ನೆರೆ ವಾಹನಗಳ ಕಿರಿಕಿರಿ ದೊಡ್ಡದು!


Team Udayavani, Dec 7, 2019, 10:55 AM IST

bng-tdy-1

ಬೆಂಗಳೂರು: ನಗರದ ಸಂಚಾರ ದಟ್ಟಣೆಗೆ ಸ್ಥಳೀಯ ನೋಂದಣಿ ವಾಹನಗಳ ಕೊಡುಗೆ ಮಾತ್ರವಲ್ಲ; ನಿತ್ಯ ಬಂದುಹೋಗುವ ನೆರೆ ರಾಜ್ಯ ಹಾಗೂ ಜಿಲ್ಲೆ ವಾಹನಗಳ ಕೊಡುಗೆ ಕೂಡ ದೊಡ್ಡದಿದೆ.

ಸಾರಿಗೆ ಇಲಾಖೆ ಮಾಹಿತಿ ಪ್ರಕಾರ ಅಂತಹ ವಾಹನಗಳ ಸಂಖ್ಯೆ ಶೇ. 20-22ರಷ್ಟಿದೆ. ಅಂದರೆ ಸ್ಥಳೀಯ ನೋಂದಣಿ ವಾಹನಗಳಿಗೆ ಹೋಲಿಸಿದರೆ, ಅವುಗಳ ಸಂಖ್ಯೆ 18-20 ಲಕ್ಷ. ಆ ಪೈಕಿ ಬಹುತೇಕ ನಾಲ್ಕು ಹಾಗೂ ಆರು ಚಕ್ರದ ವಾಹನಗಳದ್ದು ಸಿಂಹಪಾಲು. ಆದರೆ, ಇವುಗಳ ಸಂಚಾರ, ನಿಲುಗಡೆ ಸೇರಿದಂತೆ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರ– “ಇಲ್ಲ‘. ಇಲ್ಲಿರುವ ವಾಹನಗಳ ನಿಲುಗಡೆಗೇ ಸಮರ್ಪಕ ವ್ಯವಸ್ಥೆ ಇಲ್ಲ. ಸಂಚಾರಕ್ಕೂ ಯೋಗ್ಯ ರಸ್ತೆಗಳಿಲ್ಲ. ಈ ಹೆಚ್ಚುವರಿ ವಾಹನಗಳ ಓಡಾಟದಿಂದ ಮತ್ತಷ್ಟು ಸಂಚಾರದಟ್ಟಣೆ ಎದುರಾಗುತ್ತಿದೆ.

ನಗರದಲ್ಲಿ ಸುಮಾರು 14 ಸಾವಿರ ಕಿ.ಮೀ. ರಸ್ತೆಗಳಿದ್ದು, ಆ ರಸ್ತೆಗಳು ಪ್ರತಿ ಗಂಟೆಗೆ 20-25 ಲಕ್ಷ ವಾಹನಗಳು ಸಂಚರಿಸುವ ಸಾಮಾರ್ಥ್ಯ ಹೊಂದಿವೆ. ಆದರೆ, ನೆರೆ ರಾಜ್ಯ ಮತ್ತು ಜಿಲ್ಲೆ ನೋಂದಣಿ ವಾಹನಗಳು ಹೆಚ್ಚುವರಿಯಾಗಿ ಸಂಚರಿಸುವುದರಿಂದ ವಾಹನಗಳ ವೇಗದಲ್ಲಿ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ. ಇನ್ನು ಕೆಲ ರಸ್ತೆಗಳಲ್ಲಿ ಪಾರ್ಕಿಂಗ್‌ ವ್ಯವಸ್ಥೆ ಇಲ್ಲದೆ ಸುಗಮ ಸಂಚಾರಕ್ಕೆ ತೊಡಕಾಗಿದೆ ಎನ್ನುತ್ತಾರೆ ಸಂಚಾರ ತಜ್ಞರು.

