ಕುಖ್ಯಾತ ಮನೆಕಳ್ಳ ಜಪಾನ್‌ ರಾಜ ಬಂಧನ


Team Udayavani, May 15, 2019, 3:02 AM IST

arrest3

ಬೆಂಗಳೂರು: ಕೆಲ ವರ್ಷಗಳ ಹಿಂದೆ ಪೊಲೀಸರ ಬಾಕ್ಮಿದಾರನಾಗಿದ್ದ ಹಾಗೂ ಪೊಲೀಸರ ತನಿಖಾ ವಿಧಾನ ತಿಳಿದುಕೊಂಡು ತನ್ನದೇ ಪ್ರತ್ಯೇಕ ತಂಡ ಕಟ್ಟಿಕೊಂಡು ಮನೆ ಕಳ್ಳತನ ಮಾಡುತ್ತಿದ್ದ ರಾಜ ಅಲಿಯಾಸ್‌ ಜಪಾನ್‌ ರಾಜ, ಆತನ ಸಹೋದರ ಸೇರಿ ಮೂವರು ಮತ್ತೂಮ್ಮೆ ಕೆ.ಪಿ.ಅಗ್ರಹಾರ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಜೆ.ಪಿ.ನಗರದ ಬಿಳೇಕಳ್ಳಿ ನಿವಾಸಿ ರಾಜ ಅಲಿಯಾಸ್‌ ಜಪಾನ್‌ ರಾಜ (40), ಆತನ ಸಹೋದರ ಗೋಪಿ (43) ಮತ್ತು ಸ್ನೇಹಿತ ಮಾಗಡಿ ರಸ್ತೆಯ ಡೇವಿಡ್‌ (34) ಬಂಧಿತರು.

ನಗರದ ವಿವಿಧ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಎಸಗಿದ್ದ 44 ಮನೆಗಳ್ಳನ ಪ್ರಕರಣಗಳಲ್ಲಿ ಡಿ.12ರಂದು ಜೈಲು ಸೇರಿದ್ದ ಜಪಾನ್‌ ರಾಜ, ಫೆಬ್ರವರಿಯಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ಅನಂತರ ತನ್ನ ಸಹೋದರ ಮತ್ತು ಸ್ನೇಹಿತನ ಜತೆ ಸೇರಿಕೊಂಡು 18 ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.

ಬಂಧಿತರಿಂದ 35 ಲಕ್ಷ ರೂ. ಮೌಲ್ಯದ 1 ಕೆ.ಜಿ.119 ಗ್ರಾಂ ತೂಕದ ಚಿನ್ನಾಭರಣ ಮತ್ತು 60 ಸಾವಿರ ರೂ. ಮೌಲ್ಯದ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್‌ ಆಯುಕ್ತ ಟಿ.ಸುನಿಲ್‌ ಕುಮಾರ್‌ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಜ.26ರಂದು ಡೇವಿಡ್‌ ಹಾಗೂ ಗೋಪಿ ಕೆ.ಪಿ.ಅಗ್ರಹಾರ ಠಾಣಾ ವ್ಯಾಪ್ತಿಯ ಮರಿಯಪ್ಪನಪಾಳ್ಯ ನಿವಾಸಿ ವೆಂಕಟೇಶ್‌ ಎಂಬುವರ ಬೀಗ ಹಾಕಿದ ಮನೆಯಲ್ಲಿ ಕಳ್ಳತನ ಮಾಡಿ, 2,70,000 ರೂ. ಮೌಲ್ಯದ 123 ಗ್ರಾಂ ತೂಕದ ಚಿನ್ನಾಭರಣ,

30 ಸಾವಿರ ರೂ. ನಗದು ಕಳವು ಮಾಡಿ ಪರಾರಿಯಾಗಿದ್ದರು. ಪ್ರಕರಣದ ತನಿಖೆಕೈಗೊಂಡ ಪೊಲೀಸರು ಇತ್ತೀಚೆಗಷ್ಟೇ ಇಬ್ಬರು ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸಿದಾಗ ಜಪಾನ್‌ ರಾಜನ ಕೈವಾಡ ಬಗ್ಗೆ ಮಾಹಿತಿ ಲಭ್ಯವಾಗಿತ್ತು ಎಂದು ಪೊಲೀಸರು ಹೇಳಿದರು.

ಕೃತ್ಯ ಹೇಗೆ?: ಕೆಲ ವರ್ಷಗಳ ಹಿಂದೆ ಸಣ್ಣ-ಪುಟ್ಟ ಕೆಲಸ ಮಾಡಿಕೊಂಡಿದ್ದ ರಾಜ ಸ್ಥಳೀಯ ಪೊಲೀಸರಿಗೆ ಬಾತ್ಮೀದಾರನಾಗಿದ್ದ. ಆ ವೇಳೆಯೇ ಪೊಲೀಸರು ಯಾವ ಪ್ರಕರಣದಲ್ಲಿ ಹೇಗೆ ತನಿಖೆ ನಡೆಸುತ್ತಾರೆ ಎಂದು ತಿಳಿದುಕೊಂಡಿದ್ದ. ಅನಂತರ ಮೋಜಿನ ಜೀವನಕ್ಕಾಗಿ ಹತ್ತು ವರ್ಷಗಳಿಂದ ಮನೆಗಳ್ಳತನ ಮಾಡುವುದನ್ನೇ ವೃತ್ತಿಯನ್ನಾಗಿಸಿಕೊಂಡಿರುವ ರಾಜ ತನ್ನ ಸಹಚರರ ಜತೆ ಸೇರಿಕೊಂಡು ಮನೆ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದ.

