ಸವಾಲಾಗಿದೆ ಪ್ರಾಣಿಜನ್ಯ ತ್ಯಾ ಜ್ಯ


Team Udayavani, Apr 23, 2017, 12:20 PM IST

meat-waste.jpg

ಬೆಂಗಳೂರು: ಮನೆ, ಅಪಾರ್ಟ್‌ಮೆಂಟ್‌, ಹೋಟೆಲ್‌, ಮಾರುಕಟ್ಟೆ ಸೇರಿದಂತೆ ವಸತಿ ಹಾಗೂ ವಾಣಿಜ್ಯ ಕಟ್ಟಡಗಳಲ್ಲಿ ಸಂಗ್ರಹವಾಗುವ ತ್ಯಾಜ್ಯ ವಿಲೇವಾರಿಯೇ ಬಿಬಿಎಂಪಿಗೆ ತಲೆನೋವಾಗಿರು­ವಾಗ, ಅಪಾಯಕಾರಿ ಪ್ರಾಣಿಜನ್ಯ ತ್ಯಾಜ್ಯ ಮತ್ತು ಶೌಚ ತ್ಯಾಜ್ಯ ಪಾಲಿಕೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. 

ನಗರದಲ್ಲಿ ಉತ್ಪತ್ತಿಯಾಗುತ್ತಿರುವ ಪ್ರಾಣಿಜನ್ಯ ತ್ಯಾಜ್ಯ ಹಾಗೂ ಶೌಚತ್ಯಾಜ್ಯದ ವಿಲೇವಾರಿ ಸಮರ್ಪಕವಾಗಿ ಆಗುತ್ತಿಲ್ಲ. ಇದು ಜನಸಾಮಾನ್ಯರ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ. ಆಘಾತಕಾರಿ ಸಂಗತಿ ಎಂದರೆ, ನಗರದಲ್ಲಿ ಮಾಂಸದ ಮಳಿಗೆಗಳ ತ್ಯಾಜ್ಯವನ್ನು ರಾತ್ರಿ ವೇಳೆ ರಾಜ ಕಾಲುವೆ, ಖಾಲಿ ನಿವೇಶನಗಳಲ್ಲಿ ಎಸೆದು ಹೋಗುತ್ತಿರುವುದರಿಂದ ತ್ಯಾಜ್ಯ ಕೊಳೆತು ವೈರಾಣು ಸೋಂಕು ಹರಡುವಂತಾಗಿದೆ. ಇದಕ್ಕೆ ಪ್ರಮುಖ ಕಾರಣ ಪ್ರಾಣಿ ಜನ್ಯ ತ್ಯಾಜ್ಯ ಹಾಗೂ ಶೌಚ ತ್ಯಾಜ್ಯ ಸಮರ್ಪಕ ವಿಲೇವಾರಿ ವ್ಯವಸ್ಥೆ ಇಲ್ಲದಿರುವುದು.

