ಸಸ್ಯಕಾಶಿಗೆ ಬರಲಿದೆ ಪಶ್ಚಿಮ ಘಟ್ಟದ ಸೊಬಗು


Team Udayavani, Jul 7, 2018, 2:16 PM IST

sasyakashi.jpg

ಬೆಂಗಳೂರು: ಪಶ್ಚಿಮ ಘಟ್ಟದ ಹಸಿರು ರಾಶಿ ಸದ್ಯದಲ್ಲೇ ಸಿಲಿಕಾನ್‌ ಸಿಟಿಯ ಕೆಂಪು ತೋಟದಲ್ಲಿ ಕಂಗೊಳಿಸಲಿದೆ. ಲಾಲ್‌ಬಾಗ್‌ನ ಸಿದ್ದಾಪುರ ಗೇಟ್‌ ಬಳಿ ಇರುವ 20-30 ಎಕರೆ ಪ್ರದೇಶದಲ್ಲಿ ಚಿಟ್ಟೆವನ, ಪಶ್ಚಿಮಘಟ್ಟದಲ್ಲಿರುವ ಸಸ್ಯಗಳ ಕಿರುವನ, ಹೈ ಡೆನ್ಸಿಟಿ ಕಿರುವನ, ಅಳಿವಿನ ಅಂಚಿನಲ್ಲಿರುವ ಗಿಡಗಳ ಕಿರುವನ, ಟ್ಯಾಕ್ಸ್‌ ಸೊನಾಮಿ ಪ್ರಭೇಧಗಳ ಕಿರುವನ ಈ 5 ಬಗೆಯ ಕಿರುವನಗಳನ್ನು ನಿರ್ಮಿಸಲು ತೋಟಗಾರಿಕೆ ಇಲಾಖೆ ಮುಂದಾಗಿದೆ.

ಲಾಲ್‌ಬಾಗ್‌ನಲ್ಲಿ ಐದು ಪರಿಕಲ್ಪನೆಯುಳ್ಳ ಕಿರುವನ ನಿರ್ಮಾಣ ಸಂಬಂಧ ಅಧಿಕಾರಿಗಳು ಹಾಗೂ ತಾಂತ್ರಿಕ ಸಲಹಾ ಮಂಡಳಿ ಸದಸ್ಯರು ಮತ್ತು ತಜ್ಞರೊಂದಿಗೆ ಮುಂದಿನ ಸೋಮವಾರ ಸಭೆ ನಡೆಸಲಾಗುವುದು. ನಂತರ ಮುಂದಿನ ಎರಡು ವಾರದೊಳಗಾಗಿ ಗಿಡ ನೆಡುವ ಕೆಲಸ ಆರಂಭಿಸಲಾಗುವುದು ಎಂದು ತೋಟಗಾರಿಕೆ  ಇಲಾಖೆ (ಲಾಲ್‌ಬಾಗ್‌)ಉಪ ನಿರ್ದೇಶಕ ಎಂ.ಆರ್‌.ಚಂದ್ರಶೇಖರ ತಿಳಿಸಿದ್ದಾರೆ.

ಇದು ಲಾಲ್‌ಬಾಗ್‌ ಕೆರೆಗೆ ಸಂಪರ್ಕಿಸುವ ಸ್ಥಳವಾಗಿರುವ ಕಾರಣ ಇಲ್ಲಿ ಪಶ್ಚಿಮ ಘಟ್ಟದ ಗಿಡಗಳು ಸೊಂಪಾಗಿ ಬೆಳೆಯಲಿವೆ. ಆದ್ದರಿಂದ ಇಲ್ಲಿ ಮಲೆನಾಡು ಭಾಗದ ವಿವಿಧ ಸಸ್ಯ ಪ್ರಭೇದಗಳನ್ನು ಬೆಳೆಸಲಾಗುವುದು. ಪಶ್ಚಿಮ ಘಟ್ಟದ ಸಸ್ಯಗಳ ಕಿರುವನಕ್ಕೆ ಸಂಬಂಧಿಸಿದಂತೆ 500 ಗಿಡಗಳು ಲಾಲ್‌ಬಾಗ್‌ನಲ್ಲಿವೆ.

ಆದರೆ ಇವುಗಳಲ್ಲಿ ಯಾವುದು ಈ ಕಿರುವನಕ್ಕೆ ಹೊಂದಿಕೆಯಾಗುತ್ತವೆ ಎಂದು ತಜ್ಞರಿಂದ ತಿಳಿದುಕೊಳ್ಳಬೇಕು. ನಂತರ ಲಾಲ್‌ಬಾಗ್‌ನಲ್ಲಿರುವ ಗಿಡಗಳನ್ನು ನೆಡಲಾಗುವುದು. ಉಳಿದ ಗಿಡಗಳನ್ನು ಮಲೆನಾಡು ಭಾಗದ ನರ್ಸರಿಗಳಿಂದ ಹಾಗೂ ಅರಣ್ಯ ಇಲಾಖೆಯ ನರ್ಸರಿಗಳಿಂದ ತರಸಿಕೊಳ್ಳಲಾಗುವುದು ಎಂದು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಯಾವೆಲ್ಲಾ ಗಿಡಗಳು?: ಐದು  ಕಿರುವನಗಳಲ್ಲಿ ಒಟ್ಟು 700ರಿಂದ 800 ಜಾತಿಯ ಗಿಡಗಳನ್ನು ಬೆಳೆಸುವ ಉದ್ದೇಶವಿದೆ. ಅದರಲ್ಲಿ ಪಶ್ಚಿಮ ಘಟ್ಟದ 100ರಿಂದ 150 ಗಿಡಗಳನ್ನು ಬೆಳೆಸಲು ಚಿಂತಿಸಲಾಗಿದೆ. ಪಶ್ಚಿಮ ಘಟ್ಟದ 25ಕ್ಕೂ ಹೆಚ್ಚು ಹಣ್ಣು ಬಿಡುವ ಗಿಡಗಳನ್ನು ನೆಡಲಾಗುವುದು.

ಇದರಿಂದ ಪಕ್ಷಿ ಸಂಕುಲವನ್ನು ಈ ಕಿರುವನ ಆಕರ್ಷಿಸಲಿದೆ. ಪಕ್ಷಿ ಸಂಕುಲಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿಯೇ ಪಶ್ಚಿಮ ಘಟ್ಟದ ಕಿರುವನ ನಿರ್ಮಾಣ ಮಾಡಲಾಗುವುದು. ಸದ್ಯ ಈ ಪರಿಕಲ್ಪನೆಯ ಕಿರುವನ ಯೋಜನೆಯ ಹಂತದಲ್ಲಿದೆ. ಆಗಸ್ಟ್‌ ನಂತರ ಇದನ್ನು ಕಾರ್ಯರೂಪಕ್ಕೆ ತರಲಾಗುವುದು. ನಂತರ ಈ ಕಿರುವನಕ್ಕೆ ಸಾರ್ವಜನಿಕರಿಗೂ ಪ್ರವೇಶ ಕಲ್ಪಿಸಲಾಗುವುದು ಎಂದು ಹೇಳಿದರು. 

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.