ಪುಸ್ತಕೋತ್ಸವದ ಗಳಿಕೆ 4.5 ಕೋಟಿ


Team Udayavani, Oct 23, 2018, 12:37 PM IST

pustakotsava.jpg

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಪುಸ್ತಕ ಕೊಂಡು ಓದುವವರ ಸಂಖ್ಯೆ ಕ್ಷೀಣಿಸುತ್ತಿದೆ ಎಂಬ ಆತಂಕದ ಮಾತುಗಳ ನಡುವೆಯೂ ಅರಮನೆ ಮೈದಾನದಲ್ಲಿ ನಡೆದ 13ನೇ ಅಂತಾರಾಷ್ಟ್ರೀಯ ಮಟ್ಟದ ಬೆಂಗಳೂರು ಪುಸ್ತಕೋತ್ಸವದಲ್ಲಿ 50 ಲಕ್ಷ ರೂ. ಮೌಲ್ಯದ ಕನ್ನಡ ಪುಸ್ತಕಗಳು ಮಾರಾಟವಾಗಿದ್ದು, ಒಟ್ಟಾರೆ ವಹಿವಾಟು 4.5 ಕೋಟಿ ರೂ. ಮೀರಿದೆ.

ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿ ಸಭಾಂಗಣದಲ್ಲಿ ಏಳು ದಿನ ಆಯೋಜನೆಯಾಗಿದ್ದ ಪುಸ್ತಕೋತ್ಸವಕ್ಕೆ ಭಾನುವಾರ ತೆರೆಬಿದ್ದಿದೆ. ಕನ್ನಡ ಸೇರಿದಂತೆ ಇತರೆ ಭಾಷೆ ಕೃತಿಗಳ ಉತ್ತಮ ಮಾರಾಟದ ಜತೆಗೆ ಮಕ್ಕಳ ಪುಸ್ತಕಗಳು ಭಾರಿ ಪ್ರಮಾಣದಲ್ಲಿ ಮಾರಾಟವಾಗಿದೆ. 

ಐಟಿಬಿಟಿ ಪುಸ್ತಕಗಳಿಗೆ ಬೇಡಿಕೆ: ಮೂರು ವರ್ಷದ ಬಳಿಕ ನಗರದಲ್ಲಿ ಮತ್ತೆ ಆಯೋಜನೆಯಾಗಿದ್ದ ಅಂತಾರಾಷ್ಟ್ರೀಯ ಮಟ್ಟದ ಪುಸ್ತಕೋತ್ಸವದಲ್ಲಿ 270ಕ್ಕೂ ಅಧಿಕ ಮಳಿಗೆಗಳನ್ನು ತೆರೆಯಲಾಗಿತ್ತು. ವಿಶೇಷವೆಂದರೆ ಪುಸ್ತಕೋತ್ಸವದಲ್ಲಿ ಕಂಪ್ಯೂಟರ್‌ ಕಲಿಕೆ ಸೇರಿದಂತೆ ಐಟಿಬಿಟಿಗೆ ಸಂಬಂಧಿಸಿದ ಪುಸ್ತಕಗಳನ್ನು ಅಧಿಕ ಸಂಖ್ಯೆಯಲ್ಲಿ ಪುಸ್ತಕ ಪ್ರಿಯರು ಖರೀದಿಸಿದ್ದಾರೆ.

ಇಂಗ್ಲೀಷ್‌ ಕಾದಂಬರಿಗಳು, ಯುರೋಪ್‌ ಇತಿಹಾಸಕ್ಕೆ ಸಂಬಂಧಿಸಿದ ಪುಸ್ತಕಗಳು, ವಿಜ್ಞಾನ -ತಂತ್ರಜ್ಞಾನಕ್ಕೆ ಸಂಬಂಧಿ ಕೃತಿಗಳು ಸೇರಿದಂತೆ ಆಂಗ್ಲ ಭಾಷೆಯ ಹಲವು ಲೇಖಕರ ಮತ್ತು ಕಾದಂಬರಿಕಾರ ಪುಸ್ತಕಗಳು ಮಾರಾಟವಾಗಿದ್ದು, ಇದರ ವಹಿವಾಟು ಸುಮಾರು 3 ಕೋಟಿ ರೂ. ಮೀರಿದೆ. ಜತೆಗೆ ತೆಲುಗು, ತಮಿಳು, ಹಿಂದಿ ಸೇರಿದಂತೆ ಅನೇಕ ಭಾಷೆಗಳ ಹೆಸರಾಂತ ಲೇಖಕರ ಪುಸ್ತಕಗಳು ಸಾಕಷ್ಟು ಸಂಖ್ಯೆಯಲ್ಲಿ ಬಿಕರಿಯಾಗಿವೆ.

