ಅಂಧ ದಂಪತಿ ವಂಚಿಸಿ ಮಗು ಕದ್ದೊಯ್ದ ದುಷ್ಕರ್ಮಿಗಳು


Team Udayavani, Apr 30, 2019, 3:00 AM IST

Udayavani Kannada Newspaper

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಲು ನಗರಕ್ಕೆ ಬಂದಿದ್ದ ಅಂಧ ದಂಪತಿಯ ಎಂಟು ತಿಂಗಳ ಮಗುವನ್ನು ನೀರು ಕುಡಿಸುವ ನೆಪದಲ್ಲಿ ಅಪರಿಚಿತ ಮಹಿಳೆಯೊಬ್ಬಳು ಕದ್ದೊಯ್ದ ಘಟನೆ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್‌ ನಿಲ್ದಾಣದಲ್ಲಿ ನಡೆದಿದೆ.

ರಾಯಚೂರು ಜಿಲ್ಲೆ ದೇವದುರ್ಗ ತಾಲೂಕು ಮೂಲದ ಬಸವರಾಜು ಹಾಗೂ ಬಿ.ಕೆ.ಚಿನ್ನು ದಂಪತಿಯ ಪುತ್ರ ಸಾಗರ್‌ ಅಪಹರಣಗೊಂಡ ಮಗು. ಈ ಸಂಬಂಧ ದಂಪತಿ, ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿರುವ ಬಸವರಾಜು ದಂಪತಿ ಸಂಗೀತ ಶಾಲೆ ಹಾಗೂ ಆರ್ಕೆಸ್ಟ್ರಾದಲ್ಲಿ ಹಾಡು ಹಾಡಿ ಜೀವನ ನಡೆಸುತ್ತಿದ್ದಾರೆ. ದಂಪತಿ ತಾವು ಹೋದಲ್ಲೆಲ್ಲಾ ಮಗುವನ್ನು ಕರೆದೊಯ್ಯುತ್ತಿದ್ದರು. ಬೆಂಗಳೂರಿನಲ್ಲಿ ಬಸವರಾಜು ಅವರ ಸಂಬಂಧಿಗಳಿದ್ದ ಕಾರಣ, ಆಗಾಗ ಬಂದು ಹೋಗುತ್ತಿದ್ದರು.

ಪ್ರತಿ ಬಾರಿಯಂತೆ ಏ.26ರಂದು ಊರಿನಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಂದು ಏ.27ರಂದು ಮೆಜೆಸ್ಟಿಕ್‌ನಲ್ಲಿ ಇಳಿದುಕೊಂಡಿದ್ದಾರೆ. ಬೆಳಗ್ಗೆ 7.30ಕ್ಕೆ ಬಿಎಂಟಿಸಿ ಬಸ್‌ ನಿಲ್ದಾಣದಲ್ಲಿರುವ ಪ್ಲಾಟ್‌ಫಾರಂ 19(ಡಿ)ನಲ್ಲಿ ದಂಪತಿ ಪುತ್ರನ ಜತೆ ಕುಳಿತಿದ್ದರು.

ಮಗು ಜೋರಾಗಿ ಅಳುತ್ತಿದ್ದರಿಂದ ತಾಯಿ ಮಗುವಿಗೆ ನೀರು ಕುಡಿಸಲು ಹೊರಟಿದ್ದಾರೆ. ಇದೇ ವೇಳೆ ನಿಲ್ದಾಣದಲ್ಲಿದ್ದ ಅಪರಿಚಿತ ಮಹಿಳೆ, “ಮಗು ಕೊಡಿ, ನಾನು ನೀರು ಕುಡಿಸುತ್ತೇನೆ’ ಎಂದು ಮತ್ತೆ ಮತ್ತೆ ಕೇಳಿದ್ದಾಳೆ. ಆದರೆ, ದಂಪತಿ ನಿರಾಕರಿಸಿದ್ದರು.

ಈ ನಡುವೆ ಸಾಗರ್‌ ಅಳುವುದನ್ನು ನಿಲ್ಲಿಸಿಲ್ಲ. ಹೀಗಾಗಿ ಸ್ವಲ್ಪ ಸಮಾಧಾನವಾಗಬಹದು ಎಂದು ಮಹಿಳೆಗೆ ಮಗು ಕೊಟ್ಟು, ನೀರು ಕುಡಿಸುವಂತೆ ನೀರಿನ ಲೋಟ ನೀಡಿದ್ದಾರೆ. ನೀರು ಕುಡಿಸಿದ ಮಹಿಳೆ, ನೀರಿನ ಲೋಟವನ್ನು ಹಿಂದಿರುಗಿಸಿದ್ದಾಳೆ.

