ವಿದ್ವತ್‌ ಮೇಲಿನ ಹಲ್ಲೆ ದೃಶ್ಯಗಳಸಿಸಿಟಿವಿ ಫ‌ೂಟೇಜ್‌ ಹೈಕೋರ್ಟ್‌ಗೆ


Team Udayavani, Mar 10, 2018, 11:13 AM IST

mohammed-nalapad-vidvat.jpg

ಬೆಂಗಳೂರು: ಫ‌ರ್ಜಿ ಕೆಫೆಯಲ್ಲಿ ಮೊಹಮದ್‌ ನಲಪಾಡ್‌ ಹ್ಯಾರಿಸ್‌ನಿಂದ ಹಲ್ಲೆಗೊಳಗಾಗಿ ಚಿಕಿತ್ಸೆಗೆ ದಾಖಲಾಗಿದ್ದ ವಿದ್ವತ್‌ ಅವರ ವೈದ್ಯಕೀಯ ವರದಿಯನ್ನೇ ತಿರುಚಲಾಗಿದೆ ಎಂದು ಎಂದು ಪ್ರಾಸಿಕ್ಯೂಶನ್‌ ಹೈಕೋರ್ಟ್‌ಗೆ ತಿಳಿಸಿದೆ.

ಮೊಹಮದ್‌ ನಲಪಾಡ್‌ ಹ್ಯಾರಿಸ್‌ ಸಲ್ಲಿಸಿರುವ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ಶುಕ್ರವಾರ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್‌ಕುಮಾರ್‌ ಅವರಿದ್ದ ಏಕಸದಸ್ಯ ಪೀಠಕ್ಕೆ, ವಿಶೇಷ ಸರ್ಕಾರಿ ಅಭಿಯೋಜಕ ಶ್ಯಾಮ್‌ ಸುಂದರ್‌ ತಿಳಿಸಿದರು. ಫೆ.17ರಂದು ರಾತ್ರಿ ಫ‌ರ್ಜಿ ಕೆಫೆಯಲ್ಲಿ ವಿದ್ವತ್‌ ಮೇಲೆ ನಲಪಾಡ್‌ ಹಾಗೂ ಆತನ ಸಹಚರರು ಎಸಗಿದ ಹಲ್ಲೆ ದೃಶ್ಯಗಳಿರುವ ಸಿಸಿಟಿವಿ ಫ‌ೂಟೇಜ್‌ಗಳ ಸಿ.ಡಿ.ಯನ್ನು ನ್ಯಾಯ ಪೀಠಕ್ಕೆ ಸಲ್ಲಿಸಿದರು. 

ನ್ಯಾಯಮೂರ್ತಿಗಳು ತಮ್ಮ ಚೇಂಬರ್‌ನಲ್ಲಿ “ಘಟನೆ ದೃಶ್ಯಾವಳಿ ವೀಕ್ಷಿಸಲು ಒಪ್ಪಿಗೆ ಸೂಚಿಸಿ’ ವಿಚಾರಣೆಯನ್ನು ಮಾ.12ಕ್ಕೆ ಮುಂದೂಡಿದರು.

ವಿಚಾರಣೆ ವೇಳೆ ವಾದ ಮಂಡಿಸಿದ ಎಸ್‌ಪಿಪಿ ಶ್ಯಾಮ್‌ ಸುಂದರ್‌, ಫೆ. 17ರಂದು ರಾತ್ರಿ ಫ‌ರ್ಜಿ ಕೆಫೆಯಲ್ಲಿ ಅತ್ಯಂತ ಕ್ರೂರ ರೀತಿಯಲ್ಲಿ ನಲಪಾಡ್‌ ಹಾಗೂ ಆತನ ಸಹಚರರು ವಿದ್ವತ್‌ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ವಿದ್ವತ್‌ ಮೂಗು, ಪಕ್ಕೆಲುಬು, ಮುಖ ಸೇರಿ ಹಲವೆಡೆ ಗಾಯವಾಗಿದೆ. ಆ ದಿನ ರಾತ್ರಿ ಮಲ್ಯ ಆಸ್ಪತ್ರೆಗೆ ದಾಖಲಿಸಿದಾಗ, ವಿದ್ವತ್‌ರನ್ನು ಪರೀಕ್ಷಿಸಿದ ಡಾ. ಆನಂದ್‌, ವಿದ್ವತ್‌ ಗಂಭೀರವಾಗಿ ಗಾಯ ಗೊಂಡಿದ್ದಾನೆ ಎಂದಿದ್ದರು. ಇದೀಗ ರಾಜಕೀಯ ಒತ್ತಡಕ್ಕೆ ಮಣಿದು ವಿದ್ವತ್‌ ಗಂಭೀರವಾಗಿ ಗಾಯ ಗೊಂಡಿಲ್ಲ ಎಂದು ಸುಳ್ಳು ವೈದ್ಯಕೀಯ ವರದಿ
ನೀಡಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. 

