ಯಶಸ್ಸು ಸಾಧಿಸುವ ಬದ್ಧತೆ ಕರಾವಳಿ ಜನರದ್ದು


Team Udayavani, Oct 29, 2019, 3:05 AM IST

yashassu

ಬೆಂಗಳೂರು: ಸಾಹಸಿ ಗುಣ ಹೊಂದಿರುವ ಕರಾವಳಿ ಜನರು ಯಾವುದೇ ಉದ್ಯಮದಲ್ಲಿಯೂ ಯಶಸ್ಸು ಸಾಧಿಸುವ ಕಾರ್ಯಬದ್ಧತೆ ಛಲ ಹೊಂದಿರುತ್ತಾರೆ ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ಬೆಂಗಳೂರು ಬಂಟರ ಸಂಘದ ವತಿಯಿಂದ ನಡೆದ ದೀಪಾವಳಿ ಸಂಭ್ರಮ ಮತ್ತು ಉದ್ಯಮಿ ಕೆ. ಪ್ರಕಾಶ್‌ ಶೆಟ್ಟಿಯವರ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉದ್ಯಮಿ ಪ್ರಕಾಶ ಶೆಟ್ಟಿಯವರ ತಮ್ಮ ಉದ್ಯಮಗಳ ಯಶಸ್ಸು, ಅವರ ಹಾದಿ ಯುವ ಉದ್ಯಮಿಗಳಿಗೆ ಸ್ಫೂರ್ತಿಯಾಗಬೇಕು ಎಂದರು.

ಪ್ರಕಾಶ್‌ ಶೆಟ್ಟಿಯವರು ಕೊಡುಗೆ ಕೇವಲ ತಮ್ಮ ಸಮುದಾಯಕ್ಕೆ ಮಾತ್ರವಲ್ಲದೆ, ಸಮಾಜಕ್ಕೂ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಉಡುಪಿ ಜಿಲ್ಲೆಯನ್ನು ಪ್ರವಾಸಿ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಸರ್ಕಾರದ ಜೊತೆ ಪ್ರಕಾಶ್‌ ಶೆಟ್ಟಿಯವರು ಕೂಡ ಸಾಥ್‌ ನೀಡುತ್ತಿದ್ದಾರೆ. ದೇಶದಲ್ಲಿ ಖ್ಯಾತಿ ಹೊಂದಿರುವ ಅವರ ಉದ್ಯಮ ಜಾಗತಿಕ ಮಟ್ಟದಲ್ಲಿ ಬೆಳೆಯಲಿ ಎಂದು ಹಾರೈಸಿದರು. ಕರಾವಳಿ ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಸರ್ಕಾರ ಸ್ಪಂದಿಸಲಿದೆ. ಇದೀಗ ಕರಾವಳಿಯಲ್ಲಿ ಮಳೆಯಿಂದಾಗಿ ಸಾಕಷ್ಟು ಹಾನಿಯಾಗಿದೆ. ಸರ್ಕಾರ ಎಲ್ಲಾ ರೀತಿಯಲ್ಲೂ ಸಹಾಯ ಮಾಡಲಿದೆ ಎಂದು ಅವರು ಭರವಸೆ ನೀಡಿದರು.

ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಮಾತನಾಡಿ, ಪ್ರಕಾಶ್‌ ಶೆಟ್ಟಿಯವರು ಹೋಟೆಲ್‌ ಉದ್ಯಮವನ್ನು ಅತೀ ಎತ್ತರಕ್ಕೆ ಬೆಳೆಸಿರುವುದರ ಹಿಂದೆ ಅವರ ಬದ್ಧತೆ, ಪರಿಶ್ರಮವಿದೆ. ಸಮುದಾಯ ಮತ್ತು ಸಮಾಜಕ್ಕೆ ಅವರ ಕೊಡುಗೆ ಅನನ್ಯ ಎಂದು ಹೇಳಿದರು. ತುಳು ಭಾಷೆಯಲ್ಲಿಯೇ ಮಾತು ಆರಂಭಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್‌, ಪ್ರಕಾಶ್‌ ಶೆಟ್ಟಿ ಮತ್ತು ಅಂಬರೀಶ್‌ ಅವರ ನಡುವಿನ ಒಡನಾಟ ತುಂಬಾ ವರ್ಷಗಳದ್ದು ಎಂದು ಸ್ಮರಿಸಿದರು. ಪ್ರಕಾಶ್‌ ಶೆಟ್ಟಿಯವರು ಉದ್ಯಮದಲ್ಲಿ ಮತ್ತಷ್ಟು ಸಾಧಿಸಿ ಸಮಾಜಕ್ಕೆ ಕೊಡುಗೆ ನೀಡಲಿ ಎಂದು ಹಾರೈಸಿದರು.

ಬಂಟರ ಸಂಘದಿಂದ ಸನ್ಮಾನ ಹಾಗೂ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಪ್ರಕಾಶ ಶೆಟ್ಟಿ, ಬೆಂಗಳೂರು ಬಂಟರ ಸಂಘಕ್ಕೆ ಅಭಾರಿಯಾಗಿದ್ದೇನೆ. ಸಂಘಕ್ಕೆ, ಸಮಾಜಕ್ಕೆ ಮತ್ತು ಸಮುದಾಯಕ್ಕೆ ನನ್ನ ಕೊಡುಗೆಯನ್ನು ಪರಿಗಣಿಸಿ ಅಭಿನಂದನಾ ಗ್ರಂಥವನ್ನು ಹೊರತಂದಿರುವುದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು. ಅಭಿನಂದನಾ ಗ್ರಂಥವನ್ನು ಆರ್‌.ಎನ್‌.ಎಸ್‌ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆರ್‌ .ಎನ್‌. ಶೆಟ್ಟಿ ಬಿಡುಗಡೆಗೊಳಿಸಿದರು.ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಆರ್‌ .ಉಪೇಂದ್ರ ಶೆಟ್ಟಿ , ಸಂಘದ ಕಾರ್ಯದರ್ಶಿ ಮಧುಕರ್‌ ಶೆಟ್ಟಿ, ಮುರಳೀಧರ ಹೆಗ್ಡೆ, ಯೂನಿಯನ್‌ ಬ್ಯಾಂಕ್‌ ನ ನಿವೃತ್ತ ಎಕ್ಸಿ ಕ್ಯೂಟಿವ್‌ ಡೈರೆಕ್ಟರ್‌ ಕೆ. ರತ್ನಕರ ಹೆಗ್ಡೆ, ಸಂಘದ ಪದಾಧಿಕಾರಿಗಳಿದ್ದರು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.