ಗಡುವು ಮುಗಿದರೂ ರಾಜೀನಾಮೆ ಇಲ್ಲ
Team Udayavani, Feb 4, 2017, 3:45 AM IST
ಬೆಂಗಳೂರು: ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ನೀಡಿದ್ದ ನಿರ್ದೇಶನವನ್ನು ಕೆಎಂಎಫ್ ಅಧ್ಯಕ್ಷ ನಾಗರಾಜ್ ನಿರ್ಲಕ್ಷಿಸಿದ್ದಾರೆ. ಒಂದು ವೇಳೆ ನಾಗರಾಜ್ ಅಧ್ಯಕ್ಷ ಸ್ಥಾನ ಬಿಟ್ಟು ಕೊಡದಿದ್ದರೆ ಖಾಲಿ ಇರುವ ಸಚಿವ ಸ್ಥಾನವನ್ನು ಎಂ.ಪಿ ರವೀಂದ್ರ ಅವರಿಗೆ ನೀಡುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದ್ದಾರೆ ಎನ್ನಲಾಗುತ್ತಿದೆ.
ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ರವೀಂದ್ರ, ಅಧ್ಯಕ್ಷ ಸ್ಥಾನವನ್ನು ನೀಡುವಂತೆ ನಾಗರಾಜ್ಗೆ ಸೂಚಿಸಲು ಮನವಿ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗರಾಜ್ ಕೊಟ್ಟ ಮಾತು ತಪ್ಪುತ್ತಿದ್ದಾರೆ. ಅದನ್ನು ಮುಖ್ಯಮಂತ್ರಿ ಗಮನಕ್ಕೆ ತಂದಿದ್ದೇನೆ. ಅಧ್ಯಕ್ಷ ಸ್ಥಾನ ಬಿಟ್ಟುಕೊಡದಿದ್ದರೆ ಕಾನೂನು ರೀತಿಯ ಕ್ರಮ ಜರುಗಿಸುವ ಅನಿವಾರ್ಯವಾಗಿದೆ ಎಂದರು.
ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ಎಂ.ಪಿ ರವೀಂದ್ರ ಅವರಿಗೆ ಬಿಡಿಸಿಕೊಡುವಂತೆ ಡಿ.ಕೆ. ಶಿವಕುಮಾರ್ಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎನ್ನಲಾಗಿದ್ದು, ಶುಕ್ರವಾರ ಸಂಜೆಯೊಳಗೆ ಕೆಎಂಎಫ್ ಅಧ್ಯಕ್ಷ ಸ್ಥಾನ ಬಿಟ್ಟುಕೊಡಬೇಕೆಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಗಡುವು ನೀಡಿದ್ದರು. ಆದರೆ ಇದೇ ಕಾರಣದಿಂದ ಹಾಲಿ ಅಧ್ಯಕ್ಷ ನಾಗರಾಜ್ ಯಾರ ಕೈಗೂ ಸಿಗದೇ ತಲೆ ಮರೆಸಿಕೊಂಡು ಓಡಾಡುತ್ತಿದ್ದಾರೆ. ಕೆಎಂಎಫ್ ಕಚೇರಿಗೆ ಹಾಜರಾದರೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಕಚೇರಿಯ ಕಡೆಗೂ ಸುಳಿಯದೇ ಮೊಬೈಲ್ ನಾಟ್ ರೀಚೆಬಲ್ ಮಾಡಿಕೊಂಡು ಕಾಲ ತಳ್ಳುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಈ ಬೆಳವಣಿಗೆಯಿಂದ ಆಕ್ರೋಶಗೊಂಡ ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್, ನಾಗರಾಜ್ ಅವರನ್ನು ಕೆಎಂಎಫ್ ಅಧ್ಯಕ್ಷ ಗಾದಿಯಿಂದ ಪದಚ್ಯುತ ಗೊಳಿಸುವ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ. ಆದರೆ ನಾಗರಾಜ್ ಈಗ ಡಿ ಕೆ ಶಿವಕುಮಾರ್ ವಿರುದಟಛಿವೇ ತಿರುಗಿ ಬಿದ್ದಿದ್ದಾರೆ ಎನ್ನಲಾಗಿದೆ.
ಮೊದಲ 2 ವರ್ಷಗಳವರೆಗೆ ನಾಗರಾಜ್, 3 ವರ್ಷಗಳ ಅವಧಿಗೆ ಎಂ.ಪಿ. ರವೀಂದ್ರ ಕೆಎಂಎಫ್ ಅಧ್ಯಕ್ಷರಾಗಬೇಕೆಂದು ಡಿ.ಕೆ. ಶಿವಕುಮಾರ್ ಹಾಗೂ ಅಂದಿನ ಸಹಕಾರ ಸಚಿವ ಮಹದೇವ ಪ್ರಸಾದ್ ಸಮ್ಮುಖದಲ್ಲಿ ಒಪ್ಪಂದ ಏರ್ಪಟಿತ್ತು. ಸೆಪ್ಟೆಂಬರ್ನಲ್ಲೇ ಅವಧಿ ಮುಗಿದರೂ ನಾಗರಾಜ್ ರಾಜೀನಾಮೆ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