ಟೆಂಡರ್‌ ಕೊಡಿಸುವುದಾಗಿ ವಂಚಿಸಿದ ಮೂವರ ಬಂಧನ


Team Udayavani, Mar 17, 2019, 6:39 AM IST

tendart.jpg

ಬೆಂಗಳೂರು: ವಿಧಾನಸೌಧದಲ್ಲಿ ಫೋಟೋ ಮತ್ತು ವಿಡಿಯೋ ಚಿತ್ರೀಕರಣ ಮಾಡಲು ಟೆಂಡರ್‌ ಕೊಡಿಸುವುದಾಗಿ ಸ್ಟುಡಿಯೋ ಮಾಲೀಕರೊಬ್ಬರಿಗೆ 8.12 ಲಕ್ಷ ರೂ. ವಂಚಿಸಿದ ಒಂದೇ ಕುಟುಂಬದ ನಾಲ್ವರ ಪೈಕಿ ಮಹಿಳೆ ಸೇರಿ ಮೂವರು ಆರೋಪಿಗಳನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ 2ನೇ ಹಂತದ ನಿವಾಸಿಗಳಾದ ರಾಜೇಶ್‌ (56), ಆತನ ಪತ್ನಿ ಸತ್ಯಭಾಮಾ (46) ಮತ್ತು ದಂಪತಿ ಪುತ್ರ ಆರ್‌.ಅನುರಾಗ್‌ (27) ಬಂಧಿತರು.

ತಲೆಮರೆಸಿಕೊಂಡಿರುವ ದಂಪತಿಯ ಪುತ್ರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಆರೋಪಿ ರಾಜೇಶ್‌ ತಾನು ಕೇಂದ್ರ ಸರ್ಕಾರದ ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ಮುಖ್ಯ ಎಂಜಿನಿಯರ್‌ ಆಗಿದ್ದು, ಕೆಲ ಉದ್ಯಮಿಗಳಿಗೆ ವಿಧಾನಸೌಧದಲ್ಲಿ ವಿವಿಧ ಕಾಮಗಾರಿಗಳ ಟೆಂಟರ್‌ ಕೊಡಿಸುತ್ತೇನೆ. ಉದ್ಯೋಕಾಂಕ್ಷಿಗಳಿಗೆ ಉದ್ಯೋಗ ಕೊಡಿಸುತ್ತೇನೆ ಎಂದು ಹೇಳಿ ನಂಬಿಸುತ್ತಿದ್ದ. ನಂತರ ತನ್ನ ಬಾಡಿಗೆ ಮನೆಗೆ ಕರೆಸಿಕೊಂಡು, ಇದು ನಮ್ಮ ಸ್ವಂತ ಮನೆ ಎಂದು ಹೇಳಿ, ಲಕ್ಷಾಂತರ ರೂ. ಪಡೆಯುತ್ತಿದ್ದ.

ಕೊನೆಗೆ ಹಣ ನೀಡದೇ, ಟೆಂಡರ್‌ ಕೂಡ ಕೊಡಿಸದೇ ವಂಚಿಸುತ್ತಿದ್ದ. ಆತನ ಪುತ್ರ ಅನುರಾಗ್‌ ತಾನೊಬ್ಬ ಸಿನಿಮಾ ನಟ. ಸಿನಿಮಾ ನಿರ್ಮಾಣ ಮಾಡುತ್ತೇನೆ ಎಂದು ನಂಬಿಸಿ ವಂಚನೆ ಮಾಡುತ್ತಿದ್ದ. ಆರೋಪಿಗಳಿಂದ ವಂಚನೆಗೊಳಗಾದ 12ಕ್ಕೂ ಅಧಿಕ ಮಂದಿ ಈಗಾಗಲೇ ಬನಶಂಕರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಹೇಳಿದರು.

ಅನಾರೋಗ್ಯಕ್ಕೆ ಹಣ ವ್ಯಯ: ಕೆಲ ವರ್ಷಗಳಿಂದ ತನಗೆ ಕಿಡ್ನಿ ಸಮಸ್ಯೆಯಿದೆ. ಹಲವರ ಬಳಿ ಸಾಲ ಕೇಳಿದ್ದೆ. ಯಾರೂ ಕೊಡಲಿಲ್ಲ. ಆದರೆ, ನಾಲ್ಕೈದು ವರ್ಷಗಳ ಹಿಂದೆ ಒಬ್ಬ ವ್ಯಕ್ತಿಯ ಬಳಿ, “ನಾನು ಕೇಂದ್ರ ಸರ್ಕಾರದ ಸ್ಮಾರ್ಟ್‌ ಸಿಟಿ ಯೋಜನೆ ಮುಖ್ಯಸ್ಥ ವಿಧಾನಸೌಧದಲ್ಲಿ ವಿವಿಧ ಕಾಮಗಾರಿಗಳ ಟೆಂಡರ್‌ ಕೊಡಿಸುತ್ತೇನೆ’ ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದೆ.

