ಬಡವರಿಗೆ ಉಚಿತ ಅಡುಗೆ ಅನಿಲ ಕೇಂದ್ರ-ರಾಜ್ಯ ತಿಕ್ಕಾಟ


Team Udayavani, Jun 11, 2017, 3:45 AM IST

GAS.jpg

ಬೆಂಗಳೂರು: ಬಿಪಿಎಲ್‌ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಕಲ್ಪಿಸುವ ವಿಚಾರ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಸಂಘರ್ಷಕ್ಕೆ ಕಾರಣವಾಗಿದೆ.

ಕೇಂದ್ರ ಸರ್ಕಾರವು “ಉಜ್ವಲಾ’ದಡಿ ಬಡ ಕುಟುಂಬಗಳನ್ನು ಗುರುತಿಸಿ ಉಚಿತವಾಗಿ ಸಿಲಿಂಡರ್‌ ಮಾತ್ರ ವಿತರಿಸಲು ಯೋಜನೆ ರೂಪಿಸಿದೆ. ಇದೀಗ ರಾಜ್ಯ ಸರ್ಕಾರ ಕೇಂದ್ರದ ಯೋಜನೆಗೆ ಪರ್ಯಾಯವಾಗಿ ಅಡುಗೆ ಅನಿಲ ಸಿಲಿಂಡರ್‌, ಸ್ಟೌವ್‌, ಟ್ಯೂಬ್‌, ರೆಗ್ಯುಲೇಟರ್‌ ಉಚಿತವಾಗಿ ನೀಡಲು ಸಿದ್ಧತೆ ನಡೆಸಿದೆ. ಜತೆಗೆ ಮೊದಲ ಸಿಲಿಂಡರ್‌ಗೆ ರೀಫಿಲ್‌ ಶುಲ್ಕ ಭರಿಸಲು ಚಿಂತನೆ ನಡೆಸಿದೆ.

ಮೊದಲಿಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ “ಉಜ್ವಲಾ’ ರಾಜ್ಯ ಸರ್ಕಾರದ ಸಹಭಾಗಿತ್ವದಡಿ ಜಾರಿಗೊಳಿಸುವ ಯೋಜನೆಯಾಗಿತ್ತು. ಆದರೆ, ಕೆಲವು ಗೊಂದಲದಿಂದಾಗಿ ರಾಜ್ಯ ಸರ್ಕಾರ ಇದೀಗ ಮುಖ್ಯಮಂತ್ರಿ ಅನಿಲ ಭಾಗ್ಯ ಹೆಸರಿನಲ್ಲಿ ಪ್ರತ್ಯೇಕವಾಗಿ ಜಾರಿಗೊಳಿಸಲು ನಿರ್ಧರಿಸಿದೆ.

ಈ ಮಧ್ಯೆ, ಕೇಂದ್ರ ಸರ್ಕಾರವು ರಾಜ್ಯದಲ್ಲಿ “ಪ್ರಧಾನ ಮಂತ್ರಿ ಉಜ್ವಲ ಯೋಜನೆ’ಗೆ ಜೂ.17ರಂದು ಚಾಲನೆ ನೀಡಲು ಸಜ್ಜಾಗಿದೆ. ಅದಕ್ಕೂ ಮೊದಲೇ ರಾಜ್ಯ ಸರ್ಕಾರ “ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಜಾರಿಗೊಳಿಸಲು ಮುಂದಾಗಿದೆ.

ಕೇಂದ್ರ ಸರ್ಕಾರವು 2011 ರ ಸಾಮಾಜಿಕ ಆರ್ಥಿಕ ಮತ್ತು ಜಾತಿ ಜನಗಣತಿ ಆಧಾರದಲ್ಲಿ ಫ‌ಲಾನುಭವಿಗಳ ಆಯ್ಕೆ ಮಾಡುತ್ತಿದೆ. ಆದರೆ, ರಾಜ್ಯ ಸರ್ಕಾರವು ಸೀಮೆಎಣ್ಣೆ  ಬಳಕೆ ಮಾಡುತ್ತಿರುವ ಬಿಪಿಎಲ್‌ ಕುಟುಂಬಗಳನ್ನು ಯೋಜನೆಯಡಿ ಆಯ್ಕೆ ಮಾಡಲು ತೀರ್ಮಾನಿಸಿದೆ.