ಕೈಗಾರಿಕಾ, ಐಟಿಬಿಟಿ ಪ್ರದೇಶಗಳಲ್ಲಿಯೇ ಹೆಚ್ಚು: ನಗರದ ಪೀಣ್ಯ ಕೈಗಾರಿಕಾ ಪ್ರದೇಶ, ಜಾಲಹಳ್ಳಿ ಹಾಗೂ ಐಟಿಬಿಟಿ ಪ್ರದೇಶಗಳಾದ ಎಲೆಕ್ಟ್ರಾನಿಕ್‌ ಸಿಟಿ, ಕೋರಮಂಗಲ ಈ ಭಾಗಗಳಲ್ಲಿಯೇ ನಾಲ್ಕು ಹಾಗೂ ಆರು ಚಕ್ರದ ವಾಹನಗಳು ಹೆಚ್ಚಾಗಿ ಸಂಚರಿಸುತ್ತವೆ. ಸರಕು ಸಾಗಣೆ ಲಾರಿಗಳು ಮುಂಜಾನೆ 4 ಗಂಟೆ ಸುಮಾರಿಗೆ ಹಾಜರಾಗುವುದಲ್ಲದೆ, ಪ್ರಯಾಣಿಕರನ್ನು ಹೊತ್ತುತರುವ ವಾಹನಗಳೂ ಜತೆಯಾಗುತ್ತವೆ. ಆದರೆ, ಇವುಗಳಿಗೆ ಬೇಕಾದ ಪಾರ್ಕಿಂಗ್‌ ವ್ಯವಸ್ಥೆ, ಗುಣಮಟ್ಯದ ರಸ್ತೆಗಳಿಲ್ಲ. ಇದರಿಂದ ಎಲ್ಲೆಂದರಲ್ಲಿ ವಾಹನಗಳ ನಿಲುಗಡೆ ಮಾಡಲಾಗುತ್ತದೆ. ಒಮ್ಮೆ ಬಂದ ಲಾರಿಗಳು ಕನಿಷ್ಠ 2-3 ದಿನಗಳ ಕಾಲ ನಗರದಲ್ಲೇ ಇರುತ್ತವೆ.

ಇನ್ನು ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿ ಕೆಲ ಪೆಟ್ರೋಲ್‌ ಬಂಕ್‌, ಡಾಬಾಗಳ ಮುಂಭಾಗವೇ ಪಾರ್ಕಿಂಗ್‌ ತಾಣಗಳಾಗಿದ್ದು, ಹೆಚ್ಚುವರಿ ವಾಹನಗಳನ್ನು ರಸ್ತೆಗಳಲ್ಲೇ ನಿಲ್ಲಿಸುತ್ತಾರೆ. ಇತ್ತೀಚೆಗಷ್ಟೇ ನಗರ ಸಂಚಾರ ಪೊಲೀಸರು ಗುರುತಿಸಿರುವ ಹೈಡೆನ್ಸಿಟಿ ಕಾರಿಡಾರ್‌ಗಳಲ್ಲಿಯೂ ಈ ವಾಹನಗಳ ಹಾವಳಿ ಹೆಚ್ಚಿದೆ. ಉದಾಹರಣೆಗೆ ಬನ್ನೇರುಘಟ್ಟ, ಮೈಸೂರು ರಸ್ತೆ, ಹಳೇ ಮದ್ರಾಸ್‌ ರಸ್ತೆ, ಏರ್‌ಪೋರ್ಟ್‌ ರಸ್ತೆಗಳು. ಈ ಭಾಗಗಳಲ್ಲಿ ಪ್ರವಾಸಿಗಳೇ ಅಧಿಕವಾಗಿ ಓಡಾಡುತ್ತಾರೆ ಎನ್ನುತ್ತಾರೆ ಸಾರಿಗೆ ಇಲಾಖೆ ಅಧಿಕಾರಿಗಳು.