ಮೊದಲಿಗೆ ಕಳವು ಮಾಡಿದ ದ್ವಿಚಕ್ರ ವಾಹನಗಳಲ್ಲಿ ಮೂವರು ಆರೋಪಿಗಳು ನಗರದ ಪ್ರತಿಷ್ಠಿತ ಪ್ರದೇಶಗಳಲ್ಲಿ ಸುತ್ತಾಡುತ್ತಿದ್ದರು. ಈ ವೇಳೆ ದಿನಗಟ್ಟಲೇ ಮನೆ ಮುಂದೆ ಬಿದ್ದಿರುವ ಪೇಪರ್‌, ರಂಗೋಲಿ ಹಾಕದೆ ಕಸ ಬಿದ್ದಿರುವ ಮನೆಗಳನ್ನು ಗುರುತಿಸುತ್ತಿದ್ದರು. ಬಳಿಕ ಅದೇ ದಿನ ರಾತ್ರಿ ಅಥವಾ ಮರು ದಿನ ಬೆಳಗ್ಗೆ ವೇಳೆಯಲ್ಲಿ ಅಂತಹ ಮನೆಗಳ ಬಳಿ ಬಂದು ಕೃತ್ಯಕ್ಕೆ ಸಜ್ಜಾಗುತ್ತಿದ್ದರು.

ಈ ಪೈಕಿ ರಾಜ ಅಲಿಯಾಸ್‌ ಜಪಾನ್‌ ರಾಜ ತನ್ನ ಬಳಿಯಿದ್ದ ಕಬ್ಬಿಣದ ಆಯುಧದಿಂದ ಮನೆಗಳ ಬೀಗ ಹಾಗೂ ಚೀಲಕಗಳನ್ನು ಮೀಟಿ ಒಳ ಪ್ರವೇಶಿ, ಮನೆಗಳಲ್ಲಿದ್ದ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ. ಈ ಸಂದರ್ಭದಲ್ಲಿ ಸಹೋದರ ಗೋಪಿ ಹಾಗೂ ಡೇವಿಡ್‌ ಮನೆಯ ಹೊರಗಡೆ ನಿಂತು ನಿಗಾವಹಿಸುತ್ತಿದ್ದರು.

ಪತ್ನಿಯರ ಸಾಥ್‌: ಜಪಾನ್‌ ರಾಜನಿಗೆ ಇಬ್ಬರು ಪತ್ನಿಯರಿದ್ದು, ಕಳವು ಮಾಡಿದ ಚಿನ್ನಾಭರಣಗಳನ್ನು ಹೆಂಡತಿಯರ ಮೂಲಕ ಜ್ಯುವೆಲ್ಲರಿ ಅಂಗಡಿ ಮತ್ತು ಕೆಲ ಬ್ಯಾಂಕ್‌ಗಳಲ್ಲಿ ಅಡಮಾನ ಇಟ್ಟು ಹಣ ಪಡೆಯುತ್ತಿದ್ದರು. ಇದೇ ಹಣದಲ್ಲಿ ಮೋಜು-ಮಸ್ತಿ, ಪ್ರವಾಸ ಎಂದೆಲ್ಲಾ ಐಷಾರಾಮಿ ಜೀವನ ನಡೆಸುತ್ತಿದ್ದರು.

ಪ್ರತಿ ಬಾರಿ ಕೃತ್ಯವೆಸಗಿದ ಬಳಿಕ ತಮಿಳುನಾಡು, ಆಂಧ್ರಪ್ರದೇಶ, ಕೇರಳದ ಪ್ರವಾಸಿ ತಾಣಗಳಿಗೆ ಹೋಗುತ್ತಿದ್ದರು. ಅಲ್ಲದೆ, ಜಪಾನ್‌ ರಾಜ ದಿನಕ್ಕೆ ಐದು ಸಾವಿರ ರೂ. ಖರ್ಚು ಮಾಡುತ್ತಿದ್ದ ಎಂಬುದು ವಿಚಾರಣೆ ಸಂದರ್ಭದಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Fraud: ಮದುವೆ ಆಗದೇ ದೈಹಿಕ ಸಂಪರ್ಕ ಬೆಳೆಸಿ ಮಹಿಳಾ ಟೆಕಿಗೆ ವಂಚನೆ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

Fraud: ಫ್ಲ್ಯಾಟ್‌ ಖರೀದಿ ಹೆಸರಲ್ಲಿ ಖಾಸಗಿ ಫೈನಾನ್ಸ್‌ ಕಂಪನಿಗೆ 60.8 ಲಕ್ಷ ವಂಚನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.