ಕ್ಯಾಂಟೀನ್‌ಗೆ ಆರಂಭದಲ್ಲೇ ಜಯ


Team Udayavani, Aug 19, 2017, 11:14 AM IST

canteen-indra.jpg

ಬೆಂಗಳೂರು: ಬಡ ಜನರಿಗಾಗಿ ನಗರದಲ್ಲಿ ಆರಂಭಿಸಲಾಗಿರುವ ಇಂದಿರಾ ಕ್ಯಾಂಟೀನ್‌ಗಳಿಗೆ ನಿರೀಕ್ಷೆಗೂ ಮೀರಿ ಸಾರ್ವಜನಿಕರಿಂದ ಅಭೂತ ಪೂರ್ವ ಸ್ಪಂದನೆ ಸಿಕ್ಕಿದೆ. ಯೋಜನೆ ಆರಂಭದಲ್ಲೇ ಯಶಸ್ಸು ಸಾಧಿಸಿದೆ ಎಂದು ಮೇಯರ್‌ ಜಿ.ಪದ್ಮಾವತಿ ತಿಳಿಸಿದ್ದಾರೆ.

ಶುಕ್ರವಾರ ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಕ್ಯಾಂಟೀನ್‌ಗಳು ಆರಂಭವಾಗಿ ಕೇವಲ ಎರಡು ದಿನಗಳು ಮಾತ್ರ ಕಳೆದಿವೆ. ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸಮಯ ಬೇಕಾಗುತ್ತದೆ ಎಂದು ತಿಳಿಸಿದರು. 

ಪ್ರತಿ ಕ್ಯಾಂಟೀನ್‌ನಲ್ಲಿ ಒಂದು ಹೊತ್ತಿಗೆ 300-500 ಜನರಿಗೆ ಆಹಾರ ನಿಗದಿಗೊಳಿಸಲಾಗಿದೆ. ಆದರೆ, ಬಹುತೇಕ ಕ್ಯಾಂಟೀನ್‌ಗಳ ಬಳಿ 800-1000 ಜನರು ಬಂದಿರುವುದರಿಂದ ಅವರಿಗೆ ಆಹಾರ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಯಾವ ಕ್ಯಾಂಟೀನ್‌ಗಳಿಗೆ ಎಷ್ಟು ಜನರು ಬರುತ್ತಾರೆ ಎಂಬುದನ್ನು ಮಾಹಿತಿ ಪಡೆದ ನಂತರದಲ್ಲಿ ಆಹಾರದ ಸಂಖ್ಯೆಯನ್ನು ಹೆಚ್ಚಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು. 

ಬಿಬಿಎಂಪಿ ವತಿಯಿಂದ ಕೇವಲ 60 ದಿನಗಳಲ್ಲಿ ನೂರು ಕ್ಯಾಂಟೀನ್‌ಗಳನ್ನು ನಿರ್ಮಿಸಲಾಗಿದೆ. ಇದೇ ಮೊದಲ ಬಾರಿಗೆ ಪಾಲಿಕೆಯಿಂದ ಆಹಾರ ಪೂರೈಕೆಯನ್ನು ಮಾಡುತ್ತಿರುವುದರಿಂದಾಗಿ ಕೆಲವೊಂದು ವ್ಯತ್ಯಾಸಗಳು ಕಂಡು ಬಂದಿರುವುದು ಸಹಜ. ಸಾರ್ವಜನಿಕರಿಂದ ಬರುವ ಸಲಹೆಗಳು ಹಾಗೂ ದೂರುಗಳನ್ನು ಪರಿಶೀಲಿಸಿ ಮುಂದಿನ ಕ್ರಮಕ್ಕೆ ಮುಂದಾಗುತ್ತೇವೆ ಎಂದು ತಿಳಿಸಿದರು. 

ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ , ಇದೇ ಮೊದಲ ಬಾರಿಗೆ ಪಾಲಿಕೆಯ ವತಿಯಿಂದ ಆಹಾರ ಪೂರೈಕೆ ಸೇವೆಯನ್ನು ಮಾಡಲಾಗುತ್ತಿದೆ. ಪಾಲಿಕೆಯ ಎಲ್ಲ ಅಧಿಕಾರಿಗಳಿಗೆ ಇದು ಹೊಸದು. ಆಹಾರ ಪೂರೈಕೆಯಲ್ಲಿ ತಡ, ಆಹಾರ ಕೊರತೆ ಸೇರಿದಂತೆ ಕೆಲವೊಂದು ವ್ಯತ್ಯಾಸಗಳು ಕಂಡು ಬಂದಿದ್ದು, ಶೀಘ್ರದಲ್ಲಿಯೇ ಅವುಗಳನ್ನು ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು. 

ಇಂದಿರಾ ಕ್ಯಾಂಟೀನ್‌ ಯೋಜನೆಗೆ ಸರ್ಕಾರ 200 ಕೋಟಿ ರೂ. ಅನುದಾನ ನೀಡಿದೆ. ಆಗಸ್ಟ್‌ 16ರಂದು ಆರಂಭವಾದ ಇಂದಿರಾ ಕ್ಯಾಂಟೀನ್‌ನಲ್ಲಿ ಈವರೆಗೆ 2.51 ಲಕ್ಷ ಜನರು ಆಹಾರ ಸೇವನೆ ಮಾಡಿದ್ದಾರೆ. ಆದರೆ, ನಿರೀಕ್ಷೆಗಿಂತ ಹೆಚ್ಚಿನ ಸಂಖ್ಯೆಯ ಜನರು ಕ್ಯಾಂಟೀನ್‌ಗಳಿಗೆ ಬರುತ್ತಿರುವುದರಿಂದ 15 ದಿನಗಳ ನಂತರ ಆಹಾರ ಸಂಖ್ಯೆಯನ್ನು ಹೆಚ್ಚಿಸುವ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿ ಹೆಚ್ಚಿನ ಅನುದಾನ ಕೋರಲಾಗುವುದು ಎಂದರು. 

