ಬೈಕ್ ಲಾರಿ ಡಿಕ್ಕಿಯಾಗಿ ದಂಪತಿ ಸಾವು
Team Udayavani, Apr 20, 2019, 3:00 AM IST
ಬೆಂಗಳೂರು: ಹಿಂದಿನಿಂದ ವೇಗವಾಗಿ ಬಂದ ಲಾರಿ, ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪ್ಟ ಘಟನೆ ಹೊಸೂರು ರಸ್ತೆಯಲ್ಲಿ ನಡೆದಿದೆ.
ಆರ್.ಟಿನಗರ ಸಿಂಬರಸನ್ (29), ಪುಷ್ಪಾ (24) ಮೃತರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಎಲೆಕ್ಟ್ರಾನಿಕ್ ಸಂಚಾರ ಠಾಣೆ ಪೊಲೀಸರು, ಲಾರಿ ಚಾಲಕನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ತಮಿಳುನಾಡಿನ ಧರ್ಮಪುರಿಯ ಸಿಂಬರಸನ್ ದಂಪತಿ, ಆರ್.ಟಿ.ನಗರ ಸಮೀಪದ ಭುವನೇಶ್ವರಿ ನಗರದಲ್ಲಿ ವಾಸವಿದ್ದರು. ಕೆಲ ದಿನಗಳ ಹಿಂದೆ ಧರ್ಮಪುರಿಗೆ ಬೈಕ್ನಲ್ಲಿ ತೆರಳಿದ್ದು ಗುರುವಾರ ರಾತ್ರಿ ವಾಪಾಸ್ ಬರುವಾಗ,
8.40ರ ಸುಮಾರಿಗೆ ಹೊಸೂರು ರಸ್ತೆಯ ವೀರಸಂದ್ರ ಗೇಟ್ ಬಳಿ ಹಿಂಭಾಗದಿಂದ ಬಂದ ಲಾರಿ, ಬೈಕ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ದಂಪತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