ಆಕಾಡೆಮಿ, ಪ್ರಾಧಿಕಾರಿಗಳ ಅಧ್ಯಕ್ಷರ ಬದಲಾವಣೆ ಸರಿಯಲ್ಲ


Team Udayavani, May 30, 2018, 11:53 AM IST

akademi.jpg

ಬೆಂಗಳೂರು: “ಸರ್ಕಾರ ಬದಲಾಗುತ್ತಿದ್ದಂತೆ ಅಕಾಡೆಮಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರನ್ನೂ ಬದಲಾಯಿಸುವ ಪ್ರವೃತ್ತಿ ಸರಿಯಲ್ಲ . ಈ ರೀತಿಯ ಬೆಳವಣಿಗೆಗಳು ಸಾಹಿತಿಗಳಿಗೆ ಮಾಡುವ ಅವಮಾನ’ ಎಂದು ವಿಮರ್ಶಕ ಪ್ರೊ.ಸಿ.ಎನ್‌. ರಾಮಚಂದ್ರನ್‌ ತಿಳಿಸಿದ್ದಾರೆ. 

ನಗರದ ನಯನ ಸಭಾಂಗಣದಲ್ಲಿ ಮಂಗಳವಾರ ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹಮ್ಮಿಕೊಂಡಿದ್ದ “2017ನೇ ಸಾಲಿನ ಗೌರವ ಪ್ರಶಸ್ತಿ’ ಮತ್ತು “2016ನೇ ಸಾಲಿನ ಪುಸ್ತಕ ಬಹುಮಾನ ವಿತರಣೆ’ ಸಮಾರಂಭದಲ್ಲಿ ಗೌರವ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬೆನ್ನಲ್ಲೇ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಅಕಾಡೆಮಿ-ಪ್ರಾಧಿಕಾರಗಳೂ ಸೇರಿದಂತೆ ಎಲ್ಲ ಅಕಾಡೆಮಿಗಳ ಅಧ್ಯಕ್ಷರ ಅಧಿಕಾರಾವಧಿ ಮೊಟಕುಗೊಳ್ಳುತ್ತದೆ.

ಹೊಸ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ. ಸರ್ಕಾರಿ ಅನುದಾನಿತ ಸಂಸ್ಥೆಗಳು ಎಂಬ ಕಾರಣಕ್ಕೆ ಈ ರೀತಿ ಬದಲಾವಣೆ ಮಾಡುವುದಾದರೆ, ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಯಾಕೆ ಈ ನಿಯಮ ಅನ್ವಯಿಸುವುದಿಲ್ಲ? ಅಕಾಡೆಮಿ ಅಥವಾ ಪ್ರಾಧಿಕಾರಗಳಿಗೆ ಮಾತ್ರ ಯಾಕೆ ಈ ನಿಯಮ ಎಂದು ಪ್ರಶ್ನಿಸಿದರು.

ಈ ರೀತಿಯ ಬೆಳವಣಿಗೆಗಳು ಸಾಹಿತಿಗಳು-ಚಿಂತಕರಿಗೆ ಮಾಡುವ ಅವಮಾನ. ಇದು ತಕ್ಷಣ ನಿಲ್ಲಬೇಕು. ಈ ನಿಟ್ಟಿನಲ್ಲಿ “ಸಾಂಸ್ಕೃತಿಕ ನೀತಿ’ಯ ಶಿಫಾರಸುಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.

ಅನುವಾದಿತ ಕೃತಿಗಳನ್ನು ಪ್ರಕಟಿಸುವುದು ಮಾತ್ರವಲ್ಲ. ಆ ಕೃತಿಗಳು ಎಷ್ಟು ಜನರನ್ನು ಮತ್ತು ಯಾವ ವರ್ಗವನ್ನು ತಲುಪುತ್ತಿದೆ ಎಂಬುದು ಕೂಡ ಮುಖ್ಯ. ಈ ನಿಟ್ಟಿನಲ್ಲಿ ಅಕಾಡೆಮಿಗಳು-ಪ್ರಾಧಿಕಾರಗಳು ಹೊರತರುವ ಎಲ್ಲ ಕೃತಿಗಳನ್ನು ಸರ್ಕಾರವೇ ಮುಂದೆ ಬಂದು, ಸಗಟು ರೂಪದಲ್ಲಿ ಖರೀದಿಸಿ ಶಾಲಾ-ಕಾಲೇಜುಗಳಿಗೆ ತಲುಪಿಸುವಂತಾಗಬೇಕು ಎಂದು ಹೇಳಿದರು.

