ಮೇಲ್ಸೇತುವೆ ಮೇಲೊಂದು ಬಸ್‌ ನಿಲ್ದಾಣ!


Team Udayavani, Mar 15, 2019, 6:15 AM IST

melsetuve.jpg

ಬೆಂಗಳೂರು: ರಸ್ತೆ ಬದಿಯಲ್ಲಿ ಸಾಲುಗಟ್ಟಿ ನಿಂತಿರುವ ಹತ್ತಾರು ಖಾಸಗಿ ವಾಹನಗಳು, ರಸ್ತೆ ಮಧ್ಯೆ ಬಸ್‌ಗಾಗಿ ಕಾಯುವ ಪ್ರಯಾಣಿಕರು, ಕೇವಲ ನೂರು ಮೀಟರ್‌ ರಸ್ತೆ ಕ್ರಮಿಸಲು ಹತ್ತಾರು ನಿಮಿಷ ಪರದಾಡುವ ವಾಹನ ಸವಾರರು…

ಹಳೇ ಮದ್ರಾಸ್‌ ರಸ್ತೆಯಲ್ಲಿ ಉಂಟಾಗುತ್ತಿದ್ದ ವಾಹನ ಸಂಚಾರ ದಟ್ಟಣೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಿರ್ಮಿಸಿರುವ ಕೆ.ಆರ್‌.ಪುರ ತೂಗು ಸೇತುವೆಯ ಟಿನ್‌ ಫ್ಯಾಕ್ಟರಿ ಬಳಿ ನಿತ್ಯ ಕಂಡುಬರುವ ದೃಶ್ಯಗಳಿವು.

ವಾಹನ ಸಂಚಾರ ದಟ್ಟಣೆ ತಪ್ಪಿಸುವ ಉದ್ದೇಶದಿಂದ ಕೆ.ಆರ್‌.ಪುರ ರೈಲು ನಿಲ್ದಾಣದ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲಾಗಿದ್ದು, ದೇಶದ ಅತ್ಯುತ್ತುಮವಾದ ಮೇಲ್ಸೇತುವೆ ಎಂಬ ಖ್ಯಾತಿಯನ್ನು ಇದು ಪಡೆದಿದೆ. ಆದರೆ, ವಾಹನಗಳು ಮಾತ್ರ ಮೇಲ್ಸೇತುವೆ ಪ್ರವೇಶಿಸಲು ಹತ್ತಾರು ನಿಮಿಷ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತಿದೆ.

ಇದೀಗ ಬಿಎಂಆರ್‌ಸಿಎಲ್‌ ವತಿಯಿಂದ ನಮ್ಮ ಮೆಟ್ರೋ ಯೋಜನೆಯ ಮಾರ್ಗಕ್ಕಾಗಿ ಪಿಲ್ಲರ್‌ಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಪರಿಣಾಮ ರಸ್ತೆ ವಿಭಜಕದಿಂದ ನಾಲ್ಕೈದು ಅಡಿ ಜಾಗವನ್ನು ಬ್ಯಾರಿಕೇಡಿಂಗ್‌ ಮಾಡುವ ಮೂಲಕ ರಸ್ತೆ ಗಾತ್ರ ಕುಗ್ಗಿಸಲಾಗಿದೆ.

ಜತೆಗೆ ಐಟಿಪಿಎಲ್‌, ವೈಟ್‌ಫೀಲ್ಡ್‌, ಮಹದೇವಪುರ ಹಾಗೂ ಸಿಲ್ಕ್ ಬೋರ್ಡ್‌ಗೆ ಹೋಗಲು ಒಂದು ಕಡೆ ಹಾಗೂ ಕೋಲಾರ, ಚಿಂತಾಮಣಿ, ಆಂಧ್ರ, ತಮಿಳುನಾಡು ಕಡೆಗೆ ಹೋಗುವವರಿಗೆ ಮತ್ತೂಂದು ನಿಲ್ದಾಣವಿದೆ. ಪರಿಣಾಮ ಜನರು ರಸ್ತೆಗಳಲ್ಲಿಯೇ ನಿಲ್ಲುವುದರಿಂದ ದಟ್ಟಣೆ ನಿವಾರಣೆ ತ್ರಾಸದಾಯವಾಗಿ ಪರಿಣಮಿಸಿದೆ.

