ಯಾರ ಓಲೈಕೆಗೂ ಮುಕುಟ ಮಣಿ ಕವನ ರಚಿಸಿಲ್ಲ


Team Udayavani, Apr 17, 2018, 12:04 PM IST

yaara-olike.jpg

ಬೆಂಗಳೂರು: “ಚುನಾವಣೆಯಲ್ಲಿ ಎಂತಹ ಆಯ್ಕೆ ನಮ್ಮದಾಗಬೇಕು ಎಂಬ ಕುರಿತು ಜಾಗೃತಿ ಮೂಡಿಸುವ ಮನಸ್ಥಿತಿಯಲ್ಲಿ ನನ್ನ ಮುಕುಟ ಮಣಿ ಕವನ ಬರೆದಿದ್ದೇನೆಯೇ ಹೊರತು ಯಾವುದೇ ಪಕ್ಷ ಅಥವಾ ವ್ಯಕ್ತಿಯನ್ನು ಓಲೈಕೆ ಮಾಡುವ ಉದ್ದೇಶ ನನಗಿಲ್ಲ,’ ಎಂದು ಪದ್ಮಶ್ರೀ ಪುರಸ್ಕೃತ ಕವಿ ಡಾ.ದೊಡ್ಡರಂಗೇಗೌಡ ಸ್ಪಷ್ಟಪಡಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್‌ ಸಭಾಂಗಣದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಕನ್ನಡ ಕ್ರಿಯಾ ಸಮಿತಿ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಆವರು, “ಮುಕುಟ ಮಣಿ ಕವನದ ಕುರಿತು ವಿರೋಧ ವ್ಯಕ್ತವಾಗುತ್ತಿದೆ. ಪ್ರಶಸ್ತಿ ಪಡೆಯುವ ಉದ್ದೇಶದಿಂದ ಕವನ ಬರೆದಿದ್ದೇನೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ನಾನು ಆ ಕವನವನ್ನು ಈ ಹಿಂದೆಯೇ ಬರೆದಿದ್ದು, ಕೆಲವರು  ತಪ್ಪಾಗಿ ಭಾವಿಸಿದ್ದಾರೆ,’ ಎಂದು ಬೇಸರ ವ್ಯಕ್ತ ಪಡಿಸಿದರು.

ಈ ಹಿಂದೆ ವಿಧಾನ ಪರಿಷತ್‌ ಸದಸ್ಯನಾಗಿದ್ದಾಗಲೂ ವಿರೋಧ ಪಕ್ಷದವರ ಜತೆ ಸೇರಿ ಆಡಳಿತ ಪಕ್ಷದ ತಪ್ಪುಗಳನ್ನು ಖಂಡಿಸಿದ್ದೇನೆ. ಬಳ್ಳಾರಿ ಗಣಿ ಧಣಿಗಳ ವಿರೋಧಿಸಿ ಕವಿತೆ ಬರೆದಿದ್ದೇನೆ. ಕವಿಗಳು ಸಮಾಜದ ಸಮನ್ವಯಕಾರಾಗಿದ್ದು, ಆವರಿಗೆ ಸಮಾಜವನ್ನು ಜಾಗೃತಗೊಳಿಸಿ ಸರಿ ದಾರಿಯಲ್ಲಿ ಕೊಂಡೊಯ್ಯುವ ಜವಬ್ದಾರಿ ಇದೆ. ಆದರಂತೆ ನಾನು ಕೂಡ ನನ್ನ ಕವನಗಳಲ್ಲಿ ಸಮಾಜದ ಸರಿ, ತಪ್ಪುಗಳನ್ನು ತೆರೆದಿಡುತ್ತಿದ್ದೇನೆ ಎಂದು ಹೇಳಿದರು.

ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ವೆಂಕಟೇಶ್‌ ಮಾತನಾಡಿ, ಕೇಂದ್ರ ಸರ್ಕಾರವು ಈ ಬಾರಿ ಅತ್ಯಂತ ಪಾರದರ್ಶಕವಾಗಿ ಹಾಗೂ ಯಾವುದೇ ಶಿಫಾರಸುಗಳನ್ನು ಪರಿಗಣಿಸದೆ ಸ್ವತಂತ್ರವಾಗಿ ಮಾಹಿತಿ ಪಡೆದು ಪದ್ಮ ಪ್ರಶಸ್ತಿಗಳಿಗೆ ಆಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ದೊಡ್ಡರಂಗೇಗೌಡ ಅವರು ಎಲ್ಲರನ್ನೂ, ಎಲ್ಲವನ್ನೂ ಶುದ್ಧ ಭಾವದಿಂದ ನೋಡುವ ವ್ಯಕ್ತಿಯಾಗಿದ್ದು, ಅನೇಕರನ್ನು ಕೈಹಿಡಿದು ಬೆಳೆಸಿದ್ದಾರೆ. ಸುಖ ದುಃಖಗಳಿಗೆ ಹಿಗ್ಗದೇ ಕುಗ್ಗದೇ ಸಮನಾಂತರ ಜೀವನ ಸಾಗಿಸಿಕೊಂಡು ಬಂದವರು ಎಂದು ಹೇಳಿದರು.

ಹಿರಿಯ ಕವಿ ಪ್ರೊ.ಎಲ್‌.ಎನ್‌. ಮುಕುಂದರಾಜ್‌ ಮಾತನಾಡಿ, ಶ್ರಮ ಸಂಸ್ಕೃತಿ ಕಾವ್ಯದ ಬೇರಾಗಿದೆ. ಶ್ರಮದ ಹಿನ್ನೆಲೆಯಿಂದ ಬಂದ ದೊಡ್ಡರಂಗೇಗೌಡರು 200 ಚಿತ್ರಗಳಿಗೆ 500ಕ್ಕೂ ಹೆಚ್ಚು ಹಾಡುಗಳನ್ನು ರಚಿಸಿದ್ದು, ತಮ್ಮ ಕವನಗಳ ಮೂಲಕ ಪ್ರೇಮವನ್ನು ಉಣಬಡಿಸಿದ ಮಹನೀಯ. ಇಂಥವರಿಗೆ ಪದ್ಮಶ್ರೀ ಪ್ರಶಸ್ತಿ ದೊರೆತಿರುವುದು ಕನ್ನಡಿಗರಿಗೆ ಸಂದ ಗೌರವವೇ ಸರಿ ಎಂದರು. ಹಿರಿಯ ಸಾಹಿತಿ ಡಾ.ಮಂಗಳಾ ಪ್ರಿಯದರ್ಶಿನಿ, ಕೇಂದ್ರ ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.