ಬಾಲಕಿ ಸಾವಿನ ವರದಿ ಕೇಳಿದ ಗೃಹ ಇಲಾಖೆ
Team Udayavani, Mar 27, 2019, 11:43 AM IST
ಬೆಂಗಳೂರು: ಶಿವಾಜಿನಗರ ಪೊಲೀಸ್ ವಸತಿ ಗೃಹದಲ್ಲಿ ಮಾ. 5ರಂದು ಬೆಂಕಿ ಕೆಂಡ ತುಂಬಿಕೊಂಡಿದ್ದ ಕಸದ ಮೇಲೆಬಿದ್ದು ಗಂಭೀರವಾಗಿ ಗಾಯಗೊಂಡು ಮೂರು ವರ್ಷದ ಬಾಲಕಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆ ವರದಿ ಕೇಳಿದೆ.
ಪ್ರಕರಣದಲ್ಲಿ ಅಧಿಕಾರಿಗಳದ್ದು ಕರ್ತವ್ಯ ಲೋಪ ಇದೆಯೇ ಎಂಬುದರ ಬಗ್ಗೆ ಇದುವರೆಗಿನ ತನಿಖಾ ವರದಿಯನ್ನು ಸಲ್ಲಿಸುವಂತೆ ಗೃಹ ಇಲಾಖೆ ನಗರ ಪೊಲೀಸರಿಗೆ ಸೂಚನೆ ನೀಡಿದ್ದು, ಮಾಹಿತಿ ಪಡೆದುಕೊಂಡಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಗೃಹ ಸಚಿವ ಎಂ.ಬಿ ಪಾಟೀಲ್, ಈ ಬಗ್ಗೆ ಖುದ್ದು ವರದಿ ಕೇಳಿದ್ದು. ಈ ನಿಟ್ಟಿನಲ್ಲಿ ಗೃಹ ಇಲಾಖೆ ಮಾಹಿತಿ ಸಂಗ್ರಹಿಸಿದೆ ಎಂದು ತಿಳಿದುಬಂದಿದೆ.
ಮತ್ತೂಂದೆಡೆ ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಸೂಚನೆಯಂತೆ ಪೂರ್ವ ವಿಭಾಗದ ಡಿಸಿಪಿ ರಾಹುಲ್ಕುಮಾರ್ ಶಹಾಪುರವಾಡ್ ತನಿಖೆ ಮುಂದುವರಿಸಿದ್ದಾರೆ. ಮೃತ ಬಾಲಕಿ ಹರ್ಷಾಲಿ ತಂದೆ ಲೋಕೇಶಪ್ಪ ಅವರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ತನಿಖಾ ತಂಡದ ಪೊಲೀಸರು ಶಿವಾಜಿನಗರ ಪೊಲೀಸ್ ವಸತಿ ಗೃಹಕ್ಕೆ ಭೇಟಿ ನೀಡಿದ್ದು, ಘಟನಾ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ.
ಆಘಾತದಿಂದ ಚೇತರಿಸಿಕೊಳ್ಳದ ತಾಯಿ: “ಉದಯವಾಣಿ’ ಜತೆ ಮಾತನಾಡಿದ ಹರ್ಷಾಲಿ ತಂದೆ ಲೋಕೇಶಪ್ಪ, ಮಗಳ ದುರಂತ ಸಾವಿನ ಆಘಾತದಿಂದ ಪತ್ನಿ ಇನ್ನೂ ಹೊರಬಂದಿಲ್ಲ. ಅದೇ ನೋವಿನಲ್ಲಿದ್ದೇವೆ. ಕರ್ತವ್ಯಕ್ಕೆ ಹಾಜರಾದ ಬಳಿಕ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಘಟನೆ ಬಗ್ಗೆ ಮಾಹಿತಿ ನೀಡುವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…