ವಿವರ ಸಲ್ಲಿಸಲುಹೈಕೋರ್ಟ್ ಸೂಚನೆ
Team Udayavani, Sep 6, 2018, 11:01 AM IST
ಬೆಂಗಳೂರು: ಸರ್ಕಾರಿ ಕಾಮಗಾರಿಗಳಲ್ಲಿ ಎಸ್ಸಿ, ಎಸ್ಟಿ ವರ್ಗದ ಗುತ್ತಿಗೆದಾರರಿಗೆ ಮೀಸಲಾತಿ ನೀಡಿರುವ ಬಗ್ಗೆ ವಿವರಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಬುಧವಾರ ಹೈಕೋರ್ಟ್ ಸೂಚನೆ ನೀಡಿತು. ಎಚ್.ಎಂ. ವಿಶ್ವನಾಥ್ ಎಂಬುವರು ಸಲ್ಲಿಸಿದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಬಿ.ವಿ. ನಾಗರತ್ನ ಅವರಿದ್ದ ಏಕಸದಸ್ಯಪೀಠ, ರಾಜ್ಯ ಸರ್ಕಾರಕ್ಕೆ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಬುಧವಾರದ ವಿಚಾರಣೆ ವೇಳೆ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, ಸರ್ಕಾರದ ವಿಧಾನಬಾಹಿರ. ಕಾಮಗಾರಿಗಳ ಗುತ್ತಿಗೆ ನೀಡುವಾಗ ಅರ್ಹತೆ ಮತ್ತು ಕ್ಷಮತೆ ಮಾನದಂಡವಾಗಬೇಕೇ ಹೊರತು ಜಾತಿಯಲ್ಲ ಎಂದು ವಾದಿಸಿದರು. ಇದಕ್ಕೆ ಆಕ್ಷೇಪಿಸಿದ ಹೆಚ್ಚುವರಿ ಅಡ್ವೋಕೇಟ್ ಜನರಲ್, ಸರ್ಕಾರವು ಸಂವಿಧಾನಬದ್ಧವಾಗಿಯೇ ಈ ತೀರ್ಮಾನ ತೆಗೆದುಕೊಂಡಿದೆ ಎಂದರು. ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ ಸರ್ಕಾರಿ ಕಾಮಗಾರಿಗಳಲ್ಲಿ ಎಸ್ಸಿ, ಎಸ್ಟಿ ವರ್ಗಗಳಿಗೆ ಮೀಸಲಾತಿ ಕಲ್ಪಿಸಿರುವ ಬಗ್ಗೆ ವಿವರಗಳನ್ನು ಸಲ್ಲಿಸುವಂತೆ ಸೂಚಿಸಿ, ವಿಚಾರಣೆ ಮುಂದೂಡಿತು.
ಸರ್ಕಾರಿ ಕಾಮಗಾರಿಗಳಲ್ಲಿ 50 ಲಕ್ಷ ರೂ. ಮೊತ್ತದ ಕಾಮಗಾರಿಗಳಿಗೆ ಟೆಂಡರ್ ಕರೆಯದೇ ಎಸ್ಸಿ, ಎಸ್ಟಿ ವರ್ಗಗಳಿಗೆ ಶೇ.24ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಿ 2017ರ ಜುಲೈ ತಿಂಗಳಲ್ಲಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