ಮಕ್ಕಳ ಪುಸ್ತಕಗಳಿಗೂ ಬೇಡಿಕೆ: ಪುಸ್ತಕೋತ್ಸವದಲ್ಲಿ ಶಾಲಾ ಮಕ್ಕಳನ್ನು ಸೆಳೆಯಲು ಆಯೋಜಕರು ವಿಶೇಷ ರಿಯಾಯ್ತಿ ಪ್ರಕಟಿಸಿದ್ದರು. ಮಕ್ಕಳಿಗೆಂದೇ ಪ್ರತ್ಯೇಕ ಮಳಿಗೆಗಳನ್ನು ತೆರೆದು ಓದು- ಬರಹ, ಕಲಿಕಾ ಸಾಮಗ್ರಿಗಳು, ಕಲೆ- ಚಿತ್ರಕಲೆಗೆ ಪೂರಕವಾದ ಪರಿಕರಗಳು ಒಳಗೊಂಡಂತೆ ಆಯ್ದ ಪುಸ್ತಕ, ಪರಿಕರಗಳ ಮೇಲೆ ಶೇ.10ರಿಂದ ಶೇ. 20ರ ರಿಯಾಯ್ತಿ ಪ್ರಕಟಿಸಲಾಗಿತ್ತು. ಹೀಗಾಗಿ, ಮಕ್ಕಳ ಪುಸ್ತಕಗಳು ಕೂಡ ನಿರೀಕ್ಷೆಗಿಂತ ಹೆಚ್ಚು ಮಾರಾಟವಾಗಿವೆ.

ಕುವೆಂಪು, ಭೈರಪ್ಪ ಕೃತಿಗಳಿಗೆ ಬೇಡಿಕೆ: ರಾಷ್ಟ್ರಕವಿ ಕುವೆಂಪು, ವರ ಕವಿ ದ.ರಾ.ಬೇಂದ್ರೆ, ಮಾಸ್ತಿ ವೆಂಕಟೇಶ ಅಯ್ಯಂಗಾರ್‌, ಶಿವರಾಮ ಕಾರಂತ, ಪೂರ್ಣಚಂದ್ರ ತೇಜಸ್ವಿ, ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಚಂದ್ರಶೇಖರ ಕಂಬಾರ, ಕಾದಂಬರಿಕಾರ ಎಸ್‌.ಎಲ್‌.ಭೈರಪ್ಪ ಸೇರಿದಂತೆ ಜನಪ್ರಿಯ ಸಾಹಿತಿಗಳು, ಕಾದಂಬರಿಕಾರರ ಕೃತಿಗಳನ್ನು ಓದುಗರು ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸಿದ್ದಾರೆ.

 ಕುವೆಂಪು ಅವರ ಜನಪ್ರಿಯ ಕಾದಂಬರಿ “ಮಲೆಗಳಲ್ಲಿ ಮದುಮಗಳು’, ಡಿವಿಜಿ ಅವರ “ಮಂಕುತಿಮ್ಮನ ಕಗ್ಗ’, ಎಸ್‌.ಎಲ್‌. ಭೈರಪ್ಪ ಅವರ “ಪರ್ವ’, “ಉತ್ತರಕಾಂಡ’, “ದಾಟು’, “ಗೃಹಭಂಗ’, “ಆವರಣ’ ಸೇರಿದಂತೆ ಹಲವು ಕಾದಂಬರಿಗಳು ಅಧಿಕ ಸಂಖ್ಯೆಯಲ್ಲಿ ಮಾರಾಟವಾಗಿವೆ.

