ಬಿಸ್ಕತ್ ಪೊಟ್ಟಣದಲ್ಲಿ ಗಾಂಜಾ ಮಾರುತ್ತಿದ್ದವನ ಬಂಧನ
Team Udayavani, Sep 17, 2018, 12:23 PM IST
ಬೆಂಗಳೂರು: ಬಿಸ್ಕತ್ ಪ್ಯಾಕೆಟ್ನಲ್ಲಿ ಬಚ್ಚಿಟ್ಟು ಗಾಂಜಾ ಮಾರಾಟ ಮಾಡುತ್ತಿದ್ದ ಆಂಧ್ರ ಮೂಲದ ವೆಂಕಟರಮಣ (35) ಎಂಬಾತನನ್ನು ವೈಟ್ಫೀಲ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಭಾನುವಾರ ಬೆಳಗ್ಗೆ 9 ಗಂಟೆಗೆ ಅಂಬೇಡ್ಕರ್ ನಗರದ ದಸರಾ ಮೈದಾನದ ಸಮೀಪ ಪಾರೆಲ-ಜಿ ಬಿಸ್ಕತ್ ಪೊಟ್ಟಣದಲ್ಲಿ ಗಾಂಜಾ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿ ವೆಂಕಟರಮಣನನ್ನು ಬಂಧಿಸಲಾಗಿದೆ. ಆತನಿಂದ 2 ಕೆ.ಜಿ 200 ಗ್ರಾಂ. ತೂಕದ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ.
ಆಂಧ್ರದ ಮಧ್ಯವರ್ತಿಗಳಿಂದ ಗಾಂಜಾ ತರಿಸಿಕೊಂಡು ಆರೋಪಿ ಅನುಮಾನ ಬರದಂತೆ ಬಿಸ್ಕೆಟ್ ಪೊಟ್ಟಣದಲ್ಲಿ ಚಿಕ್ಕ ಪ್ಯಾಕೆಟ್ಗಳಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದು, ಈತನ ಹಿಂದೆ ವ್ಯವಸ್ಥಿತ ಜಾಲವಿರುವ ಶಂಕೆಯಿದೆ. ಈ ಬಗ್ಗೆ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Voting ಹದಿನೈದು ನಿಮಿಷ ಕಾದು ಮತ ಹಾಕಿದ ಅನಂತಕುಮಾರ್ ಹೆಗಡೆ!
Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್