ಬೋರ್‌ವೆಲ್‌ ಕೊರೆಯುವ ದರ ದುಪ್ಪಟ್ಟು


Team Udayavani, Sep 15, 2018, 12:05 PM IST

borewell.jpg

ಬೆಂಗಳೂರು: ನಗರದಲ್ಲಿ ಇನ್ಮುಂದೆ ಕೊಳವೆಬಾವಿ ಕೊರೆಸಲು ಜನ ದುಪ್ಪಟ್ಟು ಬೆಲೆ ತೆರಬೇಕು. ಇದು ಡೀಸೆಲ್‌ ಬೆಲೆ ಏರಿಕೆ ಎಫೆಕ್ಟ್! ನಿರಂತರ ಡೀಸೆಲ್‌ ಬೆಲೆ ಏರಿಕೆ ಪರಿಣಾಮ ಪ್ರಯಾಣ ದರ, ಉದ್ಯಮ, ಸರಕು-ಸಾಗಣೆ ಸೇರಿದಂತೆ ಎಲ್ಲ ಕ್ಷೇತ್ರಗಳ ಮೇಲೂ ಆಗುತ್ತಿದೆ. ಈಗ ಬೋರ್‌ವೆಲ್‌ ಕೊರೆಯುವ ಯಂತ್ರಗಳಿಗೂ ಇದರ ಬಿಸಿ ತಟ್ಟಿದ್ದು, ಏಕಾಏಕಿ ದುಪ್ಪಟ್ಟು ದರ ವಿಧಿಸಲು ಕರ್ನಾಟಕ ರಿಗ್‌ ಓನರ್ ಅಸೋಸಿಯೇಷನ್‌ ಸಂಘ ನಿರ್ಧರಿಸಿದೆ.

ಪರಿಷ್ಕೃತ ದರ ಸೆ.17ರಿಂದ ಅನ್ವಯ ಆಗಲಿದೆ. ಈ ಸಂಬಂಧ ರಿಗ್‌ ಮಾಲಿಕರು ಮತ್ತು ಏಜೆನ್ಸಿಗಳು ಒಕ್ಕೊರಲಿನ ತೀರ್ಮಾನ ಕೈಗೊಂಡಿದ್ದಾರೆ. ಪ್ರತಿ ಅಡಿ ಕೊಳವೆಬಾವಿ ಕೊರೆಯಲು ಈಗಿರುವ ದರ 60 ರೂ. ಇದ್ದು, ಇನ್ಮುಂದೆ 110 ರೂ. ಆಗಲಿದೆ. ಅದರಲ್ಲೂ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಅಂತರ್ಜಲ ಮಟ್ಟ  ಸಾವಿರ ಅಡಿ ತಲುಪಿದೆ. ಹಾಗಾಗಿ, ಈ ದುಬಾರಿ ದರ ಅಕ್ಷರಶಃ ಗ್ರಾಹಕರ ಕೈ ಸುಡಲಿದೆ.  

ನಗರದಲ್ಲಿ 150ಕ್ಕೂ ಅಧಿಕ ರಿಗ್‌ ಯಂತ್ರಗಳಿದ್ದು, ಸುಮಾರು 300 ಏಜೆಂಟರುಗಳಿದ್ದಾರೆ. ನಿತ್ಯ ನಗರದಲ್ಲಿ ಅಧಿಕೃತವಾಗಿಯೇ 60ಕ್ಕೂ ಹೆಚ್ಚು ಕೊಳವೆಬಾವಿಗಳನ್ನು ಕೊರೆಯಲಾಗುತ್ತದೆ. ಡೀಸೆಲ್‌ ದರ ಕಳೆದ ಒಂದು ವರ್ಷದಿಂದ ಏರಿಕೆ ಕ್ರಮದಲ್ಲೇ ಸಾಗಿದೆ. ಕೊಳವೆಬಾವಿ ಕೊರೆಯಲು ಪ್ರತಿ ಅಡಿಗೆ 1ರಿಂದ 1.25 ಲೀ. ಡೀಸೆಲ್‌ ಖರ್ಚಾಗುತ್ತದೆ.

ದರ ಇಳಿಕೆ ಆಗಬಹುದು ಹಾಗೂ ಜನರಿಗೆ ಹೊರೆ ಆಗಬಾರದು ಎಂದು ಇದುವರೆಗೂ ಕಾದುನೋಡಿದೆವು. ಆದರೆ, ಈವರೆಗೆ ಯಾವುದೇ ಪೂರಕ ಬೆಳವಣಿಗೆ ಆಗಲಿಲ್ಲ. ಹಾಗಾಗಿ, ಅನಿವಾರ್ಯವಾಗಿ ದರ ಏರಿಕೆ ಮಾಡಬೇಕಾಗಿದೆ ಎಂದು ಅಸೋಸಿಯೇಷನ್‌ ನಿರ್ದೇಶಕ ಎಸ್‌.ಆರ್‌. ಅನಿಲ್‌ಕುಮಾರ್‌ ತಿಳಿಸುತ್ತಾರೆ. ಕಳೆದ ಮೂರು ದಿನಗಳಿಂದ ಎಲ್ಲ ರಿಗ್‌ ಮಾಲಿಕರು ಮತ್ತು ಏಜೆಂಟರಿಗಾಗಿ ಕಾಯುತ್ತಿದ್ದೆವು.

ಶುಕ್ರವಾರ ಎಲ್ಲರೂ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಒಂದೇ ವೇದಿಕೆ ಅಡಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು. ಇದರಿಂದ ಸಾಮಾನ್ಯವಾಗಿ ನಾಗರಬಾವಿ ಸುತ್ತ ಕೊಳವೆಬಾವಿ ಕೊರೆಯಲು ಅಂದಾಜು 80 ಸಾವಿರ ರೂ. ಹಾಗೂ ಕೆ.ಆರ್‌. ಪುರ, ಹೆಬ್ಟಾಳ ಸುತ್ತ 1.50ರಿಂದ 2 ಲಕ್ಷ ರೂ. ಖರ್ಚಾಗುತ್ತಿತ್ತು. ಈಗ ಇದಕ್ಕೆ 30ರಿಂದ 50 ಸಾವಿರ ರೂ. ಹೆಚ್ಚುವರಿ ಹೊರೆ ಆಗಲಿದೆ ಎಂದು ಸಂಘದ ಸದಸ್ಯರೊಬ್ಬರು ಮಾಹಿತಿ ನೀಡಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.