ರಾಜ್ಯ ಬಿಜೆಪಿ ಬಿಕ್ಕಟ್ಟು ಬಹುತೇಕ ಶಮನ


Team Udayavani, May 21, 2017, 3:45 AM IST

BJP_symbol.jpg

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಿರುವ ಬಿಕ್ಕಟ್ಟು ಶಮನವಾಗುವ ಲಕ್ಷಣ ಕಾಣಿಸಿಕೊಂಡಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಕಾರ್ಯವೈಖರಿ ಬಗ್ಗೆ ಮುನಿಸಿಕೊಂಡಿರುವ ಪಕ್ಷದ ಒಂದು ಗುಂಪನ್ನು ಸಮಾಧಾನಪಡಿಸುವಲ್ಲಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌ ಅವರು ಬಹುತೇಕ ಯಶಸ್ವಿಯಾಗಿದ್ದಾರೆ.

ಪಕ್ಷದಲ್ಲಿ ಅಸಮಾಧಾನಕ್ಕೆ ಕಾರಣವಾಗಿರುವ ಕೆಲವೊಂದು ಸಮಸ್ಯೆಗಳನ್ನು ಶೀಘ್ರ ಬಗೆಹರಿಸಲಾಗುವುದು ಮತ್ತು ಮೂಲ ಕಾರ್ಯಕರ್ತರನ್ನು ಕಡೆಗಣಿಸದಂತೆ ನೋಡಿಕೊಳ್ಳಲಾಗುವುದು. ಈ ವಿಚಾರವನ್ನು ನಮಗೆ ಬಿಟ್ಟು ಪಕ್ಷ ಸಂಘಟಿಸುವ ಕೆಲಸ ಮಾಡಿ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಸೂಚನೆಯನ್ನು ಮುರಳೀಧರರಾವ್‌ ಅಸಮಾಧಾನಿತ ಮುಖಂಡರಿಗೆ ತಿಳಿಸಿದ್ದಾರೆ. ಇದಕ್ಕೆ ಅಸಮಾಧಾನಿತ ಮುಖಂಡರೂ ಒಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಪಕ್ಷದ ಕೆಲವು ಬೆಳವಣಿಗೆಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ, ಅದನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿ ಯಡಿಯೂರಪ್ಪ ಅವರಿಗೆ ಬಹಿರಂಗ ಪತ್ರ ಬರೆದಿದ್ದ 24 ಅಸಮಾಧಾನಿತ ಮುಖಂಡರನ್ನು ಶನಿವಾರ ಕರೆಸಿ ಅವರೊಂದಿಗೆ ಸಮಾಲೋಚನೆ ನಡೆಸಿದ ಮುರಳೀಧರರಾವ್‌, ಸಮಸ್ಯೆ ಬಗೆಹರಿಸುವ ಭರವಸೆ ನೀಡುವುದರ ಜತೆ ಬಹಿರಂಗ ಹೇಳಿಕೆಗಳನ್ನು ನೀಡಿದರೆ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ನೀಡಿದರು ಎನ್ನಲಾಗಿದೆ.

ಶೋಭಾ ಮತ್ತಿತರರ ವಿರುದ್ಧ ಆಕ್ರೋಶ:
ಮುರಳೀಧರರಾವ್‌ ಅವರೊಂದಿಗಿನ ಮಾತುಕತೆ ವೇಳೆ ಯಡಿಯೂರಪ್ಪ ಅವರ ನಾಯಕತ್ವದ ಬಗ್ಗೆ ಎಲ್ಲರೂ ಸಹಮತ ವ್ಯಕ್ತಪಡಿಸಿದರು. ಆದರೆ, ಅವರ ಜತೆಗಿರುವ ಸಂಸದೆ ಶೋಭಾ ಕರಂದ್ಲಾಜೆ, ಬಿ.ಜೆ.ಪುಟ್ಟಸ್ವಾಮಿ ಮತ್ತಿತರರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ದೂರುಗಳ ಸುರಿಮಳೆಯನ್ನೇ ಸುರಿಸಿದರು ಎಂದು ಹೇಳಲಾಗಿದೆ.

