![car](https://www.udayavani.com/wp-content/uploads/2024/07/car-7-415x248.jpg)
ಕುದಿಯುತ್ತಿದ್ದ ನೀರು ಬಿದ್ದು ಗಾಯಗೊಂಡ ಬಾಲೆ ಸಾವು
Team Udayavani, Feb 14, 2017, 11:46 AM IST
![bay-hot-watee.jpg](https://www.udayavani.com/wp-content/uploads/2017/02/14/bay-hot-watee.jpg)
ಬೆಂಗಳೂರು: ಬಿಸಿ ನೀರು ಇದ್ದ ಬಿಂದಿಗೆ ಮೇಲೆ ಆಯತಪ್ಪಿ ಬಿದ್ದು, ಸುಟ್ಟಗಾಯಗಳಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರು ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ನಗರದ ಹೊರ ವಲಯದ ಅಂದ್ರಹಳ್ಳಿಯ ತಿಮ್ಮರಾಜು ಮತ್ತು ಶಾರದಮ್ಮ ದಂಪತಿ ಪುತ್ರಿ ಭವ್ಯ ಮೃತ ಬಾಲಕಿ. ಫೆ.9 ರಂದು ಘಟನೆ ನಡೆದಿದ್ದು, ಬಾಲಕಿ ಭಾನುವಾರ ತಡರಾತ್ರಿ ಮೃತಪಟ್ಟಿದ್ದಾಗಿ ಬ್ಯಾಡರಹಳ್ಳಿ ಪೊಲೀಸರು ತಿಳಿಸಿದ್ದಾರೆ.
ಮೂಲತಃ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಕೋಣನಕುರಿಕೆ ಗ್ರಾಮದ ತಿಮ್ಮರಾಜು ಮತ್ತು ಶಾರದಮ್ಮ ದಂಪತಿ ಕೆಲ ವರ್ಷಗಳ ಹಿಂದೆ ಅಂದ್ರಹಳ್ಳಿಯಲ್ಲಿ ಬಂದು ನೆಲೆಸಿದ್ದಾರೆ. ತಿಮ್ಮರಾಜು ಕೂಲಿ ಕಾರ್ಮಿಕರಾಗಿದ್ದು, ಶಾರದಮ್ಮ ಮನೆಯಲ್ಲಿ ಇರುತ್ತಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದು, ಕಿರಿಯ ಮಗಳು ಭವ್ಯ ಅಂದ್ರಹಳ್ಳಿಯಲ್ಲಿರುವ ಖಾಸಗಿ ಶಾಲೆಯಲ್ಲಿ ಒಂದನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು.
ಕಳೆದ ಫೆ.9 ರಂದು ಶಾರದಮ್ಮ ಅವರು ತಾವು ಸ್ನಾನ ಮಾಡಲು ಬಿಂದಿಗೆಯಲ್ಲಿ ನೀರು ತುಂಬಿಸಿ “ಹೀಟರ್’ ಹಾಕಿದ್ದರು. ಸ್ನಾನ ಮಾಡಲು ಶಾಂಪೂ ಇಲ್ಲದ ಕಾರಣ ಮಧ್ಯಾಹ್ನ 3 ಗಂಟೆ ಸುಮಾರಿಗೆ ಶಾಂಪೂ ತರಲು ಅಂಗಡಿಗೆ ತೆರಳಿದ್ದರು. ಶಾಲೆ ಮುಗಿಸಿಕೊಂಡು ಬಂದಿದ್ದ ಮಗಳು ಭವ್ಯ ಮನೆಯಲ್ಲಿ ಇದ್ದಳು. ಮನೆಯಲ್ಲಿ ಆಟವಾಡಿಕೊಂಡಿದ್ದ ಭವ್ಯ ಆಯತಪ್ಪಿ ಬಿಂದಿಗೆ ಮೇಲೆ ಬಿದ್ದಿದ್ದಾಳೆ. ಈ ವೇಳೆ ಕೆಳಗೆ ಬಿದ್ದ ಭವ್ಯ ಮೇಲೆ ಬಿಂದಿಗೆ ಬಿದ್ದು, ಬಿಸಿ ನೀರು ಆಕೆಯ ಮೈ ಮೇಲೆ ಚೆಲ್ಲಿದೆ.
ಇದರಿಂದ ಬಾಲಕಿಯ ಎದೆ ಹಾಗೂ ಕಾಲಿನ ಭಾಗದಲ್ಲಿ ಸುಟ್ಟುಗಾಯಗಳಾಗಿತ್ತು. ಮನೆಗೆ ಬಂದ ಶಾರದಮ್ಮ ಕೂಡಲೇ ಪತಿಗೆ ವಿಷಯ ತಿಳಿಸಿ ಮಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಭವ್ಯಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ತಡ ರಾತ್ರಿ 3 ಗಂಟೆ ಸುಮಾರಿಗೆ ಬಾಲಕಿ ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
![car](https://www.udayavani.com/wp-content/uploads/2024/07/car-7-415x248.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![6-bng](https://www.udayavani.com/wp-content/uploads/2024/07/6-bng-1-150x90.jpg)
Bengaluru: ರೈಲ್ವೆ ನಿಲ್ದಾಣದಲ್ಲಿ ನಾಯಿ ಮಾಂಸ ಗಲಾಟೆ
![5-bng-crime](https://www.udayavani.com/wp-content/uploads/2024/07/5-bng-crime-1-150x90.jpg)
Bengaluru: ಬಾಡಿಗೆ ಮನೆಯಲಿದ್ದ ಗೆಳತಿಯನ್ನು ಪಿಜಿಗೆ ಕರೆತಂದಿದ್ದಕ್ಕೆ ಯುವತಿ ಹತ್ಯೆ?
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
MUST WATCH
ಹೊಸ ಸೇರ್ಪಡೆ
![car](https://www.udayavani.com/wp-content/uploads/2024/07/car-7-150x90.jpg)
Road Mishap: ಕಮರಿಗೆ ಉರುಳಿದ ಕಾರು… ಐದು ಮಕ್ಕಳು ಸೇರಿ ಎಂಟು ಮಂದಿ ಮೃತ್ಯು
![Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ](https://www.udayavani.com/wp-content/uploads/2024/07/Exam-9-150x84.jpg)
Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-150x83.jpg)
Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ
![ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!](https://www.udayavani.com/wp-content/uploads/2024/07/Dubai1-150x84.jpg)
ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!
![Screenshot (7) copy](https://www.udayavani.com/wp-content/uploads/2024/07/Screenshot-7-copy-150x83.jpg)
Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.