ಆಹಾರ ಪೂರೈಕೆಯನ್ನು ಉಪಗುತ್ತಿಗೆ ನೀಡಲಾಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಆಹಾರ ಪೂರೈಕೆ ಗುತ್ತಿಗೆ ಪಡೆದಿರುವಂತಹ ಸಂಸ್ಥೆಗಳೊಂದಿಗೆ ಮಾಡಿಕೊಂಡಿರುವ ಗುತ್ತಿಗೆದಾರರೊಂದಿಗಿನ ಒಡಂಬಡಿಕೆಯಲ್ಲಿ ಉಪಗುತ್ತಿಗೆ ನೀಡಲು ಅನುಮತಿ ನೀಡಲಾಗಿದೆ. ಆದರೆ, ಯಾವುದೇ ತೊಂದರೆಯಾದರೂ ಸಹ ಅದಕ್ಕೆ ಗುತ್ತಿಗೆದಾರರನ್ನೇ ನೇರವಾಗಿ ಹೊಣೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು. 

ಬಿಬಿಎಂಪಿ ವತಿಯಿಂದ ನಿರ್ಮಿಸಲಾಗುತ್ತಿರುವ ಕೇಂದ್ರೀಕೃತ ಅಡುಗೆ ಮನೆಗಳ ಕಾಮಗಾರಿ ಪ್ರಗತಿಯಲ್ಲಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಅಡುಗೆ ಮನೆ ನಿರ್ಮಿಸಿಕೊಳ್ಳಲು ಗುತ್ತಿಗೆದಾರರಿಗೆ ಜಾಗ ನೀಡಲಾಗಿದೆ. ಅದರಂತೆ ಶೇಫ್ಟಾಕ್‌ ಸಂಸ್ಥೆಯವರು ಗುಂಜೂರು, ರಾಜಾಜಿನಗರ, ಜಯನಗರ ಮತ್ತು ಮಾದನಾಯಕನಹಳ್ಳಿ ಅಡುಗೆ ಮನೆಗಳನ್ನು ನಿರ್ಮಿಸಿದ್ದು, ರಿವಾರ್ಡ್ಸ್‌ ಸಂಸ್ಥೆಯವರು ಸಹಕಾರ ನಗರ, ಪ್ಯಾಲೇಸ್‌ ಮೈದಾನದ ತ್ರಿಪುರವಾಸಿನಿ, ವೈಟ್‌ಪೆಟಲ್ಸ್‌ ಹಾಗೂ ಕೋನೆನ ಅಗ್ರಹಾರದಲ್ಲಿ ಕ್ಯಾಂಟೀನ್‌ ನಿರ್ಮಿಸಿದ್ದಾರೆ ಎಂದು ಮಾಹಿತಿ ನೀಡಿದರು. 

ಅಡುಗೆ ಮನೆ ಪ್ರವೇಶ ನಿರ್ಬಂಧ
ಇಂದಿರಾ ಕ್ಯಾಂಟೀನ್‌ಗಳ ಆಹಾರ ಪೂರೈಕೆ ಮಾಡುವಂತಹ ಅಡುಗೆ ಮನೆಗಳ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಕಾರಣ ಯಾರಾದರೂ ಆಹಾರಕ್ಕೆ ಏನನ್ನಾದರೂ ವಿಷಯುಕ್ತ ಅಂಶವನ್ನು ಸೇರಿಸಿದರೆ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗುತ್ತದೆ. ಆ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಅಡುಗೆ ಮನೆಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಆಯುಕ್ತರು ಉತ್ತರಿಸಿದರು. 

ನೆಗೆಟೀವ್‌ ಹುಡುಕಬೇಡಿ
ನಗರದಲ್ಲಿನ ಬಡವರಿಗಾಗಿ ಇಂದಿರಾ ಕ್ಯಾಂಟೀನ್‌ಗಳನ್ನು ಆರಂಭಿಸಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಇಂತಹ ಜನಪರ ಕಾರ್ಯಕ್ರಮಕ್ಕೆ ಮಾಧ್ಯಮಗಳು ಸಹಕಾರ ನೀಡಬೇಕು. ಯೋಜನೆಯಲ್ಲಿ ನೆಗೆಟೀವ್‌ (ನಕಾರಾತ್ಮಕ) ಅಂಶಗಳನ್ನು ಹುಡುಕಬೇಡಿ ಎಂದು ಮೇಯರ್‌ ಜಿ.ಪದ್ಮಾವತಿ ಮನವಿ ಮಾಡಿದರು. 

ಕಳೆದ ಮೂರು ದಿನಗಳಿಂದ ತಿಂಡಿ-ಆಹಾರ ಸೇವಿಸಿದವರ ಸಂಖ್ಯೆ 
-ಆಗಸ್ಟ್‌ 16ರ ರಾತ್ರಿ    49,400
-ಆಗಸ್ಟ್‌ 17ರ ಬೆಳಗ್ಗೆ    37,200
-ಆಗಸ್ಟ್‌ 17ರ ಮಧ್ಯಾಹ್ನ    39,500
-ಆಗಸ್ಟ್‌ 17ರ ರಾತ್ರಿ    42,100
-ಆಗಸ್ಟ್‌ 18ರ ಬೆಳಗ್ಗೆ    40,500
-ಆಗಸ್ಟ್‌ 18ರ ಮಧ್ಯಾಹ್ನ    43,000

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.