ಪಾಕ್‌ಗೆ ತಲೆಬಾಗಲೂ ಕಾಂಗ್ರೆಸ್‌ ಹಿಂಜರಿಯದು


Team Udayavani, Feb 11, 2019, 6:16 AM IST

pak.jpg

ಬೆಂಗಳೂರು: ಕಾಂಗ್ರೆಸ್‌ ನಾಯಕರು ಅಧಿಕಾರದ ಆಸೆಗಾಗಿ “ಏನಾದರೂ ಮಾಡಿ ಮೋದಿಯನ್ನು ತೊಲಗಿಸು’ವಂತೆ (ಕುಛ್ ಭಿ ಕರೋ ಮೋದಿ ಕೊ ಹಠಾವೊ) ಬದ್ಧವೈರಿ ಪಾಕಿಸ್ತಾನದ ಮುಂದೆ ಗೋಗರೆಯಲಿಕ್ಕೂ ಹಿಂಜರಿಯುವುದಿಲ್ಲ ಎಂದು ಕೇಂದ್ರ ಜವಳಿ ಖಾತೆ ಸಚಿವೆ ಸ್ಮತಿ ಇರಾನಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಭಾರತೀಯ ವಿದ್ಯಾಭವನದಲ್ಲಿ ಭಾನುವಾರ ಬಿಜೆಪಿ ಬೆಂಗಳೂರು ಘಟಕ ಹಮ್ಮಿಕೊಂಡಿದ್ದ “ಪ್ರಬುದ್ಧರ ಗೋಷ್ಠಿ’ಯಲ್ಲಿ ಮಾತನಾಡಿದ ಅವರು, “ಅಧಿಕಾರದಿಂದ ವಂಚಿತರಾಗಿದ್ದಕ್ಕೆ ಕಾಂಗ್ರೆಸ್‌ ನಾಯಕರು ಲಂಡನ್‌ನಲ್ಲಿ ಸುದ್ದಿಗೋಷ್ಠಿ ಕರೆದು, ದೇಶದ ಚುನಾವಣಾ ಆಯೋಗದ ವಿರುದ್ಧ ದೂರಿದರು. ಈ ಮೂಲಕ ಜಾಗತಿಕ ಮಟ್ಟದಲ್ಲಿ ದೇಶದ ಪ್ರತಿಷ್ಠೆ ಹರಾಜು ಹಾಕಿದರು. ಸೇನಾ ಮುಖ್ಯಸ್ಥರನ್ನು ಗೂಂಡಾ ಎಂದು ಜರಿದರು.

ಈಗ ಎಷ್ಟರಮಟ್ಟಿಗೆ ಹತಾಶರಾಗಿದ್ದಾರೆಂದರೆ, ಪಾಕಿಸ್ತಾನಕ್ಕೆ ತೆರಳಿ ಏನಾದರೂ ಮಾಡಿ ಮೋದಿಯನ್ನು ತೊಲಗಿಸಿ ಎಂದು ಮನವಿ ಮಾಡಲಿಕ್ಕೂ ಹಿಂಜರಿಯುವುದಿಲ್ಲ’ ಎಂದು ಆರೋಪಿಸಿದರು. ತನ್ನ ಗುರಿ ಸಾಧನೆಗಾಗಿ ದೇಶದ ಯಾವುದೇ ಸಂಸ್ಥೆಯನ್ನು ನಾಶಗೊಳಿಸಲು ಕಾಂಗ್ರೆಸ್‌ ತಯಾರಾಗಿದೆ. ಈ ಮಧ್ಯೆ 2019ರ ಲೋಕಸಭಾ ಚುನಾವಣೆಗೆ “ಮಹಾ ಕಲಬೆರಕೆ’ ಮತ್ತೆ ಒಟ್ಟಾಗಿ ಜನರ ಬಳಿ ಬರಲು ಸಜ್ಜಾಗಿದೆ.

ಅದರ ಮುಖ್ಯಗುರಿ ಜನರನ್ನು ನ್ಯಾಯವಂಚಿತರನ್ನಾಗಿ ಮಾಡುವುದು ಹಾಗೂ ಅದರ ಕಣ್ಣು ನಿಮ್ಮ ಜೇಬಿನ ಮೇಲೆಯೇ ಇರುತ್ತದೆ. ಈ ಮಹಾ ಕಲಬೆರಕೆ ಒಂದೆಡೆಯಾದರೆ, 55 ವರ್ಷಗಳಲ್ಲಿ ಕಾಂಗ್ರೆಸ್‌ ಮಾಡಲಾಗದ ಸಾಧನೆಯನ್ನು ಕೇವಲ 55 ತಿಂಗಳಲ್ಲಿ ಮಾಡಿತೋರಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತೂಂದೆಡೆ ಇದ್ದಾರೆ. ಆಯ್ಕೆ ನಿಮ್ಮ ಮುಂದಿದೆ ಎಂದು ಹೇಳಿದರು. 