ನೆರೆ ರಾಜ್ಯದಲ್ಲಿ ನೊಂದಣಿ ನಗರದಲ್ಲಿ ಸಂಚಾರ!: ತಮಿಳುನಾಡು, ಆಂಧ್ರ ಪ್ರದೇಶ, ಕೇರಳ, ಒರಿಸ್ಸಾ ಮತ್ತಿತರ ರಾಜ್ಯಗಳಿಂದ ನಗರಕ್ಕೆ ಸಾವಿರಾರು ಮಂದಿ ವಲಸಿಗರು ಜೀವನೋಪಾಯಕ್ಕಾಗಿ ಬಂದು ನಗರದಲ್ಲಿ ಬಹಳಷ್ಟು ವರ್ಷಗಳಿಂದ ವಾಸವಾಗಿದ್ದು, ಬಹುತೇಕ ಮಂದಿ ಅಲ್ಲಿ ನೋಂದಣಿ ಮಾಡಿಸಿದ್ದ ದ್ವಿಚಕ್ರ, ಕಾರುಗಳನ್ನು ಇಲ್ಲಿ ಬಳಸುತ್ತಾರೆ. ನಿಯಮದ ಪ್ರಕಾರ ಯಾವುದೇ ರಾಜ್ಯದಲ್ಲಿ ವಾಹನ ಖರೀದಿಸಿದರೆ, ದೇಶದ ಎಲ್ಲೆಡೆ ಸಂಚಾರ ಮಾಡಬಹುದು. ಆದರೆ, ಒಂದು ವೇಳೆ ವರ್ಷಗಟ್ಟಲೇ ವಾಸಿಸುವ ಅಗತ್ಯವಿದ್ದರೆ, ವಾಹನ ಮಾಲೀಕರು ಸ್ಥಳೀಯ ವಿಳಾಸ ಬದಲಾವಣೆ ಮಾಡಿಕೊಂಡು, ತೆರಿಗೆ ಪಾವತಿಸಿ, ಶಾಶ್ವತ ನೋಂದಣಿ ಪಡೆದು ಹೊಸ ನಂಬರ್‌ ಪ್ಲೇಟ್‌ ಪಡೆಯಬೇಕು. ಆದರೆ, ವಾಹನ ಸವಾರರು ಸಮರ್ಪಕವಾಗಿ ಪಾಲಿಸುತ್ತಿಲ್ಲ. ಇನ್ನು ಕೆಲವರು ಪ್ರಾಜೆಕ್ಟ್ ಹಾಗೂ ಇನ್ನಿತರೆ ಕಾರಣಗಳನ್ನು ನೀಡಿ ವರ್ಷಗಟ್ಟಲೇ ಇಲ್ಲೇ ಇರುತ್ತಾರೆ. ಅಂತಹ ವಾಹನಗಳ ವಿರುದ್ಧ ಕ್ರಮಕೈಗೊಳ್ಳುವುದು ಕಷ್ಟ. ಈ ಮಧ್ಯೆ ಗೋವಾ ಮತ್ತು ಪುದುಚೇರಿಯಲ್ಲಿ ವಾಹನ ನೋಂದಣಿ ಶುಲ್ಕ ರಾಜ್ಯಕ್ಕಿಂತ ಕಡಿಮೆಯಿದೆ. ಹೀಗಾಗಿ ನಗರದ ಸಾಕಷ್ಟು ಮಂದಿ ಆ ರಾಜ್ಯಗಳಲ್ಲಿ ಐಷಾರಾಮಿ ಕಾರುಗಳನ್ನು ಖರೀದಿಸಿ, ಇಲ್ಲಿ ಸಂಚರಿಸುತ್ತಾರೆ. ಈ ಪೈಕಿ ಕೆಲವರು ಸ್ಥಳೀಯ ತೆರಿಗೆ ಪಾವತಿಸಿದರೆ, ಇನ್ನು ಕೆಲವರು ಅಕ್ರಮವಾಗಿ ಸಂಚರಿಸುತ್ತಿದ್ದಾರೆ.

ವಿಶೇಷ ಕಾರ್ಯಾಚರಣೆ ವೇಳೆ ಪತ್ತೆಯಾದಾಗ ಎಚ್ಚರಿಕೆ ನೀಡಿದರೆ, ಕೆಲವೇ ದಿನಗಳ ಹಿಂದಷ್ಟೇ ನಗರಕ್ಕೆ ಬಂದಿದ್ದು, ಸದ್ಯದಲ್ಲೇ ಬದಲಾವಣೆ ಮಾಡಿಕೊಳ್ಳುತ್ತೇವೆ ಎಂದು ಹಾರಿಕೆ ಉತ್ತರ ನೀಡುತ್ತಾರೆ. ತಾಂತ್ರಿಕ ನೆರವು ಇಲ್ಲದಿರುವುದರಿಂದ ಅಂತಹ ವಾಹನಗಳನ್ನು ಪತ್ತೆ ಹಚ್ಚುವುದು ದೊಡ್ಡ ಸವಾಲು ಎನ್ನುತ್ತಾರೆ ಸಾರಿಗೆ ಇಲಾಖೆ ಅಧಿಕಾರಿಗಳು.

 

ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.