ತಾಯಿಗೆ ಬೆಂಕಿ ಹಚ್ಚಿದ್ದದತ್ತು ಪುತ್ರನ ಬಂಧನ
Team Udayavani, Dec 13, 2018, 12:08 PM IST
ಬೆಂಗಳೂರು: ಹಣ ನೀಡದಿರುವುದಕ್ಕೆ ತಾಯಿ ಮೇಲೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಪುತ್ರನನ್ನು ಸದಾಶಿವನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಉತ್ತಮ್ ಕುಮಾರ್ ಬಂಧಿತ ಆರೋಪಿ. ಆರೋಪಿ ಡಿ.6ರ ರಾತ್ರಿ ತಾಯಿ ಭಾರತಿ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದರು.
ಮಂಜುನಾಥ್ ಮತ್ತು ಭಾರತಿ ದಂಪತಿಯ ದತ್ತು ಪುತ್ರ ಉತ್ತಮ್ ಕುಮಾರ್, ಪೋಷಕರ ಜತೆ ಅಶ್ವತ್ಥನಗರದಲ್ಲಿ ವಾಸವಾಗಿದ್ದ. ಈ ಮಧ್ಯೆ ವಿಪರೀತ ಮದ್ಯ ಸೇವನೆ ಮಾಡುತ್ತಿದ್ದ. ಇದರಿಂದ ಬೇಸರಗೊಂಡಿದ್ದ ಪೋಷಕರು ಸಾಕಷ್ಟು ಬಾರಿ ಬುದ್ದಿ ಹೇಳಿದ್ದರು. ಆದರೂ ಆರೋಪಿ ಬದಲಾಗಿರಲಿಲ್ಲ.
ಅಲ್ಲದೆ, ಕುಡಿಯಲು ಸ್ನೇಹಿತರ ಬಳಿ 10 ಸಾವಿರ ರೂ. ಸಾಲ ಮಾಡಿಕೊಂಡಿದ್ದ. ಹೀಗಾಗಿ ಸ್ನೇಹಿತರು ಹಣ ಹಿಂದಿರುಗಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಡಿ.6ರ ರಾತ್ರಿ ಕಂಠಪೂರ್ತಿ ಮದ್ಯ ಸೇವಿಸಿ ಮನೆಗೆ ಬಂದ ಉತ್ತಮ್ ಕುಮಾರ್, ತಾಯಿ ಭಾರತಿಗೆ 10 ಸಾವಿರ ರೂ. ಹಣ ಕೊಡುವಂತೆ ಕೇಳಿದ್ದಾನೆ. ಇದಕ್ಕೆ ಆಕೆ ನಿರಾಕರಿಸಿದ್ದರು. ಇದರಿಂದ ಆಕ್ರೋಶಗೊಂಡ ಆರೋಪಿ ಮನೆಯಲ್ಲಿದ್ದ ಪ್ರಟ್ರೋಲ್ನ್ನು ಆಕೆ ಮೈಮೇಲೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದ. ಪತ್ನಿಯ ಚೀರಾಟ ಕೇಳಿ ತಕ್ಷಣ ನೆರವಿಗೆ ಧಾವಿಸಿದ ಅವರ ಪತಿ ಮಂಜುನಾಥ್ ಹೊದಿಕೆಯಿಂದ ಬೆಂಕಿ ನಂದಿಸಿ, ಆಸ್ಪತ್ರೆಗೆ ದಾಖಲಿಸಿದ್ದರು ಎಂದು ಪೊಲೀಸರು ಹೇಳಿದರು.
ಮದ್ಯದ ಅಮಲಿನಲ್ಲಿ ತಪ್ಪು ಮಾಡಿದೆ: “ಮದ್ಯದ ಅಮಲಿನಲ್ಲಿ ತಪ್ಪು ಮಾಡಿದ್ದೇನೆ. ಸಾಲ ತೀರಿಸಲು ತಾಯಿ ಬಳಿ 10 ಸಾವಿರ ರೂ. ಹಣ ಕೇಳಿದೆ. ಅವರು ಕೊಡಲು ನಿರಾಕರಿಸಿದರು. ಇದರಿಂದ ಕೋಪಗೊಂಡು ತ್ಯವೆಸಗಿದ್ದೇನೆ’ ಎಂದು ಉತ್ತಮ್ ಕುಮಾರ್ ಹೇಳಿಕೆ ನೀಡಿರುವುದಾಗಿ ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