ಯಡಿಯೂರಪ್ಪ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿದಾಗ ಎಲ್ಲರೂ ಸಂತೋಷಪಟ್ಟಿದ್ದೆವು. ಆದರೆ, ಅಧ್ಯಕ್ಷರಾದ ಬಳಿಕ ಅವರು ತಮ್ಮದೇ ಆದ ಒಂದು ಗುಂಪು ಕಟ್ಟಿಕೊಂಡು ತಮ್ಮೊಂದಿಗೆ ಕೆಜೆಪಿಗೆ ಹೋಗಿ ಬಂದವರಿಗೆ ಆದ್ಯತೆ ನೀಡುತ್ತಿದ್ದಾರೆ. ತಮ್ಮ ಜತೆಗಿದ್ದವರ ಮಾತು ಕೇಳಿ ಮೂಲ ಕಾರ್ಯಕರ್ತರನ್ನು ಬದಿಗೆ ಸರಿಸುತ್ತಿದ್ದಾರೆ. ಇದು ಸಂಘಟನೆ ಮೇಲೆ ಪರಿಣಾಮ ಬೀರಿದೆ. ವಿಧಾನಸಭೆ ಚುನಾವಣೆ ಟಿಕೆಟ್‌ ಹಂಚಿಕೆ ವೇಳೆಯೂ ಇದೇ ಮಾನದಂಡ ಅನುಸರಿಸಿದರೆ ದಶಕಗಳಿಂದ ಪಕ್ಷಕ್ಕೆ ದುಡಿದವರಿಗೆ ಅನ್ಯಾಯವಾಗಲಿದೆ  ಎಂದು ಆರೋಪಿಸಿದರು ಎಂದು ತಿಳಿದು ಬಂದಿದೆ.

ಎಲ್ಲಾ ಅಹವಾಲುಗಳನ್ನು ಸಾವಧಾನದಿಂದಲೇ ಕೇಳಿದ ಮುರಳೀಧರರಾವ್‌, ನಿಮ್ಮ ಬೇಡಿಕೆಗಳ ಬಗ್ಗೆ ನಮ್ಮ ಆಕ್ಷೇಪವಿಲ್ಲ. ಆದರೆ, ಅದನ್ನು ಪಕ್ಷದ ಒಳಗೆ ಚರ್ಚಿಸಿ ಬಗೆಹರಿಸಿಕೊಳ್ಳಬೇಕೇ ಹೊರತು ಬಹಿರಂಗಗೊಳಿಸಿದ್ದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಸಮಾಧಾನಿತ ಮುಖಂಡರು, ಆರಂಭದಲ್ಲೇ ನಮ್ಮ ಬೇಡಿಕೆಗಳನ್ನು ರಾಜ್ಯಾಧ್ಯಕ್ಷರ ಗಮನಕ್ಕೆ ತಂದಿದ್ದೆವು. ಆದರೆ, ಅವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಅಲ್ಲದೆ, ಅಸಮಾಧಾನ ಶಮನಕ್ಕೆ ಫೆ.10ರ ಗಡುವು ವಿಧಿಸಿದ್ದ ಅಮಿತ್‌ ಶಾ ಅವರು ಅದಕ್ಕಾಗಿ ಸಮಿತಿ ರಚಿಸಿದ್ದರು. ಇದುವರೆಗೆ ಸಮಿತಿ ಸಭೆ ಸೇರಿ ಸಮಸ್ಯೆಗಳನ್ನು ಆಲಿಸಿಲ್ಲ ಎಂದು ಪ್ರತಿಕ್ರಿಯಿಸಿದರು.