ಖಾಸಗಿ ಬಸ್‌ಗಳಿಗೆ ಅರ್ಧ ರಸ್ತೆ ಮೀಸಲು!: ಕೇವಲ 40 ಅಡಿ ಅಗಲವಿರುವ ಮೇಲ್ಸೇತುವೆ ರಸ್ತೆಯಲ್ಲಿ ಎರಡು ಬಸ್‌ಗಳು ಒಟ್ಟಿಗೆ ಸಂಚರಿಸಲು ಅವಕಾಶವಿದೆ. ಆದರೆ, ಆಂಧ್ರ, ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಗೆ ಹೋಗುವ ಖಾಸಗಿ ಬಸ್‌ಗಳು ಮೇಲ್ಸೇತುವೆಯ ಅರ್ಧ ರಸ್ತೆ ಅಕ್ರಮಿಸುತ್ತಿವೆ. ಪರಿಣಾಮ ಉಳಿದ ಅರ್ಧ ರಸ್ತೆಯಲ್ಲಿ ವಾಹನಗಳು ಸರಾಗವಾಗಿ ಸಂಚರಿಸಲಾಗದೆ ಕಿಲೋ ಮೀಟರ್‌ಗಟ್ಟಲೇ ದಟ್ಟಣೆ ಸೃಷ್ಟಿಯಾಗುತ್ತಿದೆ. 

ದಟ್ಟಣೆಯ ಪರಿಣಾಮವೇನು?: ಟಿನ್‌ಫ್ಯಾಕ್ಟರಿ ಬಸ್‌ ನಿಲ್ದಾಣದ ಬಳಿ ಕೇವಲ ಐದು ನಿಮಿಷ ದಟ್ಟಣೆ ಉಂಟಾದರೆ ಹೊರವರ್ತುಲ ರಸ್ತೆ ಹಾಗೂ ಹಳೆಮದ್ರಾಸ್‌ನ ರಸ್ತೆಯ ಎರಡೂ ಬದಿ, ಐಟಿಪಿಎಲ್‌ ಹಾಗೂ ಸಿಲ್ಕ್ಬೋಡ್‌ ರಸ್ತೆಯಲ್ಲಿ 20-30 ನಿಮಿಷಗಳ ಕಾಲ ದಟ್ಟಣೆ ಉಂಟಾಗುತ್ತದೆ. ಇನ್ನು ಬೆಳಗ್ಗೆ ಹಾಗೂ ಸಂಜೆ ವೇಳೆ ದಟ್ಟಣೆ ದುಪ್ಪಟ್ಟಾದ ಉದಾಹರಣೆಗಳಿವೆ.