ಸಾಮಾನ್ಯ ಹಸಿ – ಒಣ ತ್ಯಾಜ್ಯಕ್ಕಿಂತ ಪ್ರಾಣಿಜನ್ಯ ತ್ಯಾಜ್ಯ ಹಾಗೂ ಶೌಚತ್ಯಾಜ್ಯ ಹೆಚ್ಚು ಅಪಾಯಕಾರಿ. ಹಸಿ, ಒಣ ತಾಜ್ಯವನ್ನು ಒಂದೆರಡು ದಿನ ವಿಲೇವಾರಿ ಮಾಡದಿದ್ದರೂ ಹೆಚ್ಚಿನ ತೊಂದರೆಯಿಲ್ಲ. ಆದರೆ, ಪ್ರಾಣಿಜನ್ಯ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡದಿದ್ದರೆ ಇಡೀ ಪರಿಸರ ಮಲೀನವಾಗುತ್ತದೆ ಎಂಬುದು ಆರೋಗ್ಯಾಧಿಕಾರಿಗಳ ಆತಂಕ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಪರವಾನಗಿ ಪಡೆದ 1900 ಅಧಿಕೃತ ಮಾಂಸ ಮಾರಾಟ ಮಳಿಗೆಗಳಿವೆ. ಆದರೆ, ಅನುಮತಿ ಪಡೆಯದ ಮಳಿಗೆಗಳು ಒಂದು ಸಾವಿರಕ್ಕೂ ಹೆಚ್ಚಿವೆ. ಇವುಗಳಿಂದ ನಿತ್ಯ 100 ಟನ್‌ನಷ್ಟು ಪ್ರಾಣಿಜನ್ಯ ತಾಜ್ಯ ಉತ್ಪತ್ತಿಯಾಗುತ್ತಿದೆ. ಇದರಲ್ಲಿ ಬಹುಪಾಲು ತ್ಯಾಜ್ಯ ಅವೈಜ್ಞಾನಿಕವಾಗಿ ವಿಲೇವಾರಿ ಆಗುತ್ತಿದ್ದು, ಅನಧಿಕೃತ ಮಾಂಸ ಮಾರಾಟ ಮಳಿಗೆಗಳು ಪ್ರಾಣಿಜನ್ಯ ತ್ಯಾಜ್ಯವನ್ನು ಎಲ್ಲೆಂದರಲ್ಲಿ ವಿಲೇವಾರಿ ಮಾಡುತ್ತಿರುವುದು ಸಮಸ್ಯೆ ಮತ್ತಷ್ಟು ಹೆಚ್ಚುವಂತೆ ಮಾಡಿದೆ. 

ಕಾಲುವೆ ಸೇರುತ್ತಿರುವ ತ್ಯಾಜ್ಯ: ನಗರದ ಬಹುತೇಕ ಕಡೆಗಳಲ್ಲಿ ಕೋಳಿ ಅಂಗಡಿಗಳ ತ್ಯಾಜ್ಯ ಮಳೆ ನೀರು ಹರಿಯುವ ರಾಜ ಕಾಲುವೆ ಸೇರುತ್ತಿದ್ದು, ಮಳಿಗೆದಾರರು ಪ್ಲಾಸ್ಟಿಕ್‌ ಚೀಲದಲ್ಲಿ ತ್ಯಾಜ್ಯ ತುಂಬಿ ರಾತ್ರಿ ವೇಳೆಯಲ್ಲಿ ಕಾಲುವೆ, ಖಾಲಿ ನಿವೇನಗಳಲ್ಲಿ ಎಸೆಯುತ್ತಿದ್ದಾರೆ. ಚೀಲದ ತುದಿ ಕಟ್ಟಿರುವುದರಿಂದ ತ್ಯಾಜ್ಯ ಅಲ್ಲೇ ಕೊಳೆತು ನಾಯಿ, ಹದ್ದುಗಳು ಮುತ್ತಿಕೊಂಡು ಎಳೆದಾಡುವ ದೃಶ್ಯಗಳು ಕೆಲವೆಡೆ ಸಾಮಾನ್ಯ. ಮಾಂಸದ ತ್ಯಾಜ್ಯ ಕಾಲುವೆಗಳಲ್ಲಿ ತುಂಬುವುದರಿಂದ ತ್ಯಾಜ್ಯ ಹೂಳು ತುಂಬಿ ಮಳೆ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಿಕೆಗೂ ಅಡ್ಡಿಯಾಗುತ್ತಿದೆ.

