ಸ್ಮಾರ್ಟ್‌ಸಿಟಿ ಅನುದಾನ ಬಳಸದ್ದಕ್ಕೆ ಬಿಜೆಪಿ ಆಕ್ಷೇಪ


Team Udayavani, Dec 27, 2018, 6:43 AM IST

28.jpg

ಬೆಂಗಳೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ “ಸ್ಮಾರ್ಟ್‌ಸಿಟಿ’ ಯೋಜನೆಗೆ ಬಿಡುಗಡೆ ಮಾಡಿರುವ ಅನುದಾನವನ್ನು ಬಳಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫ‌ಲವಾಗಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಸಂಬಂಧ ಬುಧವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಹಾಗೂ ಸಹ ವಕ್ತಾರ ಎ.ಎಚ್‌.ಆನಂದ್‌, ಸ್ಮಾರ್ಟ್‌ಸಿಟಿ ಯೋಜನೆಗಾಗಿ ಕೇಂದ್ರ ಸರ್ಕಾರವು 886 ಕೋಟಿ ರೂ. ಬಿಡುಗಡೆ ಮಾಡಿದ್ದರೂ ಕೇವಲ 86.02 ಕೋಟಿ ರೂ. ಮಾತ್ರ ವೆಚ್ಚ ಮಾಡಿರುವುದು ಸರ್ಕಾರದ ನಿರ್ಲಕ್ಷ್ಯ ತೋರಿಸುತ್ತದೆ. ರಾಜ್ಯದ ಏಳು ಮಹಾನಗರಗಳಲ್ಲಿ ಮೂಲ ಸೌಕರ್ಯ ಸೇರಿದಂತೆ ಇತರೆ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ ದೊಡ್ಡ ಮೊತ್ತದ ಅನುದಾನ ಬಿಡುಗಡೆ ಮಾಡಿದ್ದರೂ ಬಳಸಿಕೊಳ್ಳದಿರಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರದಿಂದ ಅನುದಾನ ಬರುತ್ತಿಲ್ಲ ಎಂದು ಆರೋಪಿಸಿದ್ದರು. ಇದೀಗ ರಾಜ್ಯ ಸರ್ಕಾರವು ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯಕ್ಕೆ ಸಲ್ಲಿಸಿದ್ದ ಹಣಕಾಸು ವಿನಿಮಯ ಪತ್ರದಲ್ಲಿ ಕೇವಲ 86.02 ಕೋಟಿ ರೂ. ಅನುದಾನ ಬಳಸಿರುವುದು ಬಹಿರಂಗವಾಗಿದೆ. ಇದಕ್ಕೆ ಯಾರು ಹೊಣೆ ಎಂದು ಟೀಕಿಸಿದರು.

ಸ್ಮಾರ್ಟ್‌ಸಿಟಿ ಯೋಜನೆಯಡಿ ಪ್ರತಿ ನಗರಕ್ಕೆ ಆಧುನಿಕ ಸೌಲಭ್ಯ ಕಲ್ಪಿಸಲು ಕೇಂದ್ರ ಸರ್ಕಾರ 500 ಕೋಟಿ ರೂ. ಆರ್ಥಿಕ ನೆರವು ನೀಡುತ್ತಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡಿದ್ದರೆ ರಾಜ್ಯದ ಜನರಿಗೆ ಅನುಕೂಲವಾಗುತ್ತಿತ್ತು. ಬಿಡುಗಡೆಯಾದ ಅನುದಾನದಲ್ಲಿ ಶೇ.9.70ರಷ್ಟು ಹಣವಷ್ಟೇ ಬಳಕೆಯಾಗಿದೆ. ಅದರಲ್ಲಿ 38.47 ಕೋಟಿ ರೂ. ಕಚೇರಿ ಹಾಗೂ ಆಡಳಿತಾತ್ಮಕ ವೆಚ್ಚಕ್ಕೆ ಬಳಕೆಯಾಗಿದೆ. ಇದರಿಂದ ಜನಪ್ರತಿನಿಧಿಗಳು ಎಷ್ಟರ ಮಟ್ಟಿಗೆ ಯೋಜನೆ ಜಾರಿಗೆ ಆಸಕ್ತಿ ತೋರಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ವಾಗ್ಧಾಳಿ ನಡೆಸಿದ್ದಾರೆ. 

ಮೋದಿ ನೇತೃತ್ವದ ಸರ್ಕಾರ ತಾರತಮ್ಯ ಮಾಡದೆ ಯೋಜನೆಗಳಿಗೆ ಆರ್ಥಿಕ ನೆರವು ನೀಡುತ್ತಾ ಬಂದಿದೆ. ಆದರೆ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ನಿರ್ಲಕ್ಷ್ಯ ಹಾಗೂ ಯೋಜನೆ ಅನುಷ್ಠಾನಗೊಂಡರೆ ಕೇಂದ್ರ ಸರ್ಕಾರ ಹಿರಿಮೆಗೆ ಪಾತ್ರವಾಗಲಿದೆ ಎಂಬ ಕಾರಣಕ್ಕೆ ಕೈಬಿಟ್ಟಿರಬಹುದು ಎಂದು ಶಂಕಿಸಿದ್ದಾರೆ.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ಈಗಲಾದರೂ ಸ್ಮಾರ್ಟ್‌ ಸಿಟಿ ಯೋಜನೆ ಬಗ್ಗೆ ನಗರಾಭಿವೃದ್ಧಿ ಸಚಿವರು ಹಾಗೂ ಅಧಿಕಾರಿಗಳ ಜತೆ ಸಭೆ ನಡೆಸಿ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಅನ್ಯ ರಾಜ್ಯಗಳು ಕೇಂದ್ರದ ಅನುದಾನವನ್ನು  ಯಾವ ರೀತಿಯಲ್ಲಿ ಬಳಸುತ್ತಿವೆ ಎಂಬುದನ್ನು ನೋಡಿ ರಾಜ್ಯ ಸರ್ಕಾರ ಕಲಿಯಬೇಕು ಎಂದು ಹೇಳಿದರು.

ತಮಿಳುನಾಡು ವಿರೋಧ ವ್ಯಕ್ತಪಡಿಸಿದರೂ ಅದನ್ನು ಲೆಕ್ಕಿಸದೆ ಮೇಕೆದಾಟು ಯೋಜನೆಗೂ ಹಸಿರು ನಿಶಾನೆ ತೋರಿದೆ. ರಾಜ್ಯಕ್ಕೆ ಕೇಂದ್ರದ ಯಾವುದೇ ಯೋಜನೆಗೆ ಎನ್‌ಡಿಎ ಸರ್ಕಾರ ವಿರೋಧ ವ್ಯಕ್ತಪಡಿಸಿಲ್ಲ. ವಸ್ತುಸ್ಥಿತಿ ಹೀಗಿರುವಾಗ ಅನುದಾನದ ಸದುಪಯೋಗ ಅವಶ್ಯ ಎಂದು ಹೇಳಿದರು.

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.