ಆತ ಯಾವುದೇ ದಾಖಲೆ ಇಲ್ಲದೆ ಲಕ್ಷಾಂತರ ರೂ. ಹಣ ಕೊಟ್ಟಿದ್ದ. ನಂತರ ಇದನ್ನೇ ವೃತ್ತಿಯನ್ನಾಗಿಸಿಕೊಂಡು, ಪತ್ನಿ ಮತ್ತು ಮಕ್ಕಳನ್ನು ವಂಚನೆ ಕೃತ್ಯಗಳಿಗೆ ಬಳಕೆ ಮಾಡಿಕೊಂಡು ಹತ್ತಾರು ಮಂದಿಗೆ ವಂಚನೆ ಮಾಡಿದ್ದೇನೆ. ಬಂದ ಹಣದಲ್ಲಿ ಮಾಸಿಕ 60 ಸಾವಿರ ರೂ. ಚಿಕಿತ್ಸೆಗೆ ಖರ್ಚು ಮಾಡುತ್ತಿದ್ದೆ. 30 ಸಾವಿರ ರೂ. ಮನೆ ಬಾಡಿಗೆ ಹಾಗೂ ಇತರೆ ಕೆಲಸಕ್ಕೆ ಉಪಯೋಗಿಸಿಕೊಂಡಿದ್ದೇನೆ.

ಇದೀಗ ಸಾರ್ವಜನಿಕರಿಂದ ಪಡೆದ ಹಣವೆಲ್ಲ ಖರ್ಚಾಗಿದೆ. ಮೂರು ವರ್ಷಗಳ ಹಿಂದೆ ಬನಶಂಕರಿಯಲ್ಲಿ ಪುತ್ರ ಅನುರಾಗ್‌ ಹೆಸರಿನಲ್ಲಿ “ಅರ್ಥ್ ಸ್ಕೈ ಸ್ಟುಡಿಯೋ’ ಹಾಗೂ “ಗಣಪ ರಿಕ್ರಿಯೆಷನ್‌ ಪ್ರೈವೇಟ್‌ ಲಿ’ ಎಂಬ ಎರಡು ಕಚೇರಿಗಳನ್ನು ತೆರೆದಿದ್ದೇನೆ,’ ಎಂದು ರಾಜೇಶ್‌ ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವಂಚನೆ ಹಣದಲ್ಲಿ ಸಿನಿಮಾ: ವಂಚನೆ ಹಣದ ಪೈಕಿ ಸ್ವಲ್ಪ ಮೊತ್ತವನ್ನು ಆರೋಪಿಗಳು “6-ದಿ ಕೂಟ’ ಹೆಸರಿನ ಚಲನಚಿತ್ರ ನಿರ್ಮಿಸಲು ಬಳಸಿದ್ದಾರೆ. ಆರೋಪಿ ಅನುರಾಗ್‌ ಈ ಚಿತ್ರದಲ್ಲಿ ನಾಯಕನಾಗಿದ್ದು, ಆತನ ತಂದೆ ರಾಜೇಶ್‌ ನಿರ್ಮಾಪಕ.  ಈ ಹಿಂದೆ ಆರೋಪಿಗಳು ರಾಜರಾಜೇಶ್ವರಿ ನಗರದಲ್ಲಿ ವಾಸಿಸುತ್ತಿದ್ದರು. ಈ ವೇಳೆ ಆರೋಪಿ ಅನುರಾಗ್‌, ಗಾರ್ಮೆಂಟ್ಸ್‌ ನಡೆಸುತ್ತಿದ್ದ ತನ್ನ ಸ್ನೇಹಿತನ ತಂದೆಗೆ ಸರ್ಕಾರಿ ಶಾಲಾ ಮಕ್ಕಳ ಬ್ಯಾಗ್‌ ತಯಾರಿಸಲು ಟೆಂಡರ್‌ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂ. ಪಡೆದು ವಂಚಿಸಿದ್ದ.

ಆರೋಪಿಗಳು ಉದ್ಯಮಿಗಳು ಹಾಗೂ ಶ್ರೀಮಂತರು ಮಾತ್ರವಲ್ಲದೆ, ಕೆಲ ವರ್ಷಗಳ ಹಿಂದೆ ಎಸಿಪಿ ದರ್ಜೆಯ ಪೊಲೀಸ್‌ ಅಧಿಕಾರಿಯೊಬ್ಬರ ಸಂಬಂಧಿಗೂ ವಂಚನೆ ಮಾಡಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಆರೋಪಿಗಳನ್ನು ಪತ್ತೆ ಹಚ್ಚಿದ ಬನಶಂಕರಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಎಚ್‌.ಪಿ.ಪುಟ್ಟಸ್ವಾಮಿ ಮತ್ತು ತಂಡಕ್ಕೆ 10 ಸಾವಿರ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

ಸಾರ್ವಜನಿಕರು ದೂರು ನೀಡಿ: ಆರೋಪಿಗಳು 12 ಮಂದಿಗೆ ಮಾತ್ರವಲ್ಲದೆ, ಇತರರಿಗೂ ವಂಚನೆ ಮಾಡಿರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ವಂಚನೆಗೊಳಗಾಗಿರುವ ಸಾರ್ವಜನಿಕರು ನೇರವಾಗಿ ಬನಶಂಕರಿ ಪೊಲೀಸ್‌ ಠಾಣೆಗೆ ಭೇಟಿ ನೀಡಿ ದೂರು ನೀಡಬಹುದು. ಅಥವಾ ಠಾಣೆ ಇನ್ಸ್‌ಪೆಕ್ಟರ್‌ಗೆ ಮೊ: 94808 01527 ಕರೆ ಮಾಡಿ ಸಂಪರ್ಕಿಸಬಹುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.