ಧರ್ಮಸ್ಥಳದಲ್ಲಿ 2 ಕಿಂಡಿ ಅಣೆಕಟ್ಟು ನಿರ್ಮಿಸಲು ಮುಖ್ಯಮಂತ್ರಿ ಸೂಚನೆ
Team Udayavani, May 28, 2019, 1:13 PM IST
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಿದರು.
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯವರು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತು ವಿಶೇಷವಾಗಿ ಧರ್ಮಸ್ಥಳ ಹಾಗೂ ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಭೆ ನಡೆಸಿದರು.
ಧರ್ಮಸ್ಥಳದಲ್ಲಿ ಈ ಬಾರಿ ನೇತ್ರಾವತಿ ನೀರು ಬತ್ತಿ ಹೋಗಿರುವುದರಿಂದ ಉಂಟಾಗಿರುವ ಸಮಸ್ಯೆ ಕುರಿತು ಮುಖ್ಯಮಂತ್ರಿ ಸೂಚನೆಯಂತೆ ಭೇಟಿ ನೀಡಿದ್ದ ಜಿಲ್ಲಾ ಪಂಚಾಯತ್ ಸಿಇಒ ಡಾ.ಆರ್.ಸೆಲ್ವಮಣಿ ಅವರು ಸಮಸ್ಯೆ ಕುರಿತು ಮಾಹಿತಿ ನೀಡಿದರು.
ಆಲ್ಲದೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಎರಡು ಕಿಂಡಿ ಅಣೆಕಟ್ಟು ನಿರ್ಮಿಸಲು ಸರ್ಕಾರಕ್ಕೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಏಳು ಕೋಟಿ ರೂ. ವೆಚ್ಚದಲ್ಲಿ ನೆರಿಯ ಹೊಳೆ ಹಾಗೂ ನೇತ್ರಾವತಿ ನದಿಗೆ ಕಿಂಡಿ ಅಣೆಕಟ್ಟು ನಿರ್ಮಿಸಲು ಸರ್ಕಾರಕ್ಕೆ ಸಣ್ಣ ನೀರಾವರಿ ಇಲಾಖೆಯು ಪ್ರಸ್ತಾವನೆ ಸಲ್ಲಿಸಿದೆ ಎಂದು ತಿಳಿಸಿದರು. ಈ ಪ್ರಸ್ತಾವನೆ ಅನುಮೋದಿಸಿ ಕೂಡಲೇ ಕಿಂಡಿ ಅಣೆಕಟ್ಟು ನಿರ್ಮಿಸಲು ಕ್ರಮ ವಹಿಸಲು ಮುಖ್ಯಮಂತ್ರಿಯವರು ಸೂಚಿಸಿದರು.
ಮಂಗಳೂರು ನಗರದ ಕುಡಿಯುವ ನೀರಿನ ಸಮಸ್ಯೆ ಕುರಿತು ಮಾಹಿತಿ ನೀಡಿದ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್, ಮಂಗಳೂರಿನಲ್ಲಿ ಜನಸಂಖ್ಯೆ ಹೆಚ್ಚಿದ್ದು ತುಂಬೆ ಹಿಂಡಿ ಅಣೆಕಟ್ಟಿನಲ್ಲಿ 7 ಮೀಟರ್ವರೆಗೆ ನೀರು ಸಂಗ್ರಹಿಸುವ ಅಗತ್ಯವಿದೆ. ಇದರಿಂದ ಹೆಚ್ಚುವರಿಯಾಗಿ 344 ಎಕರೆ ಭೂಮಿ ಜಲಾವೃತವಾಗಲಿದ್ದು ಇದಕ್ಕಾಗಿ ಭೂ ಸ್ವಾಧೀನಕ್ಕೆ 130 ಕೋಟಿ ರೂ.ಅಗತ್ಯವಿದೆ ಎಂದು ತಿಳಿಸಿದರು.
ಈ ಬಗ್ಗೆ ಸ್ಪಂದಿಸಿದ ಮುಖ್ಯಮಂತ್ರಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ಇದಲ್ಲದೆ ಎಂಆರ್ಪಿಎಲ್ನಲ್ಲಿ ಸ್ಥಾಪಿಸಲಾಗುತ್ತಿರುವ ಉಪ್ಪು ನೀರನ್ನು ಶುದ್ಧೀಕರಿಸುವ ಘಟಕದ ಸಾಧಕ ಬಾಧಕಗಳನ್ನು ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ಸೂಚಿಸಿದರು.
ಸಭೆಯಲ್ಲಿ ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಎ.ಬಿ.ಇಬ್ರಾಹಿಂ, ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಜಯರಾಂ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಂಜುಂ ಪರ್ವೇಜ್. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಸಹೋದರ ಸುರೇಂದ್ರ ಹೆಗ್ಗಡೆ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