ಕೇಂದ್ರದ ಯೋಜನೆಯಡಿ ಫ‌ಲಾನುಭವಿಗಳಿಗೆ ಉಚಿತವಾಗಿ ಅಡುಗೆ ಅನಿಲ ಸಿಲಿಂಡರ್‌ (1600 ರೂ.) ಮಾತ್ರ ಸಿಗಲಿದೆ. ಉಳಿದಂತೆ ಸ್ಟೌವ್‌ ಹಾಗೂ ರೀಫಿಲ್‌ ಶುಲ್ಕವನ್ನು ಫ‌ಲಾನುಭವಿ ಭರಿಸಬೇಕು. ಒಂದೊಮ್ಮೆ ಫ‌ಲಾನುಭವಿ ಶುಲ್ಕ ಭರಿಸಲಾಗದಿದ್ದರೆ ತೈಲ ಮಾರಾಟ ಕಂಪನಿಗಳು ಬಡ್ಡಿರಹಿತ ಸಾಲ ನೀಡಿ ಇಎಂಐ (ಮಾಸಿಕ ಕಂತು) ಸೌಲಭ್ಯ ಕಲ್ಪಿಸಲಿವೆ. ಫ‌ಲಾನುಭವಿಗೆ ಬರುವ ಸಬ್ಸಿಡಿ ಮೊತ್ತದಲ್ಲಿ ಈ ಶುಲ್ಕ ಕಡಿತಗೊಳಿಸಲಿದೆ.

ತಾರತಮ್ಯದ ಆರೋಪ
ಯೋಜನೆ ಜಾರಿಗೆ ರಾಜ್ಯ ಸರ್ಕಾರ ಆರಂಭದಲ್ಲಿ ಆಸಕ್ತಿ ತೋರಿತ್ತು. ಕೇಂದ್ರ ಸರ್ಕಾರ ಸಿಲಿಂಡರ್‌ ಉಚಿತವಾಗಿ ನೀಡಿದರೆ ಸ್ಟೌವ್‌, ರೆಗ್ಯುಲೇಟರ್‌, ಪೈಪ್‌ಅನ್ನು ರಾಜ್ಯದ ವತಿಯಿಂದ ವಿತರಿಸಲು ಮುಂದಾಗಿತ್ತು. ಆದರೆ ಇದಕ್ಕೆ ಕೇಂದ್ರದಿಂದ ನಿರೀಕ್ಷಿತ ಸ್ಪಂದನೆ ದೊರೆಯಲಿಲ್ಲ. ಅಲ್ಲದೇ ಯೋಜನೆಯ ಹೆಸರನ್ನು ಬದಲಾಯಿಸದೆ ಕೇಂದ್ರ ಸರ್ಕಾರ ಗೊತ್ತುಪಡಿಸಿದ ಹೆಸರಿನಲ್ಲೇ ಜಾರಿಗೊಳಿಸಬೇಕು ಎಂದು ಸೂಚಿಸಿದ್ದು, ರಾಜ್ಯ ಸರ್ಕಾರದ ಅಸಮಾಧಾನಕ್ಕೆ ಕಾರಣವಾಗಿತ್ತು.

ಇನ್ನೊಂದೆಡೆ ಯೋಜನೆ ಜಾರಿಗೊಳಿಸುವಂತೆ ಹಲವು ಬಾರಿ ಪತ್ರ ಬರೆದರೂ ಕೇಂದ್ರದಿಂದ ಸ್ಪಂದನೆ ಸಿಗಲಿಲ್ಲ ಎಂಬುದು ರಾಜ್ಯ ಸರ್ಕಾರಕ್ಕೆ ಇನ್ನಷ್ಟು ಇರುಸು ಮುರುಸು ಉಂಟು ಮಾಡಿತ್ತು. ರಾಷ್ಟ್ರದಲ್ಲಿ ಶೇ.61ರಷ್ಟು ಕುಟುಂಬಗಳು ಅಡುಗೆ ಅನಿಲ ಸಿಲಿಂಡರ್‌ ಹೊಂದಿದ್ದಾರೆ ಎಂಬ ಮಾಹಿತಿ ಇದ್ದು, ಈ ರಾಷ್ಟ್ರೀಯ ಸರಾಸರಿ ಪ್ರಮಾಣಕ್ಕಿಂತ ಕಡಿಮೆಯಿರುವ ರಾಜ್ಯಗಳಲ್ಲಿ ಯೋಜನೆ ಜಾರಿಗೆ ಆದ್ಯತೆ ನೀಡಲಾಗಿದೆ ಎಂಬುದು ಕೇಂದ್ರ ಸರ್ಕಾರದ ವಾದ. ಆದರೆ ಕರ್ನಾಟಕಕ್ಕಿಂತ ಉತ್ತಮ ಸ್ಥಿತಿಯಲ್ಲಿರುವ ರಾಜ್ಯಗಳಲ್ಲೂ ಯೋಜನೆ ಜಾರಿಗೊಳಿಸಿ ಕೇಂದ್ರ ತಾರತಮ್ಯ ತೋರುತ್ತಿದೆ ಎಂಬುದು ರಾಜ್ಯ ಸರ್ಕಾರದ ಆರೋಪ.