“ಭಾಷಾ ಬಾಂಧವ್ಯದ ಕೊಂಡಿ’: ಪ್ರಾಧಿಕಾರದ ಅಧ್ಯಕ್ಷ ಪ್ರೊ.ಕೆ. ಮರುಳ ಸಿದ್ದಪ್ಪ ಪ್ರಾಸ್ತಾವಿಕ ಮಾತನಾಡಿ, ಭಾಷೆಗಳ ನಡುವೆ ಬಾಂಧವ್ಯ ಬೆಸೆಯುವುದರಲ್ಲಿ ಅನುವಾದ ಕ್ಷೇತ್ರ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಭಾಷಾ ಭಾರತಿ ಆರಂಭದಿಂದಲೂ 340 ಪುಸ್ತಕಗಳನ್ನು ಅನುವಾದ ಮಾಡಿದೆ. ನನ್ನ ಆಡಳಿತಾವಧಿಯಲ್ಲೇ 60 ಪುಸ್ತಕಗಳು ಅನುವಾದಕ್ಕೆ ಸಿದ್ಧವಾಗಿವೆ. ಡಾ.ಅಂಬೇಡ್ಕರ್‌ ಅವರ ಸಮಗ್ರ ಬರಹಗಳ ಸಂಪುಟ ಕೂಡ ಮರುಮುದ್ರಣಕ್ಕೆ ತಯಾರಾಗಿದೆ ಎಂದು ವಿವರಿಸಿದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್‌.ಆರ್‌. ವಿಶುಕುಮಾರ್‌ ಮಾತನಾಡಿ, ಅಕಾಡೆಮಿ ಅಥವಾ ಪ್ರಾಧಿಕಾರ ಪ್ರಕಟಿಸುವ ಎಲ್ಲ ಕೃತಿಗಳನ್ನು ಉಚಿತವಾಗಿ ವಿಶ್ವವಿದ್ಯಾಲಯಗಳು, ಕಾಲೇಜುಗಳು, ಸಾರ್ವಜನಿಕ ಗ್ರಂಥಾಲಯಗಳಿಗೆ ಪೂರೈಸಲು ಆದೇಶ ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದರು. 

ಅನುವಾದಕ ಮತದಾನಿದ್ದಂತೆ: “ಟಾಲ್‌ಸ್ಟಾಯ್‌, ರವೀಂದ್ರನಾಥ ಟ್ಯಾಗೋರ್‌ ಎಲ್ಲರಿಗೂ ಗೊತ್ತು. ಆದರೆ, ಅವರನ್ನು ಪರಿಚಯಿಸಿದ ಅನುವಾದಕರು ಮಾತ್ರ ಯಾರಿಗೂ ಗೊತ್ತಿಲ್ಲ’. ಎಷ್ಟೋ ಅನುವಾದಕರು ಬೇರೆ ಬೇರೆ ಭಾಷೆಗಳಲ್ಲಿ ಇರುವ ಕೃತಿಗಳನ್ನು ಅನುವಾದಿಸಲು ತಮ್ಮ ಬದುಕನ್ನು ಮೀಸಲಿಟ್ಟಿದ್ದಾರೆ. ಆದರೆ, ಅವರಾರೂ ನೆನಪಿನಲ್ಲಿ ಇರುವುದೇ ಇಲ್ಲ. ಅನುವಾದಕ ಒಂದು ರೀತಿ ಮತದಾರರಂತೆ. ಗೆದ್ದುಬಂದ ಶಾಸಕರು, ನಂತರದಲ್ಲಿ ಆ ಕ್ಷೇತ್ರದ ಮತದಾರರನ್ನು ಮರೆತುಬಿಡುತ್ತಾರೆ ಎಂದು ಪ್ರೊ.ಸಿ.ಎನ್‌. ರಾಮಚಂದ್ರನ್‌ ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.