ಕಾಂಪೌಂಡ್ ಬಿದ್ದು ಇಬ್ಬರು ಕಾರ್ಮಿಕರ ಸಾವು
Team Udayavani, Apr 14, 2019, 3:00 AM IST
ಬೆಂಗಳೂರು: ಬಿಬಿಎಂಪಿಯ ರಾಜಕಾಲುವೆ ಕಾಮಗಾರಿ ವೇಳೆ ಪಕ್ಕದ ಅಪಾರ್ಟ್ಮೆಂಟ್ನ ಕಾಂಪೌಂಡ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪುಲಕೇಶಿನಗರ ಮುಖ್ಯರಸ್ತೆಯ ಸ್ಟಿಫನ್ ರಸ್ತೆಯಲ್ಲಿ ಶನಿವಾರ ಸಂಜೆ ನಡೆದಿದೆ.
ಪಶ್ಚಿಮ ಬಂಗಾಳ ಮೂಲದ ಸುದರ್ಶನ್ ಮತ್ತು ಸಬೀರ್ ಉಲ್ಲಾ(29) ಮೃತರು. ಗಂಭೀರವಾಗಿ ಗಾಯಗೊಂಡಿರುವ ಮತ್ತೂಬ್ಬ ಕಾರ್ಮಿಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪುಲಕೆಶಿನಗರದ ಸ್ಟಿಫನ್ ರಸ್ತೆಯಲ್ಲಿರುವ ರಾಜಕಾಲುವೆ ಕಾಮಗಾರಿ ನಡೆಯುತ್ತಿತ್ತು. ಪಶ್ಚಿಮ ಬಂಗಾಳ ಮೂಲದ ಹತ್ತುಕ್ಕೂ ಅಧಿಕ ಕಾರ್ಮಿಕರು ಕೆಲ ದಿನಗಳಿಂದ ಕಾಮಗಾರಿಯಲ್ಲಿ ತೊಡಗಿದ್ದರು. ಶನಿವಾರ ಸಂಜೆ ಆರು ಗಂಟೆ ಸುಮಾರಿಗೆ ಕಾಲುವೆಯ ಗೋಡೆ ನಿರ್ಮಿಸಲು ಜೆಸಿಬಿ ಮೂಲದ ಗುಂಡಿ ತೆಗೆಯಲಾಗುತ್ತಿತ್ತು.
ಈ ವೇಳೆ ಪಕ್ಕದಲ್ಲಿದ್ದ ಖಾಸಗಿ ಅಪಾರ್ಟ್ಮೆಂಟ್ನ ಹತ್ತು ಅಡಿ ಎತ್ತರದ ಕಾಂಪೌಂಡ್ ಗೋಡೆ ಬಿರುಕುಗೊಂಡಿದ್ದು, ಏಕಾಏಕಿ ಕಾರ್ಮಿಕರ ಮೇಲೆ ಕುಸಿದು ಬಿದ್ದಿದ್ದೆ. ಪರಿಣಾಮ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕರನ್ನು ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಸುದರ್ಶನ್ ಮಾರ್ಗಮಧ್ಯೆಯೇ ಮೃತಪಟ್ಟರೆ, ಸಬೀರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮತ್ತೂಬ್ಬನ ಸ್ಥಿತಿ ಗಂಭೀರವಾಗಿದೆ. ಇನ್ನುಳಿದ ಸುಮಾರು 8ಕ್ಕೂ ಅಧಿಕ ಕಾರ್ಮಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪುಲಕೇಶಿನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