ನಿಯಮಾನುಸಾರ ಮಾಂಸದ ಮಳಿಗೆಗಳಲ್ಲಿ ಶುಚಿತ್ವಕ್ಕೆ ಹೆಚ್ಚು ಒತ್ತು ಕೊಡಬೇಕು. ಈ ಬಗ್ಗೆ ಪರವಾನಗಿ ನೀಡುವಾಗಲೂ ಸಾಕಷ್ಟು ಷರತ್ತು ಹಾಕಲಾಗಿರುತ್ತದೆ. ಆದರೆ, ಅದ್ಯಾವುದೂ ಪಾಲನೆಯಾಗು­ತ್ತಿಲ್ಲ. ಪಾಲಿಕೆಯಲ್ಲಿ ನೋಂದಾಣಿಯಾಗದ ಮಾಂಸದ ಮಳಿಗೆಗ­ಳಿಂದ ಉತ್ಪತ್ತಿಯಾಗುವ ತ್ಯಾಜ್ಯವೆಲ್ಲಾ ಸಂಪೂರ್ಣ ಅವೈಜ್ಞಾನಿಕವಾಗಿ ವಿಲೇವಾರಿಯಾಗುತ್ತಿವೆ. ಪಾಲಿಕೆ ವತಿಯಿಂದ ಪ್ರಾಣಿಜನ್ಯ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿದ್ದರೂ ಮಾಂಸ ಮಾರಾಟ ಮಳಿಗೆದಾರರು ಇದಕ್ಕೆ ಸ್ಪಂದಿಸುತ್ತಿಲ್ಲ. ಬಹುತೇಕ ಮಳಿಗೆಗಳು ಅನಧಿಕೃತವಾಗಿರುವುದರಿಂದ ಅಲ್ಲಿನ ತ್ಯಾಜ್ಯ ಪಾಲಿಕೆಗೆ ತಲುಪುತ್ತಿಲ್ಲ.

ನಾಯಿಗಳ ಹಾವಳಿ ಹೆಚ್ಚಳ: ಪ್ರಾಣಿಜನ್ಯ ತ್ಯಾಜ್ಯವನ್ನು ಸಾಮಾನ್ಯ ಕಸದೊಂದಿಗೆ ರಸ್ತೆಬದಿ, ಪಾದಚಾರಿ ಮಾರ್ಗಗಳಲ್ಲಿ ಎಸೆಯುತ್ತಿರುವುದರಿಂದ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದೆ. ಮಾಂಸದ ಪೋಷಣೆಯಿಂದ ದಷ್ಟಪುಷ್ಟವಾಗಿರುವ ನಾಯಿಗಳು ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನ ಸವಾರರು, ದಾರಿಹೋಕರ ಮೇಲೆ ದಾಳಿ ನಡೆಸುವ ಸಾಧ್ಯತೆಗಳು ಹೆಚ್ಚು ಎಂದು ಅಧಿಕಾರಿಗಳು ತಿಳಿಸುತ್ತಾರೆ.

ಶೌಚ ತ್ಯಾಜ್ಯದ ಗೊಡವೆ
ಪ್ರಾಣಿ ಜನ್ಯ ತ್ಯಾಜ್ಯದ ಜತೆಗೆ ಶೌಚ ತ್ಯಾಜ್ಯ ಸಹ ಪಾಲಿಕೆಗೆ ಸಮಸ್ಯೆಯಾಗಿದೆ. ಮನೆ, ಕ್ಲಿನಿಕ್‌, ಆಸ್ಪತ್ರೆ, ನರ್ಸಿಂಗ್‌ ಹೋಂಗಳಲ್ಲಿ ಶೌಚ ತ್ಯಾಜ್ಯದ ವಿಲೇವಾರಿ ಪ್ರತ್ಯೇಕವಾಗಿ ಆಗಬೇಕು. ಕೆಲವು ಆಸ್ಪತ್ರೆ ಹಾಗೂ ನರ್ಸಿಂಗ್‌ ಹೋಂಗಳು ಇಂತಹ ತ್ಯಾಜ್ಯದ ವಿಲೇವಾರಿಗೆ ತಮ್ಮದೇ ವ್ಯವಸ್ಥೆ ಮಾಡಿಕೊಂಡಿವೆ. ಆದರೆ, ಮನೆಗಳಲ್ಲಿ ಅಥವಾ ಸಣ್ಣಪುಟ್ಟ ಕ್ಲಿನಿಕ್‌, ಆಸ್ಪತ್ರೆಗಳಲ್ಲಿ ಸಂಗ್ರಹವಾಗುವ ತ್ಯಾಜ್ಯ ಸಾಮಾನ್ಯ ತ್ಯಾಜ್ಯದ ಜತೆ ರಸ್ತೆ ಸೇರುತ್ತಿದೆ. ಇದರಿಂದಾಗಿ ಕಸ ವಿಷವಾಗಿ ಪರಿಣಮಿಸುತ್ತಿದೆ. 

