ಸಮೂಹ ಸಾರಿಗೆಗೆ ಕನೆಕ್ಟಿವಿಟಿ ಸವಾಲು


Team Udayavani, Mar 12, 2020, 3:08 AM IST

samooha-sari

ಬೆಂಗಳೂರು: ನಗರದಲ್ಲಿ ಮೆಟ್ರೋ ಸೇರಿದಂತೆ ಸಮೂಹ ಸಾರಿಗೆಯನ್ನು ಬಳಸುವುದಕ್ಕೂ ಶೇ.18ರಷ್ಟು ಜನ ತಮ್ಮ ವೈಯಕ್ತಿಕ ವಾಹನವನ್ನೇ ಅವಲಂಬಿಸಿ ರುವ ಅಂಶ ಉಬರ್‌ ಮತ್ತು ಬಿ.ಪ್ಯಾಕ್‌ ಸಂಸ್ಥೆ ಸುಸ್ಥಿರ ಸಂಚಾರಕ್ಕಾಗಿ ನಡೆಸಿದ ಸಮೀಕ್ಷೆಯಲ್ಲಿ ಬೆಳಕಿಗೆ ಬಂದಿದೆ ಎಂದು ಬಿ.ಪ್ಯಾಕ್‌ನ ವ್ಯವಸ್ಥಾಪಕ ಟ್ರಸ್ಟಿ ರೇವತಿ ಅಶೋಕ್‌ ತಿಳಿಸಿದರು.

ಬಿ.ಪ್ಯಾಕ್‌ ಮತ್ತು ಉಬರ್‌ ಸಂಸ್ಥೆಯು ನಗರ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಆಯೋಜಿಸಿದ್ದ “ಸುಸ್ಥಿರ ಬೆಂಗಳೂರು’ ವರದಿ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಮಾತನಾ ಡಿದ ಅವರು, ಲಾಸ್ಟ್‌ ಮೈಲ್‌ ಕನೆಕ್ಟಿವಿಟಿ ಸಮಸ್ಯೆಯಿಂದ ಜನ ಸಮೂಹ ಸಾರಿಗೆಗೆ ಸಂಪರ್ಕ ಸಾಧಿಸುವುದಕ್ಕೆ ತಮ್ಮ ವೈಯಕ್ತಿಕ ವಾಹನ ಬಳಸಬೇಕಾದ ಪರಿಸ್ಥಿತಿ ಇದೆ ಎಂದರು.

ಬಿ.ಪ್ಯಾಕ್‌ ಮತ್ತು ಉಬರ್‌ ಸಂಸ್ಥೆ ಸಹಯೋಗದಲ್ಲಿ ಬೆಂಗಳೂರಿನ ಸುಸ್ಥಿರ ಸಂಚಾರದ ಬಗ್ಗೆ ಕಳೆದ 9 ತಿಂಗಳಲ್ಲಿ ನಡೆಸಿದ ಸಮೀಕ್ಷೆ ನಡೆಸಿದ್ದು, ಇದರಲ್ಲಿ ನಗರದ ಹಲವು ಪ್ರದೇಶದಲ್ಲಿ ಲಾಸ್ಟ್‌ ಮೈಲ್‌ ಕನೆಕ್ಟಿವಿಟಿಯಲ್ಲಿ ಲೋಪವಿರು ವುದು ಕಂಡು ಬಂದಿದೆ.