ಕೇಂದ್ರ ಸರ್ಕಾರವು ಸಾಮಾಜಿಕ, ಆರ್ಥಿಕ ಮತ್ತು ಜಾತಿ ಗಣತಿ ಆಧಾರದ ಮೇಲೆ ಸೌಲಭ್ಯ ಕಲ್ಪಿಸಲಿದೆ. ಈವರೆಗೆ 2.98 ಲಕ್ಷ ಕುಟುಂಬಗಳು ಅರ್ಜಿ ಸಲ್ಲಿಸಿದ್ದು, ಇದರಲ್ಲಿ 2.44 ಲಕ್ಷ ಕುಟುಂಬಗಳನ್ನು ಸೌಲಭ್ಯಕ್ಕೆ ಪರಿಗಣಿಸಲಾಗಿದೆ. ರಾಜ್ಯ ಸರ್ಕಾರ ಅನಿಲ ಭಾಗ್ಯದಡಿ ನೀಡುವ ಸೌಲಭ್ಯವೂ ಪರೋಕ್ಷವಾಗಿ ಕೇಂದ್ರದ ಅನುದಾನವೇ ಆಗಿದೆ. ಸೀಮೆಎಣ್ಣೆಗೆ ನೀಡುತ್ತಿದ್ದ ಹಣ ರೂಪದ ಪ್ರೋತ್ಸಾಹ ಧನವನ್ನೇ ಅನಿಲ ಭಾಗ್ಯ ಯೋಜನೆಗೆ ವಿನಿಯೋಗಿಸುವುದಾಗಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರೆದ ಪತ್ರದಲ್ಲಿ ಉಲ್ಲೇಖೀಸಿದೆ ಎನ್ನಲಾಗಿದೆ.

ರಾಜ್ಯದಲ್ಲಿ ಸೀಮೆಎಣ್ಣೆ ಪಡೆಯುವ 35 ಲಕ್ಷ ಬಿಪಿಎಲ್‌ ಕುಟುಂಬಗಳಿದ್ದು, ಇವರಿಗೆ ಅನಿಲ ಭಾಗ್ಯ ಯೋಜನೆ ಜಾರಿಗೊಳಿಸುವುದು ಪ್ರಸಕ್ತ ವರ್ಷದಲ್ಲಿ ಐದು ಲಕ್ಷ ಮಂದಿ ಆಯ್ಕೆ ಮಾಡುವುದು ರಾಜ್ಯ ಸರ್ಕಾರದ ಗುರಿ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗೆ “ಆಧಾರ್‌’ ಕಡ್ಡಾಯವಾಗಿರುವುದರಿಂದ ಪುನರಾವರ್ತನೆ ಇಲ್ಲವೇ ದುರ್ಬಳಕೆಗೆ ಅವಕಾಶವಿಲ್ಲ ಎಂಬುದು ಅಧಿಕಾರಿಗಳ ಅಭಿಪ್ರಾಯ.

ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ ಯಾವ ಸೌಲಭ್ಯ ಕಲ್ಪಿಸಬೇಕೆಂಬ ಬಗ್ಗೆ ಸಚಿವ ಸಂಪುಟದಲ್ಲಿ ಪ್ರಸ್ತಾವ ತರಲಾಗುತ್ತಿದೆ. ಸಚಿವ ಸಂಪುಟದ ನಿರ್ಣಯದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.
– ಹರ್ಷ ಗುಪ್ತ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಾರ್ಯದರ್ಶಿ

ಪ್ರಧಾನಮಂತ್ರಿಗಳ ಮಹತ್ವಾಕಾಂಕ್ಷಿ ಯೋಜನೆಯನ್ನು ಕೇಂದ್ರ ಸಚಿವ ಧಮೇಂದ್ರ ಪ್ರಧಾನ್‌ ಅವರ ಮಾರ್ಗದರ್ಶನದಲ್ಲಿ ದೇಶಾದ್ಯಂತ ಜಾರಿಗೊಳಿಸಲಾಗುತ್ತಿದೆ. ಅದರಂತೆ ಕರ್ನಾಟಕದಲ್ಲಿ ಜೂನ್‌ 17ರಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಯೋಜನೆಯಡಿ ಅರ್ಜಿ ಸಲ್ಲಿಸುವ ಎಲ್ಲ ಅರ್ಹ ಬಡ ಕುಟುಂಬಗಳಿಗೆ ಸೌಲಭ್ಯ ಸಿಗಲಿದೆ.
– ಕೆ.ಎಂ.ಮಹೇಶ್‌, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆ ನಿರ್ದೇಶಕ

– ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.