ಬಿಬಿಎಂಪಿ ಕೋಮಾದಲ್ಲಿದೆಯಾ? ಹೈಕೋರ್ಟ್ ಪ್ರಶ್ನೆ
Team Udayavani, Apr 4, 2017, 11:32 AM IST
ಬೆಂಗಳೂರು: ಖಾಸಗಿ ಕಟ್ಟಡ ಮಾಲೀಕರೊಬ್ಬರು 600 ಚದರಡಿ ವಿಸ್ತೀರ್ಣದ ಗುಂಡಿ ತೋಡಿ ಮುಚ್ಚದೆ ಹಾಗೇ ಬಿಟ್ಟಿದ್ದರೂ ಕ್ರಮ ಕೈಗೊಳ್ಳದ ಬಿಬಿಎಂಪಿ ಕಾರ್ಯವೈಖರಿಗೆ ಹೈಕೋರ್ಟ್ ಗರಂ ಆಗಿದೆ.
ಸೋಮವಾರ ರಿಟ್ ಅರ್ಜಿಯೊಂದರ ವಿಚಾರಣೆ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಮಂಜುನಾಥ ಪ್ರಸಾದ್ ಅವರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಮೂರ್ತಿ ರಾಘವೆಂದ್ರ ಬಿ.ಚೌಹಾಣ್ ಅವರಿದ್ದ ಏಕಸದಸ್ಯ ಪೀಠ, ದೂರಿನ ಬಗ್ಗೆ 4 ವರ್ಷಗಳಿಂದ ಯಾವುದೇ ಕ್ರಮ ಕೈಗೊಳ್ಳದ ಬಿಬಿಎಂಪಿ ಕೋಮಾದಲ್ಲಿದೆಯಾ? ಎಂದು ಪ್ರಶ್ನಿಸಿದರು.
ಬನ್ನೇರುಘಟ್ಟ ಮುಖ್ಯರಸ್ತೆಯ ಅರಕೆರೆ ಬಳಿ 2011ರಲ್ಲಿ ಮುನಿನಾರಾಯಣ ಎಂಬುವವರು ತೋಡಿದ್ದ ಗುಂಡಿ ಮುಚ್ಚದಿರುವುದರಿಂದ ಅಪಾಯದ ಸ್ಥಿತಿಯಲ್ಲಿದೆ. ಜತೆಗೆ ಗುಂಡಿ ಡಂಪಿಂಗ್ ಯಾರ್ಡ್ ಆಗಿ ಪರಿಣಮಿಸಿ ಸ್ಥಳೀಯರಿಗೆ ತೊಂದರೆಯಾಗಿದೆ. ಈ ಸಂಬಂಧ ಕ್ರಮ ಜರುಗಿಸುವಂತೆ 2012ರಲ್ಲಿ ಬಿಬಿಎಂಪಿಗೆ ದೂರು ನೀಡಲಾಗಿದೆ.
2013ರಲ್ಲಿ ನ್ಯಾಯಾಲಯ ಸಹ ಕ್ರಮ ಕೈಗೊಳ್ಳಲು ಸೂಚಿಸಿದೆ. ಇಷ್ಟಾದರೂ ಇದುವರೆಗೂ ಬಿಬಿಎಂಪಿ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದರೆ ಏನರ್ಥ? ಬಿಬಿಎಂಪಿ ಕೋಮಾದಲ್ಲಿದೆ ಎಂದು ತಿಳಿದುಕೊಳ್ಳಬೇಕೇ ಅಥವಾ ಗುಂಡಿ ತೋಡಿದವರೊಂದಿಗೆ ಶಾಮೀಲಾಗಿದ್ದಾರೆ ಎಂದು ಭಾವಿಸಬೇಕೇ? ಎಂದು ಪೀಠ ಪ್ರಶ್ನಿಸಿತು.
ಅಲ್ಲದೆ ಈ ಪ್ರಕರಣ ಸಂಬಂಧ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಏನಾಯಿತು. ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಿಯಾದರೂ ಕ್ರಮ ಕೈಗೊಳ್ಳಿ, ಇಲ್ಲವೇ ಕೋರ್ಟ್ ನಗರಾಭಿವೃದ್ಧಿ ಇಲಾಖೆಯ ತನಿಖೆಗೆ ಆದೇಶಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು.
ಪ್ರಕರಣ ಸಂಬಂಧ ಜುಲೈ 2013ರಿಂದ 2017ರ ಮಾ.8ರವರೆಗೆ ಯಾವ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಿ ವಿಚಾರಣೆಯನ್ನು ಮಾ.19ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್