“ಮೆಡಿಕೋ ಲೀಗಲ್‌ ಕೇಸ್‌ನಲ್ಲಿ’ ಅನುಸರಿಸ ಬೇಕಾದ ನಿಯಮಗಳನ್ನು ಮಲ್ಯ ಆಸ್ಪತ್ರೆ ವೈದ್ಯರು ಉಲ್ಲಂ ಸಿದ್ದಾರೆ. ತನಿಖಾಧಿಕಾರಿಗಳು ಹಲವು ಬಾರಿ ಮನವಿ ಮಾಡಿದರೂ ನೀಡದ ವಿದ್ವತ್‌ರ ವೈದ್ಯಕೀಯ ವರದಿ, ನಲಪಾಡ್‌ ತಂದೆ ಶಾಸಕ ಹ್ಯಾರಿಸ್‌ಗೆ ಹೇಗೆ ಸಿಕ್ಕಿತು. ಡಾ. ಆನಂದ್‌ ಹ್ಯಾರಿಸ್‌ ಗೆ ಆಪ್ತರಾಗಿದ್ದು ಜಾಮೀನು ಪಡೆದುಕೊಳ್ಳಲು ನೆರವಾಗಲೆಂದೇ ಸುಳ್ಳು ವೈದ್ಯಕೀಯ ವರದಿ ನೀಡಿದ್ದಾರೆ. ಈ ವರದಿಯನ್ನು ಶಾಸಕ ಹ್ಯಾರಿಸ್‌ ತಮ್ಮ ಫೇಸ್‌ ಬುಕ್‌ ಪೇಜ್‌ನಲ್ಲಿ ಪ್ರಕಟಿಸಿದ್ದಾರೆ. ಈಗಾಗಲೇ ಡಾ. ಆನಂದ್‌ಗೆ ತನಿಖಾಧಿಕಾರಿಗಳು ನೋಟಿಸ್‌ ಜಾರಿಗೊಳಿಸಿದ್ದಾರೆ ಎಂದರು.

ಇದಕ್ಕೂ ಮೊದಲು ನಲಪಾಡ್‌ ಪರವಾಗಿವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ ನಾಗೇಶ್‌, ಅರ್ಜಿದಾರ ನಲಪಾಡ್‌ ಹಾಗೂ ಆತನ ಸಹಚರರು ಕೊಲ್ಲುವ ಉದ್ದೇಶದಿಂದ ವಿದ್ವತ್‌ ಮೇಲೆ ಹಲ್ಲೆ ನಡೆಸಿಲ್ಲ. ಆಕಸ್ಮಿಕವಾಗಿ ನಡೆದ ಘರ್ಷಣೆ ಘಟನೆ ಅದಾಗಿದೆ. ಅಲ್ಲದೆ, ವಿದ್ವತ್‌ ಗಂಭೀರವಾಗಿ ಗಾಯಗೊಂಡಿಲ್ಲ ಎಂದು ವೈದ್ಯರೇ ಡಿಸ್ಚಾರ್ಜ್‌ ವರದಿಯಲ್ಲಿ ಉಲ್ಲೇಖೀಸಿದ್ದಾರೆ. ಜತೆಗೆ ಉದ್ದೇಶಪೂರ್ವಕವಾಗಿ ಆಸ್ಪತ್ರೆಯಲ್ಲಿ ಡಿಸ್ಚಾರ್ಜ್‌ ಆಗದೇ ಇರಲು ಯತ್ನಿಸುತ್ತಿದ್ದರು ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದರು.

ವಿದ್ವತ್‌ ವೈದ್ಯಕೀಯ ವರದಿ ತಿರುಚಲಾಗಿದೆ: ಪ್ರಾಸಿಕ್ಯೂಶನ್‌ ವಾದ.„
ಮಾ.12ಕ್ಕೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.