ನಂತರ “ನನ್ನ ಮಗು ಕೊಡಿ ತಾಯಿ’ ಎಂದು ಕೇಳಿದಾಗ ಯಾವುದೇ ಉತ್ತರ ಬಂದಿಲ್ಲ. ದಂಪತಿಗೆ ಕಣ್ಣು ಕಾಣದ ಹಿನ್ನೆಲೆಯಲ್ಲಿ ತಾವು ಕುಳಿತಿದ್ದ ಸುತ್ತ-ಮುತ್ತ ಕೈ ಆಡಿಸಿದಾಗ ಮಗುವಾಗಲಿ, ಮಗುವನ್ನು ಪಡೆದ ಅಪರಿಚಿತ ಮಹಿಳೆಯಾಗಲಿ ಸಿಕ್ಕಿಲ್ಲ.

ಆತಂಕಗೊಂಡ ದಂಪತಿ, ಪುತ್ರ ಎಲ್ಲಿ ಹೋದ ಸಹ ಪ್ರಯಾಣಿಕರನ್ನು ಕೇಳಿದ್ದಾರೆ. ಆದರೆ, ಯಾರೂ ಸರಿಯಾಗಿ ಸ್ಪಂದಿಸಿಲ್ಲ. ಕೊನೆಗೆ ಸಹಾಯಕ್ಕೆ ಬಂದ ಕೆಲವರು, ನಿಲ್ದಾಣದ ಸುತ್ತ-ಮುತ್ತ ಹುಡುಕಾಡಿದರೂ, ಮಹಿಳೆ, ಮಗು ಪತ್ತೆಯಾಗಿಲ್ಲ. ಕೊನೆಗೆ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಿಸಿ ಕ್ಯಾಮೆರಾ ಪರಿಶೀಲನೆ: ಮಹಿಳೆ ಮಗುವನ್ನು ಕರೆದೊಯ್ದ ಸ್ಥಳದ ಆಸುಪಾಸು ಇರುವ ಸಿಸಿ ಕ್ಯಾಮೆರಾ ದೃಶ್ಯಗಳನ್ನು ಸಂಗ್ರಹಿಸಿದ್ದು, ಯಾವುದೇ ಸುಳಿವು ಸಿಗುತ್ತಿಲ್ಲ. ಹೀಗಾಗಿ ಬಸವರಾಜು ಅವರ ಸೋದರ ಸಂಬಂಧಿಗಳನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಉಪ್ಪಾರಪೇಟೆ ಪೊಲೀಸರು ಹೇಳಿದರು.

ಸಿಎಂ ಭೇಟಿಯಾಗಲು ಬಂದಿದ್ದೇವು: ಉದಯವಾಣಿ ಜತೆ ಮಾತನಾಡಿದ ಬಸವರಾಜು, ಅಂಗವಿಕಲರ ಅನುದಾನ ಹಾಗೂ ತಾವು ನಡೆಸುತ್ತಿರುವ ಆರ್ಕೆಸ್ಟ್ರಾಗೆ ಧನ ಸಹಾಯ ಕೇಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಲು ಬೆಂಗಳೂರಿಗೆ ಬಂದಿದ್ದೆವು.

ಇಲ್ಲಿಗೆ ಬಂದ ನಂತರ ಮುಖ್ಯಮಂತ್ರಿ ಬಳಿ ಹೇಗೆ ಹೋಗಬೇಕು ಎಂದು ತೋಚದೆ, ಬಸ್‌ ನಿಲ್ದಾಣದಲ್ಲೇ ಕಾಲ ಕಳೆಯುತ್ತಿದ್ದೆವು. ನೀರು ಕುಡಿಸುವ ನೆಪದಲ್ಲಿ ಮಹಿಳೆ ಮಗುವನ್ನು ಕರೆದೊಯ್ದಿದ್ದಾಳೆ. ಪೊಲೀಸರು ಸೇರಿ ಯಾರೂ ಸರಿಯಾಗಿ ಸ್ಪಂದಿಸುತ್ತಿಲ್ಲ. ಬಸ್‌ ನಿಲ್ದಾಣದಲ್ಲೇ ದಿನದೂಡುತ್ತಿದ್ದೇವೆ ಎಂದು ಭಾವುಕರಾದರು.

ಮಗು ಸಿಗುವವರೆಗೂ ಬೆಂಗಳೂರು ಬಿಟ್ಟು ಹೋಗುವುದಿಲ್ಲ. ಒಂದು ವೇಳೆ ಮಗು ಸಿಗದಿದ್ದರೆ, ನಾವು ಬದುಕುವುದಿಲ್ಲ.
-ಬಸವರಾಜು, ಮಗುವಿನ ತಂದೆ

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.