ಶೌಚತ್ಯಾಜ್ಯ (ಸ್ಯಾನಿಟರಿ) ಯಾವುದು?
ಬಟ್ಟೆಗಳಿಗೆ ದೇಹದ ಯಾವುದೇ ದ್ರವ ಪದಾರ್ಥ ಅಂಟಿಕೊಂಡಿದ್ದರೆ ಅವುಗಳನ್ನು ಶೌಚ (ಸ್ಯಾನಿಟರಿ) ತ್ಯಾಜ್ಯ ಎಂದು ಪರಿಗಣಿಸಲಾಗುತ್ತದೆ. ಬಟ್ಟೆಗಳು, ಪೇಯಿಂಟ್‌, ರಾಸಾಯನಿಕಗಳಿಂದ ಕೂಡಿದ್ದರೆ ಅವುಗಳನ್ನು ಅಪಾಯಕಾರಿ ಗೃಹ ತ್ಯಾಜ್ಯ ಎಂದು ವಿಂಗಡಿಸಿ ಪೌರಕಾರ್ಮಿಕರಿಗೆ ಪ್ರತ್ಯೇಕವಾಗಿ ನೀಡಬೇಕು. ಆದರೆ,  ಈ ಕೆಲಸ ಆಗುತ್ತಿಲ್ಲ. ಎಷ್ಟೇ ಜಾಗೃತಿ ಮೂಡಿಸಿದರೂ ಮನೆಗಳಿಂದ ಕಸ ಸಮರ್ಪಕವಾಗಿ ವಿಂಗಡಣೆಯಾ­ಗುತ್ತಿಲ್ಲ.

ಪಾಲಿಕೆಯಿಂದ ಪರವಾನಗಿ ನೀಡುವ ವೇಳೆ ಪ್ರಾಣಿಜನ್ಯ ತ್ಯಾಜ್ಯ ವಿಲೇವಾರಿಯ ಕುರಿತು ಹಲವು ಷರತ್ತುಗಳನ್ನು ನೀಡಲಾಗುತ್ತದೆ. ಆದರೆ, ಮಳಿಗೆದಾರರು ಅವುಗಳ ಪಾಲನೆಗೆ ಮುಂದಾಗುತ್ತಿಲ್ಲ. ಇದರೊಂದಿಗೆ ನಗರದಲ್ಲಿ ಅನಧಿಕೃತ ಮಾಂಸ ಮಾರಾಟ ಮಳಿಗೆಗಳು ಹೆಚ್ಚಿವೆ. ಮಾಂಸ ಮಾರಾಟ ಮಳಿಗೆದಾ­ರರು ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ಪಾಲಿಕೆಯ ಸಿಬ್ಬಂದಿಗೆ ನೀಡಿದರೆ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಡೆಯಬಹುದಾಗಿದೆ. ಈಗಾಗಲೇ ಪಾಲಿಕೆಯಿಂದ ಅನಧಿಕೃತ ಹಾಗೂ ಎಲ್ಲೆಂದರಲ್ಲಿ ತ್ಯಾಜ್ಯ ಹಾಕುವವರ ಪತ್ತೆ ದಳ ರಚಿಸಲು ಮುಂದಾಗಿದ್ದೇವೆ. 
-ಎನ್‌. ಮಂಜುನಾಥ ಪ್ರಸಾದ್‌, ಬಿಬಿಎಂಪಿ ಆಯುಕ್ತರು

* ವೆಂ.ಸುನೀಲ್‌ಕುಮಾರ್‌

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.