ತನಿಖೆ ಪುನರ್‌ ಆರಂಭಕ್ಕೆ ಬಿಜೆಪಿ, ಜೆಡಿಎಸ್‌ ಸದಸ್ಯರ ಆಗ್ರಹ


Team Udayavani, Jan 4, 2018, 7:05 AM IST

JDS-BJP-laptop.jpg

ಬೆಂಗಳೂರು: ಭಾರೀ ಸದ್ದು ಮಾಡಿದ್ದ ಲ್ಯಾಪ್‌ಟಾಪ್‌ ಖರೀದಿ ಟೆಂಡರ್‌ ಅವ್ಯವಹಾರದಲ್ಲಿ  ಉನ್ನತ ಶಿಕ್ಷಣ ಸಚಿವ ರಾಯರಡ್ಡಿಯವರಿಗೆ ಸದನ ಸಮಿತಿ ಕ್ಲೀನ್‌ ಚೀಟ್‌ ನೀಡಿರುವ ಬೆನ್ನಲ್ಲೆ ಸದನ ಸಮಿತಿಯ ಬಿಜೆಪಿ, ಜೆಡಿಎಸ್‌ ಸದಸ್ಯರು ತನಿಖೆ ಪುನರ್‌ ಆರಂಭಿಸುವಂತೆ ಮೇಲ್ಮನೆ ಸಭಾಪತಿಯವರಿಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.

ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡುವ ಬಗ್ಗೆ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿತ್ತು. ಅದರಂತೆ  ಕಾಲೇಜು ಶಿಕ್ಷಣ ಇಲಾಖೆ ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆಯಿಂದ 1.50 ಲಕ್ಷ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಖರೀದಿಸಲು ಟೆಂಡರ್‌ ಪ್ರಕ್ರಿಯೆಗೆ ಸಿದ್ಧತೆ ನಡೆಸಿದ್ದರು.

ಲ್ಯಾಪ್‌ಟಾಪ್‌ನ ಮೌಲ್ಯ ಹಾಗೂ ಕಾನ್ಫಿàಗರೇಷನ್‌ ಸಂಬಂಧ  ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಾಗಿದ್ದ ಅಜಯ್‌ ನಾಗಭೂಷಣ್‌ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಜತೆಗೆ ಟೆಂಡರ್‌ ಪ್ರಕ್ರಿಯೆಯಲ್ಲಿ ಅವ್ಯವಹಾರ ಆಗಿರುವ ಸಾಧ್ಯತೆ ಇದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದರು.

ವಿರೋಧ ಪಕ್ಷದವರು ಇದನ್ನೇ ಗಂಭೀರವಾಗಿ ತೆಗೆದುಕೊಂಡು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯಾರೆಡ್ಡಿಯವರ ವಿರುದ್ಧ ಆರೋಪ ಮಾಡಿದ್ದರು. ಲ್ಯಾಪ್‌ಟಾಪ್‌ ಖರೀದಿ ಅವ್ಯವಹಾರದ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಬೆಳಗಾವಿ ಅಧಿವೇಶನದಲ್ಲೂ ಆಗ್ರಹಿಸಿದ್ದರು. ವಿರೋಧ ಪಕ್ಷಗಳ ಒತ್ತಡಕ್ಕೆ ಮಣಿದ ಸರ್ಕಾರ, ಮೇಲ್ಮನೆ ಸದಸ್ಯ ಕೆ.ಸಿ.ಕೊಂಡಯ್ಯ ಅವರ ಅಧ್ಯಕ್ಷತೆಯಲ್ಲಿ ಸದನ ಸಮಿತಿ ರಚನೆ ಮಾಡಿತ್ತು. ಮೇಲ್ಮನೆ ಸದಸ್ಯರಾದ ಐವನ್‌ ಡಿಸೋಜಾ, ರಘುನಾಥ ರಾವ್‌ ಮಲ್ಕಾಪುರೆ, ಶರಣಪ್ಪ ಮಟ್ಟೂರು, ರಮೇಶ್‌ ಬಾಬು, ಅರುಣ್‌ ಶಹಪುರ ಹಾಗೂ ಪ್ರಸನ್ನ ಕುಮಾರ್‌ ಅವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಿತ್ತು.