2014ರಲ್ಲಿ ಪ್ರಧಾನಿಯಾದ ಬಳಿಕ ನರೇಂದ್ರ ಮೋದಿ ಅವರು, ಸಂಸತ್‌ ಎಂಬ ದೇವಾಲಯಕ್ಕೆ ಸಾಷ್ಟಾಂಗ ನಮನ ಸಲ್ಲಿಸಿ ಒಳಪ್ರವೇಶಿಸಿದರು. ದೇವಸ್ಥಾನದ ಒಳಗೆ ಹೋದ ನಂತರ ಮೊದಲು ಮಾಡಬೇಕಾದ ಕೆಲಸ ಸ್ವತ್ಛಗೊಳಿಸುವುದು. ನಿಮ್ಮ ಪ್ರಧಾನ ಸೇವಕ (ಪ್ರಧಾನಿ) ಮಾಡಿದ್ದೂ ಇದನ್ನೇ ಎಂದು ವಿಶ್ಲೇಷಿಸಿದ ಸ್ಮತಿ ಇರಾನಿ, ಗಾಂಧೀಜಿಯವರ ಕನಸು ಸ್ವತ್ಛ ಭಾರತಕ್ಕೆ ಚಾಲನೆ ನೀಡಿದರು.

ಇದರ ಪರಿಣಾಮ ಬಯಲು ಬಹಿರ್ದೆಸೆ ವೇಳೆ ಹೆಣ್ಣುಮಕ್ಕಳ ಮೇಲೆ ನಡೆಯುತ್ತಿದ್ದ ದೌರ್ಜನ್ಯ ಕಡಿಮೆಯಾಯಿತು. ಮೂರು ಲಕ್ಷ ಜನ ಈ ಬಯಲು ಬಹಿರ್ದೆಸೆಯಿಂದ ಹಲವು ರೋಗಗಳಿಗೆ ತುತ್ತಾಗುವುದು ತಪ್ಪಿತು. ಕೇವಲ 55 ತಿಂಗಳಲ್ಲಿ 13 ಕೋಟಿ ಜನರಿಗೆ ಎಲ್‌ಪಿಜಿ ಸಂಪರ್ಕ ನೀಡಲಾಯಿತು. ಈ ಪೈಕಿ ಪ್ರಧಾನಿ ಕರೆಗೆ ಓಗೊಟ್ಟು ಒಂದು ಕೋಟಿ ಗ್ರಾಹಕರು ತಮ್ಮ ಸಬ್ಸಿಡಿ ಹಿಂತಿರುಗಿಸಿದ್ದಾರೆ.

ಇಂತಹ ಸಣ್ಣ-ಸಣ್ಣ ಬದಲಾವಣೆಗಳು ದೊಡ್ಡವರ ಗಮನಕ್ಕೆ ಬರುವುದೇ ಇಲ್ಲ. ಯಾಕೆಂದರೆ, ಅವರಾರಿಗೂ ಈ ಸಮಸ್ಯೆಗಳ ಬಗ್ಗೆ ಅರಿವೇ ಇಲ್ಲ ಎಂದು ಟೀಕಿಸಿದರು. ಇದಕ್ಕೂ ಮುನ್ನ ಸಂಸದ ಪಿ.ಸಿ.ಮೋಹನ್‌ ಮಾತನಾಡಿ, ಅತಿ ಹೆಚ್ಚು ಕಾಲ ದೇಶವನ್ನು ಆಳಿದ ಕಾಂಗ್ರೆಸ್‌ ಹಗರಣಗಳನ್ನು ಹೊರತುಪಡಿಸಿ ಬೇರೇನೂ ಮಾಡಲಿಲ್ಲ. ರಾಜ್ಯ ಸರ್ಕಾರವಂತೂ ಸಂಪೂರ್ಣ ಮಲಗಿಬಿಟ್ಟಿದೆ.

ಉಪನಗರ ರೈಲು ಯೋಜನೆಗೆ ಕೇಂದ್ರ ಸರ್ಕಾರ ಮುಂದಾಗಿದ್ದರೂ, ರಾಜ್ಯ ಸರ್ಕಾರ ಹತ್ತಾರು ಷರತ್ತುಗಳ ಮೂಲಕ ಅದಕ್ಕೆ ಕೊಕ್ಕೆಹಾಕಿದೆ. ಷರತ್ತುಗಳನ್ನು ಸಡಿಲಗೊಳಿಸದಿದ್ದರೆ, ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಅಶ್ವತ್ಥ್ ನಾರಾಯಣ, ಮಾಧ್ಯಮ ಸಹ ಸಂಚಾಲಕ ಪ್ರಕಾಶ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.