ಬಳಿಕ ಮಾತನಾಡಿದ ಮುರಳೀಧರರಾವ್‌, “ನಾನೇ ಖುದ್ದಾಗಿ ನಿಮ್ಮ ಸಮಸ್ಯೆ ಆಲಿಸಿದ್ದು, ಇದನ್ನು ಅಮಿತ್‌ ಶಾ ಅವರ ಗಮನಕ್ಕೆ ತರುತ್ತೇನೆ. ಯಾವುದೇ ಕಾರಣಕ್ಕೂ ಪಕ್ಷಕ್ಕೆ ಹಾನಿಯಾಗುವಂತಹ ಕೆಲಸಕ್ಕೆ ಕೈಹಾಕಬೇಡಿ. ಒಂದು ವೇಳೆ ಆ ರೀತಿ ಆದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು. ಇದಕ್ಕೆ ಎಲ್ಲಾ ಅಸಮಾಧಾನಿತ ಮುಖಂಡರು ಒಪ್ಪಿದರು ಎಂದು ಮೂಲಗಳು ಹೇಳಿವೆ.

ಸಭೆಯಲ್ಲಿ ಸೊಗಡು ಶಿವಣ್ಣ, ನಂದೀಶ್‌, ಸೋಮಣ್ಣ ಬೇವಿನಮರದ, ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ, ನಿರ್ಮಲ್‌ ಕುಮಾರ್‌ ಸುರಾನಾ, ಭಾನುಪ್ರಕಾಶ್‌ ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.

ಸಂತೋಷ್‌-ಮುಕುಂದ್‌ ಚರ್ಚೆ
ಇನ್ನೊಂದೆಡೆ ಆರ್‌ಎಸ್‌ಎಸ್‌ ಕೇಂದ್ರ ಕಚೇರಿ ಕೇಶವಕೃಪಾದಲ್ಲಿ ಬಿಜೆಪಿ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್‌.ಸಂತೋಷ್‌ ಅವರು ಆರ್‌ಎಸ್‌ಎಸ್‌ ಮುಖಂಡ ಸಿ.ಆರ್‌.ಮುಕುಂದ್‌ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಭಿನ್ನಮತಕ್ಕೆ ಸಂತೋಷ್‌ ಅವರೇ ಕಾರಣ ಎಂದು ಬಿ.ಎಸ್‌.ಯಡಿಯೂರಪ್ಪ ಅವರು ಆರೋಪಿಸಿದ ಬಳಿಕ ಇವರಿಬ್ಬರು ಇದೇ ಪ್ರಥಮ ಬಾರಿಗೆ ಒಟ್ಟಾಗಿ ಸಮಾಲೋಚನೆ ನಡೆಸಿದ್ದು, ಮಾತುಕತೆ ಸಾಕಷ್ಟು ಕುತೂಹಲ ಕೆರಳಿಸಿದೆ.

ಆರ್‌ಎಸ್‌ಎಸ್‌ ಮೂಲಗಳ ಪ್ರಕಾರ, ಸಂತೋಷ್‌ ಅವರು ಆರ್‌ಎಸ್‌ಎಸ್‌ ಮೂಲಕ ಬಿಜೆಪಿ ಪದಾಧಿಕಾರಿಯಾಗಿ ನೇಮಕಗೊಂಡವರು. ಸಂಘಟನೆ ಮತ್ತು ಪಕ್ಷದ ಮಧ್ಯೆ ಕೊಂಡಿಯಾಗಿರುವವರು. ಹೀಗಾಗಿ, ಅವರು ಆರ್‌ಎಸ್‌ಎಸ್‌ ಮುಖಂಡರನ್ನು ಭೇಟಿಯಾಗುವುದು ಸಾಮಾನ್ಯ. ಇದರಲ್ಲಿ ವಿಶೇಷವೇನೂ ಇಲ್ಲ.

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

SSLC Results: ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಫ‌ಲಿತಾಂಶ ಪ್ರಕಟ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.