ಸ್ನೇಹಿತನ ಕೊಂದ ಆರೋಪಿ ಬಂಧನ
Team Udayavani, Mar 14, 2019, 6:03 AM IST
ಬೆಂಗಳೂರು: ಇತ್ತೀಚೆಗೆ ಬೊಮ್ಮನಹಳ್ಳಿಯ ಹಿಂದೂ ರುದ್ರಭೂಮಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಮಂಜುನಾಥ (48) ಎಂಬುವವರನ್ನು ಹತ್ಯೆಗೈದಿದ್ದ ಆರೋಪಿಯನ್ನು ಎಚ್ ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಮಂತ್ರಾಲಯ ಮೂಲದ ಶೇಖರಪ್ಪ (46) ಬಂಧಿತ. ಆರೋಪಿ ಮಾ.9ರಂದು ಗೋವಿಂದಶೆಟ್ಟಿ ಪಾಳ್ಯ ನಿವಾಸಿ ಮಂಜುನಾಥನನ್ನು ಕಲ್ಲು ಎತ್ತಿಹಾಕಿ ಹತ್ಯೆಗೈದು, ಪರಾರಿಯಾಗಿದ್ದ. ಘಟನಾ ಸ್ಥಳದ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಕೆಲ ವರ್ಷಗಳ ಹಿಂದೆ ನಗರಕ್ಕೆ ಬಂದಿರುವ ಆರೋಪಿ ಮಂಗಮ್ಮನಪಾಳ್ಯದಲ್ಲಿ ವಾಸವಾಗಿದ್ದು, ಗಾರೆ ಕೆಲಸ ಮಾಡುತ್ತಿದ್ದ. ಈ ಮಧ್ಯೆ ಮದ್ಯದ ಅಂಗಡಿಯಲ್ಲಿ ಪರಿಚಯವಾದ ಮಂಜುನಾಥನಿಗೆ ಆಗಾಗ ಮದ್ಯ ಸೇವಿಸಲು ಹಣ ಕೊಡುತ್ತಿದ್ದ. ಆದರೆ, ಮಂಜುನಾಥ ಹಣ ಹಿಂದಿರುಗಿಸುತ್ತಿರಲಿಲ್ಲ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು.
ಈ ಮಧ್ಯೆ ಮಾ.6ರಂದು ತಡರಾತ್ರಿ ಇಬ್ಬರೂ ಬೊಮ್ಮನ ಹಳ್ಳಿಯ ಬಾರ್ವೊಂದರಲ್ಲಿ ಮದ್ಯ ಖರೀದಿಸಿ ಕುಡಿಯಲು ರುದ್ರಭೂಮಿ ಒಳಗೆ ಹೋಗಿದ್ದಾರೆ. ಈ ವೇಳೆ ಇಬ್ಬರ ನಡುವೆ ಹಣಕಾಸಿನ ವಿಚಾರಕ್ಕೆ ವಾಗ್ವಾದ ನಡೆದಿದ್ದು, ಕೋಪಗೊಂಡ ಶೇಖರಪ್ಪ, ಮದ್ಯದ ಬಾಟಲಿಯಲ್ಲಿ ಮಂಜುನಾಥನ ತಲೆಗೆ ಹೊಡೆದಿದ್ದು, ಆತ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ಗಾಬರಿಗೊಂಡ ಆರೋಪಿ ಅಲ್ಲೇ ಇದ್ದ ನಾಲ್ಕೈದು ಕಲ್ಲುಗಳನ್ನು ಮಂಜುನಾಥನ ಮೇಲೆ ಎತ್ತಿ ಹಾಕಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು