ಅಭಿವ್ಯಕ್ತಿಗೆ ಧಕ್ಕೆ ತರುವ ಸಂಘಟನೆಗಳ ನಿಷೇಧ ಅಗತ್ಯ


Team Udayavani, Apr 3, 2019, 3:00 AM IST

Udayavani Kannada Newspaper

ಬೆಂಗಳೂರು: ವಿಚಾರವಾದಿಗಳ ಹತ್ಯೆಗೈದ ಹಾಗೂ ಬುದ್ಧಿ ಜೀವಿಗಳು, ಬರಹಗಾರರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತಹ ಯಾವುದೇ ಧರ್ಮದ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಸಾಹಿತಿ ಡಾ.ಕೆ.ಷರೀಫಾ ತಿಳಿಸಿದರು.

ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆಯ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಮಂಗಳವಾರ ಸೌಹಾರ್ದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಲೋಕಸಭಾ ಚುನಾವಣೆ- ಮಹಿಳಾ ಬೇಡಿಕೆಗಳ ಪಟ್ಟಿ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದಲ್ಲಿ ಮಾನವ ಹಕ್ಕುಗಳ ದಮನವಾಗುತ್ತಿದೆ. ಕೋಮುವಾದ ಹಾಗೂ ಕೋಮುವಾದದ ಗಲಭೆಗಳನ್ನು ತಡೆಗಟ್ಟುವಂತಹ ಬಲಿಷ್ಠ ಕಾನೂನುಗಳನ್ನು ಮುಂದಿನ ಲೋಕಸಭೆಗೆ ಆಯ್ಕೆಯಾಗುವ ಆಡಳಿತ ಪಕ್ಷ ಜಾರಿಗೊಳಿಸಬೇಕು ಎಂದು ಹೇಳಿದರು.

ಕೋಮು ಗಲಭೆಗಳನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕಾಯ್ದೆ ಜಾರಿಗೊಳಿಸಿ, ಅದರಲ್ಲಿನ ಸಂತ್ರಸ್ತರಿಗೆ ಅದರಲ್ಲೂ ಮುಖ್ಯವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ಅತ್ಯಂತ ಶೀಘ್ರವಾಗಿ ಪರಿಹಾರ ದೊರೆಯುವಂತೆ ಮಾಡಬೇಕು.

ಪರಿಶಿಷ್ಟ ಜಾತಿ ಮತ್ತು ವರ್ಗಗಳ ದೌರ್ಜನ್ಯ ನಿಯಂತ್ರಣ ಕಾಯ್ದೆ ಮತ್ತಷ್ಟು ಬಲಪಡಿಸಬೇಕು. ಬಾವಿ, ದೇವಸ್ಥಾನ, ಚಹಾ ಅಂಗಡಿ ಮೊದಲಾದ ಸಾರ್ವಜನಿಕ ಸ್ಥಳಗಳನ್ನು ಬಳಸಲು ತಡೆಯೊಡ್ಡುವುದು. ಸಾಮಾಜಿಕ ಮತ್ತು ಆರ್ಥಿಕ ಬಹಿಷ್ಕಾರ ಹೇರುವುದನ್ನು ದೌರ್ಜನ್ಯ ತಡೆ ಕಾಯ್ದೆ ವ್ಯಾಪ್ತಿಗೆ ತರಬೇಕು ಎಂದರು.

ಪತ್ರಕರ್ತೆ ಆರ್‌.ಪೂರ್ಣಿಮಾ ಮಾತನಾಡಿ, 1993ರಲ್ಲಿ ಬಲವಂತರಾಯ್‌ ಮೆಹ್ತಾ ಮಹಿಳಾ ಮೀಸಲಾತಿ ಕಾಯ್ದೆ ಜಾರಿಗೊಳಿಸಲು ಮುಂದಾಗಿದ್ದರು. ಬಳಿಕ 1996ರಲ್ಲಿ ಎಚ್‌.ಡಿ.ದೇವೇಗೌಡ ಪ್ರಧಾನಮಂತ್ರಿಯಾಗಿದ್ದ ಸಂದರ್ಭದಲ್ಲಿ ರಾಜಕೀಯದಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಬಗ್ಗೆ ಲೋಕಸಭೆಯಲ್ಲಿ ಮಸೂದೆ ಮಂಡಿಸಿದ್ದರು.

ಆದರೆ ಈ ಮಸೂದೆ ಇದುವರೆಗೂ ಕಾಯ್ದೆಯಾಗಿ ಅನುಷ್ಠಾನಗೊಳ್ಳದಿರುವುದು ವಿಪರ್ಯಾಸ ಎಂದು ಹೇಳಿದರು. ಸಂಸತ್ತು ಮತ್ತು ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಮಸೂದೆಯನ್ನು ಆದ್ಯತೆ ಮೇಲೆ ಜಾರಿಗೊಳಿಸಬೇಕು.

ಪಂಚಾಯತ್‌ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭಾಗವಹಿಸಲು ಮಹಿಳೆಯರಿಗೆ ಇರಬಹುದಾದ ಅಸಾಂವಿಧಾನಿಕ ಅಡೆತಡೆಗಳನ್ನು ತೆಗೆದು ಹಾಕಿ ಶೇ.50 ಮೀಸಲಾತಿ ಅನುಸಾರ ಮಹಿಳೆಯರು ಚುನಾವಣೆ ಎದುರಿಸಲು ಎಲ್ಲ ಅನುಕೂಲಗಳನ್ನು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಪತ್ರಕರ್ತೆ ಡಾ.ವಿಜಯಾ, ಗಾರ್ಮೆಂಟ್ಸ್‌ ಲೇಬರ್ಸ್‌ ಯೂನಿಯನ್‌ನ ವಿ.ಪಿ.ರುಕ್ಮಿಣಿ, ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್‌.ಲಕ್ಷ್ಮೀ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.