

Team Udayavani, Aug 19, 2018, 11:59 AM IST
ಬೆಂಗಳೂರು: ಸಹಾಯಕ ಪೊಲೀಸ್ ಸಬ್ಇನ್ಸ್ಪೆಕ್ಟರ್ (ಎಎಸ್ಐ) ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮುಖ್ಯಪೇದೆಯನ್ನು ಎಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಠಾಣೆ ಮುಖ್ಯಪೇದೆ ಮಂಜುನಾಥ್ ಬಂಧಿತ. ಆರೋಪಿ ಕ್ಷುಲ್ಲಕ ಕಾರಣಕ್ಕೆ ಎಚ್ಎಸ್ಆರ್ ಲೇಔಟ್ ಠಾಣೆ ಎಎಸ್ಐ ಕೃಷ್ಣಪ್ಪ ಮೇಲೆ ಹಲ್ಲೆ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಎಎಸ್ಐ ಕೃಷ್ಣಪ್ಪ, ಠಾಣಾ ಬರಹಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದೇ ಠಾಣೆಯಲ್ಲಿ ಈ ಮೊದಲು ಮಂಜುನಾಥ್ ಕೂಡ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಮಂಜುನಾಥ್ನನ್ನು ಪರಪ್ಪನ ಅಗ್ರಹಾರ ಠಾಣೆಗೆ ವರ್ಗಾಯಿಸಲಾಗಿತ್ತು. ಠಾಣೆಯ ಆಂತರಿಕ ವಿಚಾರಕ್ಕೆ ಸಂಬಂಧಿಸಿದಂತೆ ಮಂಜುನಾಥ್ ಮತ್ತು ಕೃಷ್ಣಪ್ಪ ನಡುವೆ ವಾಗ್ವಾದ ನಡೆದಿತ್ತು.
ಈ ನಡುವೆ ಆ.16ರಂದು ಸಂಜೆ 6 ಗಂಟೆಗೆ ಎಎಸ್ಐ ಕೃಷ್ಣಪ್ಪ ಬಳಿ ಬಂದ ಮಂಜುನಾಥ್, ಜಗಳ ತೆಗೆದು ಎಎಸ್ಐ ಮಂಜುನಾಥ್ರನ್ನು ಏಕವಚನದಲ್ಲಿ ನಿಂದಿಸಿ, ಅವರ ಮೇಲೆ ಹಲ್ಲೆ ನಡೆಸಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಎಚ್ಎಸ್ಆರ್ ಲೇಔಟ್ ಠಾಣೆ ಪೊಲೀಸರು, ಆರೋಪಿ ಮುಖ್ಯಪೇದೆಯನ್ನು ಬಂಧಿಸಿದ್ದಾರೆ.
Ad
You seem to have an Ad Blocker on.
To continue reading, please turn it off or whitelist Udayavani.