ಕನ್ನಡ ಸಾಹಿತ್ಯ ಕೃತಿಗಳ ಮೇಲೆ ಶೇ.10ರಿಂದ ಶೇ. 50ರ ರಿಯಾಯ್ತಿ ನೀಡಲಾಗಿತ್ತು. ಹೀಗಾಗಿ ಸುಮಾರು 50 ಲಕ್ಷ ರೂ. ಮೌಲ್ಯದ ಕನ್ನಡ ಪುಸ್ತಕಗಳು ಮಾರಾಟವಾಗಿವೆ. ಅಲ್ಲದೆ ಹಲವು ಕಾಲೇಜುಗಳು ಕೂಡ ಗ್ರಂಥಾಲಯ ಸಂಗ್ರಹಕ್ಕಾಗಿ ವಿವಿಧ ರೀತಿಯ ಸುಮಾರು ಒಂದು ಲಕ್ಷ ರೂ. ಮೌಲ್ಯದ ಕೃತಿಗಳನ್ನು ಖರೀದಿಸಿವೆ ಎಂದು ಆಯೋಜಕರು ಮಾಹಿತಿ ನೀಡಿದ್ದಾರೆ.

ಪಂಪ ಭಾರತಕ್ಕೆ ಬೇಡಿಕೆ: ಕನ್ನಡ ಪುಸ್ತಕ ಪ್ರಾಧಿಕಾರ ಪುಸ್ತಕೋತ್ಸವದಲ್ಲಿ ತೆರೆದಿದ್ದ ಮಳಿಗೆಗೂ ಸಾಕಷ್ಟು ಸಂಖ್ಯೆಯಲ್ಲಿ ಓದುಗರು ಭೇಟಿ ನೀಡಿದ್ದಾರೆ. “ಪಂಪಭಾರತ’,”ಆದಿಪುರಾಣ’, ಕವಿ ಸಿದ್ದಲಿಂಗಯ್ಯ ಅವರ ‘ಸಮಗ್ರ ಸಂಪುಟ’ ಸೇರಿದಂತೆ ಸುಮಾರು 30 ಸಾವಿರ ರೂ. ಮೌಲ್ಯದ ಪುಸ್ತಕಗಳು ಮಾರಾಟವಾಗಿವೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ “ಉದಯವಾಣಿ’ಗೆ ಹೇಳಿದ್ದಾರೆ.

ಕನ್ನಡಿಗರಲ್ಲಿ ಪುಸ್ತಕ ಕೊಂಡು ಓದುವ ಪ್ರವೃತ್ತಿ ಇನ್ನೂ ಇದೇ. ಮೈಸೂರು ದಸರಾ ಉತ್ಸವದಲ್ಲೂ ಕನ್ನಡ ಪುಸ್ತಕ ಮಳಿಗೆಗಳಲ್ಲಿ ಸುಮಾರು 5 ಲಕ್ಷ ರೂ. ಮೌಲ್ಯದ ಕನ್ನಡ ಪುಸ್ತಕಗಳು ಮಾರಾಟವಾಗಿವೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರು ಪುಸ್ತಕೋತ್ಸವದಲ್ಲಿ ನಿರೀಕ್ಷೆಗೂ ಮೀರಿ ವಹಿವಾಟು ನಡೆದಿದೆ. ಇದು ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಪುಸ್ತಕೋತ್ಸವನ್ನು ಹಮ್ಮಿಕೊಳ್ಳಲು ಪ್ರೇರಣೆ ನೀಡಿದೆ.
-ಎ.ಎನ್‌.ರಾಮಚಂದ್ರ, ಪುಸ್ತಕ ಮಾರಾಟಗಾರರು ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷ

* ದೇವೇಶ ಸೂರಗುಪ್ಪ 

ಟಾಪ್ ನ್ಯೂಸ್

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.