ದಂಪತಿ ಡೆತ್ನೋಟಲ್ಲಿ ಕಾರ್ಪೊರೇಟರ್ ಹೆಸರು
Team Udayavani, Aug 23, 2017, 12:10 PM IST
ಬೆಂಗಳೂರು: ಹೆಮ್ಮಿಗೆಪುರ ವಾರ್ಡ್ನ ಪಾಲಿಕೆ ಸದಸ್ಯ ಆರ್ಯ ಶ್ರೀನಿವಾಸ್ ಸೇರಿದಂತೆ ಕೆಲವರು ಸಾಲದ ವಿಚಾರವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾವಳ್ಳಿಯಲ್ಲಿ ನಡೆದಿದೆ.
ಮಾವಳ್ಳಿ ನಿವಾಸಿ ನಂಜುಂಡಸ್ವಾಮಿ (47) ಮತ್ತು ಇವರ ಪತ್ನಿ ಪುಷ್ಪಲತಾ (45) ಆತ್ಮಹತ್ಯೆ ಮಾಡಿಕೊಂಡವರು. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ದಂಪತಿ ಒಂದೇ ಸೀರೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದಕ್ಕೂ ಮೊದಲು ಡೆತ್ನೋಟ್ ಬರೆದಿಟ್ಟಿರುವ ದಂಪತಿ, ನಮ್ಮ ಸಾವಿಗೆ ಪಾಲಿಕೆ ಸದಸ್ಯ ಆರ್ಯ ಶ್ರೀನಿವಾಸ್, ಕೆ.ಜಿ ಕೃಷ್ಣ , ದೇವೇಗೌಡ, ತೇಜಸ್ವಿನಿ ಗೌಡ ಸೇರಿದಂತೆ ಇತರರು ಕಾರಣ ಎಂದು ಆರೋಪಿಸಿದ್ದು, ಸಾಲದ ವಿಚಾರವಾಗಿ ಇವರು ನಿತ್ಯ ಕಿರುಕುಳ ನೀಡುತ್ತಿದ್ದರು.ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಡೆತ್ನೋಟ್ನಲ್ಲಿ ಆರೋಪಿಸಿರುವುದಾಗಿ ಕಲಾಸಿಪಾಳ್ಯ ಠಾಣೆ ಪೊಲೀಸರು ತಿಳಿಸಿದ್ದಾರೆ.
ಕಲಾಸಿಪಾಳ್ಯದಲ್ಲಿ ಮಿಲಿಟರಿ ಹೊಟೇಲ್ ನಡೆಸುತ್ತಿದ್ದ ನಂಜುಂಡಸ್ವಾಮಿ ದಂಪತಿಗೆ ಪುತ್ರ ಚಂದನ್ ಹಾಗೂ ಒಬ್ಬ ಮಗಳಿದ್ದಾಳೆ. ಚಂದನ್ ಕೂಡಾ ವ್ಯವಹಾರ ಹಾಗೂ ವೈಯಕ್ತಿಕ ಕಾರಣಗಳಿಗಾಗಿ ಸಾಲ ಮಾಡಿಕೊಂಡಿದ್ದಾರೆ. ಆದರೆ, ಎಷ್ಟು ಹಣ ಪಡೆದಿದ್ದಾರೆ. ಯಾವಾಗ ಪಡೆದಿದ್ದಾರೆ ಎಂಬುದು ಗೊತ್ತಿಲ್ಲ. ತನಿಖೆ ನಡೆಸಿದ ಬಳಿಕವಷ್ಟೇ ಎಲ್ಲವೂ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಡೆತ್ ನೋಟ್ನಲ್ಲಿ ನನ್ನ ಹೇಸರೇಕೆ ಬರೆದರೋ ಗೊತ್ತಿಲ್ಲ
ಘಟನೆ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಪಾಲಿಕೆ ಸದಸ್ಯ ಆರ್ಯ ಶ್ರೀನಿವಾಸ್, ಕಳೆದ 18 ವರ್ಷಗಳಿಂದ ನಂಜುಂಡಸ್ವಾಮಿ ಕುಟುಂಬ ಪರಿಚಯವಿದೆ. ಭೂಮಿ ಖರೀದಿ, ಹಣಕಾಸಿನ ವಿಚಾರವಾಗಿ ನಮ್ಮಿಬ್ಬರ ನಡುವೆ ವ್ಯವಹಾರ ಇತ್ತು. ಆದರೆ, ಕಳೆದ ಎರಡುವರೆ ವರ್ಷಗಳಿಂದ ಎಲ್ಲ ರೀತಿಯ ವ್ಯವಹಾರವನ್ನು ನಿಲ್ಲಿಸಿದ್ದೇವೆ.
ಹೀಗಾಗಿ, ಈ ಅವಧಿಯಲ್ಲಿ ಯಾವುದೇ ರೀತಿಯ ಭೂಮಿ ಹಾಗೂ ಹಣಕಾಸಿನ ವ್ಯವಹಾರ ನಡೆಸಿಲ್ಲ. ಇತ್ತೀಚೆಗೆ ನಂಜುಂಡಸ್ವಾಮಿ ಮನೆಗೆ ಬಂದಿದ್ದು, ಹಣ ಕೇಳಿದರು. ಆದರೆ, ನನ್ನ ಬಳಿ ಇಲ್ಲ. ಮುಂದೆ ನೋಡೋಣ ಎಂದು ಕಳುಹಿಸಿದ್ದೆ. ಅಲ್ಲದೇ ಅವರಿಗೆ ನಾನು ಯಾವುದೇ ಹಣ ಕೊಟ್ಟಿಲ್ಲ. ಡೆತ್ನೋಟ್ನಲ್ಲಿ ನಮ್ಮ ಹೆಸರು ಏಕೆ ಬರೆದಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