ತನಿಖೆ ನಡೆಸಿದ ಸದನ ಸಮಿತಿಯು ಸಚಿವ ಬಸವರಾಜ ರಾಯರೆಡ್ಡಿಯವರಿಗೆ ಕ್ಲೀನ್‌ ಚೀಟ್‌ ನೀಡಿ, ವರದಿ ಸಲ್ಲಿಸಿತ್ತು. ಆದರೆ, ಇದಕ್ಕೆ ಬಿಜೆಪಿ ಸದಸ್ಯರಾದ ರಘುನಾಥ ರಾವ್‌ ಮಲ್ಕಾಪುರೆ, ಅರುಣ್‌ ಶಹಪುರ ಹಾಗೂ ಜೆಡಿಎಸ್‌ ಸದಸ್ಯ ರಮೇಶ್‌ ಬಾಬು ಆಕ್ಷೇಪಣಾ ಪತ್ರವನ್ನು ನೀಡಿದ್ದರು. ಆದರೂ, ಸದನ ಸಮಿತಿ ಅಧ್ಯಕ್ಷರಾದ ಕೊಂಡಯ್ಯ ಅವರು ಹಳೇ ಟೆಂಡರ್‌ ಪ್ರಕ್ರಿಯೆಯನ್ನೇ ಮುಂದುವರಿಸುವಂತೆ ಇಲಾಖೆಗೆ ಸೂಚನೆ ನೀಡಿದ್ದರು.

ಇದರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ಸದಸ್ಯರು ಮೇಲ್ಮನೆ ಸಭಾಪತಿ ಡಿ.ಎಚ್‌.ಶಂಕರ್‌ ಮೂರ್ತಿಯವರಿಗೆ ಮುಂದಿನ ವಾರ ಮನವಿ ಸಲ್ಲಿಸಿ, ಟೆಂಡರ್‌ ಅವ್ಯವಹಾರದ ಪುನರ್‌ ತನಿಖೆಗೆ ಒತ್ತಾಯಿಸಲು ತೀರ್ಮಾನಿಸಿದ್ದಾರೆ.

ಲ್ಯಾಪ್‌ಟಾಪ್‌ ಖರೀದಿ ಸಂಬಂಧ ಟೆಕ್ನಿಕಲ್‌ ಅಡ್ವೆ„ಸರಿ ಪ್ಯಾನಲ್‌(ಟಿಎಪಿ)ನಿಂದ ಹೊಸದಾಗಿ ಮಾರ್ಗಸೂಚಿ ಪಡೆಯಬೇಕು. ಅಥವಾ ಈ ಹಿಂದೆ ಟಿಎಪಿ ಶಿಫಾರಸ್ಸು ಮಾಡಿದ್ದ ಇಂಟೆಲ್‌ ಕೊರ್‌ ಐ3-6006ಯು/ಆ್ಯಂಡ್‌ ಎ8-7410 ಲ್ಯಾಪ್‌ಟಾಪ್‌ಗ್ಳನ್ನು ವಿದ್ಯಾರ್ಥಿಗಳಿಗೆ ನೀಡಬೇಕು ಎಂಬುದು ನಮ್ಮ ಕೋರಿಕೆಯಾಗಿದೆ. ಈ ಸಂಬಂಧ ಮೇಲ್ಮನೆ ಸಭಾಪತಿಯವರಿಗೆ ಪುನರ್‌ ಮನವಿ ಸಲ್ಲಿಸಲಿದ್ದೇವೆ ಎಂದು ಸಮಿತಿಯ ಸದಸ್ಯರಾಗಿದ್ದ ಅರುಣ್‌ ಶಹಪುರ್‌ ಅವರು “ಉದಯವಾಣಿ’ಗೆ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.