ಟ್ರ್ಯಾಕ್ಟರ್ನಿಂದ ಬಿದ್ದು 2ವರ್ಷದ ಮಗು ಸಾವು
Team Udayavani, Jun 14, 2019, 1:09 PM IST
ಬೆಂಗಳೂರು: ಟ್ರ್ಯಾಕ್ಟರ್ನಿಂದ ಕೆಳಗೆ ಬಿದ್ದು ಎರಡು ವರ್ಷದ ಬಾಲಕ ಅಸುನೀಗಿದ ಘಟನೆ ಈಜಿಪುರ ಜಂಕ್ಷನ್ನಲ್ಲಿರುವ ರಕ್ಷಣಾ ಇಲಾಖೆ ಪ್ರದೇಶದ ಆವರಣದೊಳಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ರಕ್ಷಣಾ ಇಲಾಖೆ ಪ್ರದೇಶದಲ್ಲಿ ನಡೆಯುತ್ತಿರುವ ಕಟ್ಟಡ ನಿರ್ಮಾಣದ ಕಾರ್ಮಿಕ ಸುರೇಶ್ ಸಿಂಗ್ ಪತ್ನಿ ಯಶೋಧ ಪುತ್ರ ಯಶಪಾಲ ಸಿಂಗ್(2) ಮೃತ ಬಾಲಕ. ಕೂಲಿ ಕೆಲಸಕ್ಕಾಗಿ ನಗರಕ್ಕೆ ಆಗಮಿಸಿದ್ದ ರಾಜಸ್ಥಾನ ಮೂಲದ ದಂಪತಿ, ಎರಡು ವರ್ಷದ ಮಗನನ್ನು ಕಳೆದುಕೊಂಡು. ನೋವು ಮರೆಯಲು ಸ್ವಂತ ಊರಿಗೆ ತೆರಳಿದ್ದಾರೆ.
ಜೂನ್ 8ರಂದು ದಂಪತಿ ಎಂದಿನಂತೆ ಕಟ್ಟಡ ನಿರ್ಮಾಣ ಕೆಲಸಕ್ಕಾಗಿ ಶೆಡ್ನಿಂದ ಕೆಲಸದ ಸ್ಥಳಕ್ಕೆ ತೆರಳಲು ಟ್ರ್ಯಾಕ್ಟರ್ನಲ್ಲಿ ಕುಳಿತಿದ್ದರು. ಈ ವೇಳೆ ಯಶೋಧ ಮಗು ಯಶಪಾಲ್ನನ್ನು ಜತೆಗೆ ಕೂರಿಸಿಕೊಂಡಿದ್ದರು. ಈ ವೇಳೆ ಮಗು ಯಶಪಾಲ್ ಆಯತಪ್ಪಿ ಟ್ರ್ಯಾಕ್ಟರ್ನಿಂದ ಕೆಳಕ್ಕೆ ಬಿದ್ದಿದ್ದು ತಲೆಗೆ ಗಂಭೀರ ಪೆಟ್ಟಾಗಿದ್ದು ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ದಂಪತಿ ಕಟ್ಟಡ ನಿರ್ಮಾಣ ಹಂತದ ಕೆಲಸದಲ್ಲಿ ತೊಡಗಿದ್ದಾಗ ಮಗುವನ್ನು ಟ್ರ್ಯಾಕ್ಟರ್ ಡೈವರ್ ಸೀಟಿನ ಹಿಂಭಾಗವಿರುವ ಸೀಟ್ನಲ್ಲಿ ಕುಳ್ಳಿರಿಸಿದ್ದಾರೆ. ಮಗು ಕೆಲ ಸಮಯದ ಬಳಿಕ ಆಯ ತಪ್ಪಿ ಡಾಂಬರು ರಸ್ತೆಯ ಮೇಲೆ ಬಿದ್ದ ಪರಿಣಾಮ ತಲೆಗೆ ಪೆಟ್ಟಾಗಿದ್ದು ಚಿಕಿತ್ಸೆ ಫಲಿಸದೆ ಮೃತಪಟ್ಟಿದೆ. ಬಹುಶ: ಮಗು ನಿದ್ದೆ ಬಂದಾಂತಾಗಿ ಕೆಳಗೆ ಬಿದ್ದಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
ಸುರೇಶ್ ಸಿಂಗ್, ಕೆಲಸ ಮಾಡುವ ಸ್ಥಳದಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೆ ಮಗುವಿನ ಸಾವಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಬಿಲ್ಡಿಂಗ್ ಕಂಟ್ರಾಕ್ಟರ್ ಪಂಕಜ್ ಶೆಟ್ಟಿ ಹಾಗೂ ಕೂಲಿ ಕಾರ್ಮಿಕರ ಕಂಟ್ರಾಕ್ಟರ್ ಲಕ್ಷ್ಮಣ್ ಸಿಂಗ್ ವಿರುದ್ಧ ವಿವೇಕನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಅನ್ವಯ ಪಂಕಜ್ಶೆಟ್ಟಿ ಹಾಗೂ ಲಕ್ಷ್ಮಣ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ದಂಪತಿ ಇಬ್ಬರು ರಾಜಸ್ಥಾನಕ್ಕೆ ತೆರಳಿದ್ದು, ಅವರು ಬಂದ ಬಳಿಕ ಹೇಳಿಕೆ ದಾಖಲಿಸಿಕೊಳ್ಳಲಾಗುವುದು. ಸದ್ಯ, ತನಿಖೆ ಮುಂದುವರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