ಅಲ್ಲದೆ, ನಗರದ ಸಂಚಾರ ದಟ್ಟಣೆ ಸುಧಾರಣೆಗೆ ಹಾಗೂ ಲಾಸ್ಟ್‌ ಮೇಲ್‌ ಕನೆಕ್ಟಿವಿಟಿ ಸುಧಾರಿಸುವಲ್ಲಿ ಸಾರ್ವ ಜನಿಕ-ಖಾಸಗಿ ಸಹಭಾಗಿತ್ವ ಅತ್ಯಂತ ಮುಖ್ಯ ಪಾತ್ರ ವಹಿಸಲಿದೆ ಎಂದು ಅಭಿಪ್ರಾಯಪಟ್ಟರು. ಕಳೆದ 9ತಿಂಗಳ ಕಾಲಾವಧಿಯಲ್ಲಿ ಸಾರ್ವಜನಿಕರು, ಜನಪ್ರತಿನಿಧಿಗಳು, ತಜ್ಞರ ಅಭಿಪ್ರಾಯ ಕೂಡೀಕರಿಸಿ ವರದಿ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಎಲೆಕ್ಟ್ರಾನಿಕ್‌ ವಾಹನ ಬಳಕೆ ಉತ್ತೇಜನ ನೀಡಬೇಕು: ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಎಲೆಕ್ಟ್ರಾನಿಕ್‌ ವಾಹನ ಬಳಕೆಗೆ ಉತ್ತೇಜನ ನೀಡುವಲ್ಲಿ ನಾವು ಹಿಂದುಳಿದಿದ್ದೇವೆ ಎಂದು ಬಯೋಕಾನ್‌ ಸಂಸ್ಥೆಯ ಮುಖ್ಯಸ್ಥೆ ಕಿರಣ್‌ ಮಜೂಂದಾರ್‌ಶಾ ಅಭಿಪ್ರಾಯಪಟ್ಟರು. ಇನ್ನು ಎಲೆಕ್ಟ್ರಾನಿಕ್‌ ವಾಹನಗಳ ಬಳಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಎಲೆಕ್ಟ್ರಾನಿಕ್‌ ವೆಹಿಕಲ್‌ ಚಾಜಿಂಗ್‌ ಸೆಲ್‌ಗ‌ಳ ಮತ್ತು ಮೂಲಭೂತ ಸೌಕರ್ಯ ಗಳನ್ನೂ ಸರ್ಕಾರ ಅಭಿವೃದ್ಧಿಪಡಿಸಬೇಕಿದೆ ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರವು ಐಟಿ-ಬಿಟಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ಕಾಯಿದೆಗಳನ್ನು ರೂಪಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ. ಆದರೆ,ಸಾರಿಗೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅನುಷ್ಠಾನ ಮಾಡ ಲಾಗಿರುವ ಕಾಯ್ದೆಗಳು ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ ಎಂದರು. ಲಾಸ್ಟ್‌ಮೇಲ್‌ ಕನೆಕ್ಟಿವಿಟಿ ಸಮಸ್ಯೆ ತಪ್ಪಿಸುವ ನಿಟ್ಟಿನಲ್ಲಿ ಬೆಂಗಳೂರು ರೂಪಿಸಿಕೊಂಡಿರುವ ಮೆಟ್ರೋ ಸೇರಿದಂತೆ ವಿವಿಧ ಯೋಜನೆಗಳನ್ನು ಕಾಲಮಿತಿಯಲ್ಲಿ ಮುಗಿಸುವುದು ಮುಖ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ರಾವ್‌, ಬಿಎಂಟಿಸಿ ಸಂಚಾರ ವಿಭಾಗ ಅಧಿಕಾರಿ ರಾಜೇಶ್‌, ಭಾರತ ಮತ್ತು ದಕ್ಷಿಣ ಏಷ್ಯಾದ ಹೆಡ್‌ ಆಫ್ ಸಿಟೀಸ್‌ನ ಉಬರ್‌ ಸಂಸ್ಥೆಯ ಮುಖ್ಯಸ್ಥೆ ಪ್ರಭ್‌ಜೀತ್‌ಸಿಂಗ್‌ ಮತ್ತಿ ತರರು ಹಾಜರಿದ್ದರು.

ಸಲಹೆ ಮತ್ತು ಸೂಚನೆಗಳು
-ಉಬರ್‌, ಬೆಂಗಳೂರು ಪೊಲಿಟಿಕಲ್‌ ಆಕ್ಷನ್‌ ಕಮಿಟಿ(ಬಿ.ಪ್ಯಾಕ್‌) ಸಹಯೋಗದಲ್ಲಿ ಸಂಶೋಧನಾ ವರದಿ.

-ಸಮೂಹ ಸಾರಿಗೆ ಬಳಸುವಂತೆ ಉತ್ತೇಜನ ನೀಡಲು ಶೇರಿಂಗ್‌ ಸಂಚಾರಕ್ಕೆ ಆದ್ಯತೆ.

-ಕಾನೂನು ಬದಲಾವಣೆ ಅಥವಾ ತಿದ್ದುಪಡಿ ಮಾಡುವುದು ಅವಶ್ಯ.

-ಖಾಸಗಿ ಸಂಸ್ಥೆಗಳಿಗೆ ಶೆಟಲ್‌ ಸೇವೆ. ಬೈಕ್‌ ಮತ್ತು ಆಟೋ ಶೇರಿಂಗ್‌ ಅಲ್ಲದೆ ಕಾರ್‌ಪೂಲಿಂಗ್‌ ಸೇವೆಗಳು ಲಭ್ಯ.

-ಎಲೆಕ್ಟ್ರಾನಿಕ್‌ ವಾಹನ ಮತ್ತು ಬ್ಯಾಟರಿಗಳನ್ನು ಪ್ರತ್ಯೇಕ ಘಟಕಗಳ ಸ್ಥಾಪನೆ.

-ಶೇರಿಂಗ್‌ ವಾಹನ ಸೇವೆ ಪ್ರಾರಂಭಿಸುವವರ ಕಾನೂನು ಸಮಸ್ಯೆಗೆ ಪರಿಹಾರ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.