು. 19ರಂದು ಡೀನ್ ಅವರ ಸೂಚನೆಯಂತೆ ಪರಿಶೀಲನೆಗಾಗಿ ದಾಖಲೆ ನೀಡುವಂತೆ ಡಾ.ಮಧುಸೂದನ್ ಎಂಬುವರು ಕೇಳಿದ್ದರು. ವಿಶೇಷಾಧಿಕಾರಿ ಅನುಮತಿ ಪಡೆದರಷ್ಟೇ ಕಡತ ನೀಡುವುದಾಗಿ ಹೇಳಿದೆ. ಅದಕ್ಕೆ ತಾವೇ ನೇರವಾಗಿ ವಿಶೇಷಾಧಿಕಾರಿಯೊಂದಿಗೆ ಮಾತನಾಡುವುದಾಗಿ ತಿಳಿಸಿದ್ದರಿಂದ ಕಡತ ನೀಡಿದ್ದೆ.
ಇದಕ್ಕೆ ಆಕ್ಷೇಪಿಸಿದ ವಿಶೇಷಾಧಿಕಾರಿಗಳು ಇತರೆ ಸಿಬ್ಬಂದಿಯ ಸಮ್ಮುಖದಲ್ಲೇ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಇದರಿಂದ ತೀವ್ರ ಮನನೊಂದಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನ ಶುಶ್ರೂಷಕಿಯೊಬ್ಬರು ಡೀನ್ ಅವರಿಗೆ ದೂರು ನೀಡಿದ್ದಾರೆ. ಈ ದೂರಿನ ಪತ್ರಕ್ಕೆ 21 ಸಿಬ್ಬಂದಿ ಸಹಿ ಮಾಡಿದ್ದಾರೆ.
ಪರಿಶೀಲಿಸಿ ಕ್ರಮ: ವಿಶೇಷಾಧಿಕಾರಿ ಡಾ.ಬಾಲಾಜಿ ಪೈ ಅವರು ನಿಂದಿಸಿದ್ದಾರೆ ಎಂದು ಆರೋಪಿಸಿ ಶುಶ್ರೂಷಕಿ ಒಬ್ಬರು ದೂರು ನೀಡಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿಎಂಸಿಆರ್ಐ ನಿರ್ದೇಶಕರೂ ಆದ ಡೀನ್ ಡಾ.ಎಚ್.ಎಸ್.ಸತೀಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್