ದಟ್ಟಣೆ ಹೆಚ್ಚಿಸಿದೆಯೇ ವೈಟ್‌ಟಾಪಿಂಗ್‌: ನಾಗಾವಾರ ಹೊರ ವರ್ತುಲ ರಸ್ತೆಯಲ್ಲಿ ಪಾಲಿಕೆಯಿಂದ ಕೈಗೆತ್ತಿಕೊಂಡಿರುವ ವೈಟ್‌ಟಾಪಿಂಗ್‌ ಕಾಮಗಾರಿಯೂ ಟಿನ್‌ಫ್ಯಾಕ್ಟರಿಯಲ್ಲಿ ದಟ್ಟಣೆ ಹೆಚ್ಚಾಗಲು ಕಾರಣವಾಗಿದೆ. ಬಾಣಸವಾಡಿಯಿಂದ ಟಿನ್‌ಫ್ಯಾಕ್ಟರಿ ರ್‍ಯಾಂಪ್‌ವರೆಗೆ ವೈಟ್‌ಟಾಪಿಂಗ್‌ ರಸ್ತೆಯಾಗಿರುವುದರಿಂದ ವಾಹನ ಸಂಚಾರಕ್ಕೆ ಅನುಕೂಲವಾಗಲಿದ್ದು, ಒಮ್ಮೆಗೆ ನೂರಾರು ವಾಹನಗಳು ಟಿನ್‌ಫ್ಯಾಕ್ಟರಿಗೆ ಬರುತ್ತಿರುವುದು ಸಹ ದಟ್ಟಣೆ ಹೆಚ್ಚಾಗಲು ಕಾರಣವಾಗಿದೆ. 

ಖಾಸಗಿ ಬಸ್‌ಗಳಿಗೆ ಕಡಿವಾಣವೊಂದೆ ಪರಿಹಾರ!: ಕೆ.ಆರ್‌.ಪುರ ತೂಗು ಸೇತುವೆ ಪ್ರವೇಶಿಸುವ ಆರಂಭದಲ್ಲಿಯೇ ಹತ್ತಾರು ಖಾಸಗಿ ವಾಹನಗಳು ನಿಲುಗಡೆಯಾಗಿರುತ್ತವೆ. ಟಿಕೆಟ್‌ ಬುಕ್ಕಿಂಗ್‌ ಮಾಡಿರುವ ಪ್ರಯಾಣಿಕರು ಬರುವವರೆಗೆ ವಾಹನ ಮುಂದೆ ಹೋಗುವುದಿಲ್ಲ.

ಆದರೆ, ಸಂಚಾರ ಪೊಲೀಸರು ಮಾತ್ರ ಇಂತಹ ಬಸ್‌ಗಳ ವಿರುದ್ಧ ಕ್ರಮಕೈಗೊಳ್ಳಲು ಮುಂದಾಗದಿರುವುದು ಸಾರ್ವಜನಿಕರ ಟೀಕೆಗೆ ಕಾರಣವಾಗಿದ್ದು, ಸಿಸಿ ಕ್ಯಾಮೆರಾ ಅಳವಡಿಸಿ ಅವೈಜ್ಞಾನಿಕವಾಗಿ ವಾಹನ ನಿಲುಗಡೆ ಮಾಡುವ ವಾಹನಗಳ ವಿರುದ್ಧ ಕ್ರಮಕೈಗೊಳ್ಳಬೇಕೆಂಬುದು ಜನರ ಒತ್ತಾಯವಾಗಿದೆ. 

2 ಕಿ.ಮೀ. ಸಾಗಲು 30 ನಿಮಿಷ!: ಬೆನ್ನಿಗಾನಹಳ್ಳಿಯ ರೈಲ್ವೆ ಅಂಡರ್‌ ಪಾಸ್‌ನಿಂದ ಹಳೆ ಮದ್ರಾಸ್‌ ರಸ್ತೆಯ ಐಟಿಐ ಬಸ್‌ ನಿಲ್ದಾಣದವರೆಗಿನ 2 ಕಿ.ಮೀ. ರಸ್ತೆ ಸಾಗಲು ಕನಿಷ್ಠ 30 ನಿಮಿಷಗಳಾಗುತ್ತಿದೆ. ದಟ್ಟಣೆ ನಿವಾರಣೆಗಾಗಿ ಸಿಗ್ನಲ್‌ ಅಳವಡಿಕೆ ಮಾಡಲಾಗಿದ್ದರೂ, ದಟ್ಟಣೆ ಮಾತ್ರ ಬಗೆಹರಿದಿಲ್ಲ.

* ವೆಂ. ಸುನೀಲ್‌ಕುಮಾರ್‌

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.